TOP STORIES:

ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕು: ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಮನವಿ


ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ರವರನ್ನು ಮೂಲ್ಕಿ- ಮೂಡುಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ, ಪುತ್ತೂರು ಶಾಸಕರಾದ ಸಂಜೀವ ಮಟಂದೂರು, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹಾಗೂ ಶಾಂತಾರಾಮ‌ ಸಿದ್ದಿ ಉಪಸ್ಥಿತರಿದ್ದರು.

ನಮ್ಮ ದೇಶದಲ್ಲಿನ ಬಹುತೇಕ ರಾಜ್ಯಗಳಲ್ಲಿ ತಮ್ಮ ತಮ್ಮ ರಾಜ್ಯದಲ್ಲಿನ ಉತ್ತಮ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಭಾಷೆಗಳನ್ನು ರಾಜ್ಯದ ಅದಿಕೃತ ಭಾಷೆಯನ್ನಾಗಿ ಸಂವಿಧಾನದ ಆರ್ಟಿಕಲ್ 345- ಬಿ ಪ್ರಕಾರ ಘೋಷಿಸಿಕೊಂಡಿದೆ. ಕಳೆದ 2011ನೇ ಜನಗಣತಿ ಪ್ರಕಾರ ಸುಮಾರು18.05 ಲಕ್ಷ ಜನರು ಅದೀಕೃತವಾಗಿ ತುಳು ಭಾಷೆಯನ್ನು ಮಾತನಾಡುತ್ತಾರೆ.

ಕರ್ನಾಟಕ ತುಳು ಆಕಾಡೆಮಿ ಹಾಗೂ ತುಳು ಸಂಘ ಸಂಸ್ಥೆಗಳ ಪ್ರಕಾರ ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಸರಿ ಸುಮಾರು 40 ಲಕ್ಷಕ್ಕೂ ಅಧಿಕ ತುಳು ಭಾಷಿಕರಿದ್ದು ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸುಮಾರು ಒಂದುವರೆ ಕೋಟಿಗಿಂತಲೂ ಅದಿಕ ತುಳು ಭಾಷಿಕರಿರುವುದನ್ನು ಗುರುತಿಸಲಾಗಿರುತ್ತದೆ.

ತಮ್ಮ ಅವಗಾಹಣೆಗಾಗಿ ಸಲ್ಲಿಸಿರುವ ಮಾಹಿತಿಗಳನ್ನು ಅವಲೋಕಿಸಿ ಸಕಾಲದಲ್ಲಿ ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆ ಎಂದು ಸಂವಿಧಾನದ ಆರ್ಟಿಕಲ್ 345 ರ ಪ್ರಕಾರ ಘೋಷಿಸಲು ರಾಜ್ಯ ಸರ್ಕಾರವು ಅನುಸರಿಸಬೇಕಾದ ಮತ್ತು ಈಗಾಗಲೇ ಈ ಕುರಿತಾಗಿ ಕೈಗೊಂಡ ಕ್ರಮಗಳೊಂದಿಗೆ ಸಾಂವಿಧಾನಿಕ ನೀತಿ ನಿಯಮಗಳ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದವರು‌ ಅನುಮೋದನೆಯನ್ನು ನೀಡುವಂತೆ ಆಗ್ರಹಿಸುವುದರ ಮೂಲಕ ತುಳುನಾಡಿನ ಸಮಸ್ತರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಬೇಕೆಂದು ಕರಾವಳಿ ಜಿಲ್ಲೆಯ ಶಾಸಕರುಗಳೆಲ್ಲರೂ ತಮ್ಮಲ್ಲಿ ವಿಜ್ಞಾಪಿಸಿಕೊಳ್ಳುತ್ತೇವೆ.

ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಕುರಿತಾದ ಸಾಂವಿಧಾನಿಕ ಕಾನೂನುಗಳ ಪ್ರಕಾರ ಪ್ರಾಸ್ಥಾವನೆಯನ್ನು ಮಂಡಿಸಿ ಅನುಮೋದನೆಯನ್ನು ಪಡೆದು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಮತ್ತು ಅಲ್ಲಿಂದ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಕ್ರಮಗಳನ್ನು ಅತ್ಯಗತ್ಯವಾಗಿ ಕೈಗೊಳ್ಳಬೇಕಾಗಿ ಸಿಎಂ ಯಡಿಯೂರಪ್ಪ ನವರಲ್ಲಿ ವಿನಂತಿಸಿಕೊಳ್ಳಲಾಗಿದೆ


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »