TOP STORIES:

FOLLOW US

ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ


ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ

ಕರ್ನಾಟಕ ಸರಕಾರ ಧಾರ್ಮಿಕ ದತ್ತಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿನ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ ,ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 2020-21 ಸಾಲಿನ ಅನುದಾನ ಬಿಡುಗಡೆ ಮಾಡಿದೆ.(ಅದೇಶ ಸಂಖ್ಯೆ; ಕಂಇ 38,ಮುಅಬಿ 2020)
ಇದು ಸ್ವಾಗತಾರ್ಹ.ಒಂದೂರಿನ ಧಾರ್ಮಿಕ ಸ್ಥಳಗಳು ಅಭಿವೃದ್ಧಿಯಾದಲ್ಲಿ ಅದು ಊರಿನ ಪ್ರಗತಿಯ ಸಂಕೇತವೆ ಸರಿ.ಆದರೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋಟಿ ಚೆನ್ನಯರನ್ನು ಆರಾಧನೆ ಮಾಡುವ ಗರೋಡಿಗಳ ಸಂಖ್ಯೆ ದೊಡ್ಡದಾಗಿದ್ದು ಇದರಲ್ಲಿ ಅನೇಕ ಗರೋಡಿಗಳು ಅಜೀರ್ಣಾವಸ್ಥೆಯಲ್ಲಿದೆ.ಸರ್ಕಾರದ ಈ ವರ್ಷದ ಅನುದಾನ ಪಟ್ಟಿಯಲ್ಲಿ ಮೂಡಬಿದ್ರೆ ಭಾಗದ ಕೇವಲ ಒಂದು ಗರೋಡಿಗೆ ಐದು ಲಕ್ಷ ರೂಪಾಯಿ ಅನುದಾನ ಘೋಷಿಸಿದ್ದು ಬಿಟ್ಟರೆ ಬೇರೆ ಯಾವ ಗರೋಡಿಗೂ ಏನೂ ಇಲ್ಲ.ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರದೇ ಇರುವ ಇತರ ದೈವಸ್ಥಾನ,ಮಠ,ಮಂದಿರಗಳಿಗೆ ಅನುದಾನ ನೀಡಬಹುದಾದರೆ ಗರೋಡಿಯ ನಿರ್ಲಕ್ಷ್ಯ ಯಾಕೆ..? 436 ಧಾರ್ಮಿಕ ಸ್ಥಳಗಳಿಗೆ 800 ಲಕ್ಷ ನೀಡಿರುವುದಕ್ಕೆ ಅಕ್ಷೇಪವಲ್ಲ.ಇದರಲ್ಲಿ ಗರೋಡಿ ಮಾತ್ರ ನಿಮಗೆ ಹೊರತಾಯಿತೆ..?
ಗರೋಡಿ ಈ ಭಾಗದ ಜನರ ನಂಬಿಕೆ ಮತ್ತು ಆರಾಧನೆಯ ಪ್ರತೀಕ.ಈ ಕ್ಷೇತ್ರಕ್ಕೆ ಮಹತ್ವಪೂರ್ಣ ಹಿನ್ನೆಲೆಯಿದೆ.ಯಾವುದೇ ರಾಜಕೀಯ ಪಕ್ಷವಾಗಲಿ,ಜನಪ್ರತಿನಿಧಿಗಳಾಗಲಿ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೋಟಿ ಚೆನ್ನಯರು,ಹಾಗೂ ಬಿಲ್ಲವ ಸಮಾಜದ ಕುರಿತು ಉಲ್ಲೇಖ ಮಾಡಿ ವೋಟ್‌ಬ್ಯಾಂಕ್‌ಗೋಸ್ಕರ ನಡೆಯುವ ಗಿಮಿಕ್‌ಗಳು ಇನ್ನಾದರೂ ನಿಲ್ಲಬೇಕು.ಸಾಮರಸ್ಯ ಮತ್ತು ಸತ್ಯದ ಪ್ರತೀಕವಾದ ಎಲ್ಲಾ ಗರೋಡಿಗಳ ಅಭಿವೃದ್ಧಿಗೆ ಮತ್ತು ವಾರ್ಷಿಕ ಆರಾಧನ ಕಾರ್ಯಕ್ರಮಗಳಿಗೆ ಅನುದಾನ ಘೋಷಿಸಬೇಕು‌.ಮತ್ತು ಯಾವ ಗರೋಡಿಗಳ ಸ್ಥಳದ ಕುರಿತಾಗಿ ತಕರಾರುಗಳಿದೆಯೋ ಅದೆಲ್ಲದಕ್ಕೂ ಸಂಬಂಧಿಸಿ ಗ್ರಾಮದ ಹತ್ತು ಸಮಸ್ತರ ಆಡಳಿತ ಮಂಡಳಿಯ ತೀರ್ಮಾನಕ್ಕೆ ಆದ್ಯತೆಯ ನಿಯಮಗಳನ್ನು ರೂಪಿಸಬೇಕು.ಈಗ ಧಾರ್ಮಿಕ ಮಂತ್ರಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗರೋಡಿಯ ಹಿನ್ನೆಲೆ ,ಅಲ್ಲಿನ ಅದಾಯ ಪರಿಸ್ಥಿತಿ,ಅಜೀರ್ಣಾವಸ್ಥೆ ,ಸ್ವಂತ ಸ್ಥಳದ ಸಮಸ್ಯೆ ಇವೆಲ್ಲವೂ ಖುದ್ದು ತಿಳಿದಿದ್ದು ಅದರೂ ಸರ್ಕಾರ ಈ ಮಟ್ಟದಲ್ಲಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ.ಯಾವುದೇ ಸರ್ಕಾರವಾಗಲಿ ಪುಣ್ಯಪುರುಷರು ನೆಲೆಸಿದ ಗರೋಡಿಗೆ ಅನುದಾನವನ್ನು ನೀಡಲೇ ಬೇಕೆಂಬುದು ನಮ್ಮ ಒತ್ತಾಯವಾಗಿದೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ (ರಿ)


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »