TOP STORIES:

ತುಳುವಿನಲ್ಲೂ ಸೈ ಎನಿಸಿಕೊಂಡ ’ಕೊಂಕಣಿ ಕೋಮೆಡಿ ಪ್ರಿನ್ಸ್’ ಪ್ರದೀಪ್ ಬಾರ್ಬೋಜಾ


ಮಹೇಶ್, ಅಕಾಶ್ ಭವನ್

ಮಂಗಳೂರು: ಕಳೆದ ವರ್ಷಾಂತ್ಯಕ್ಕೆ ಕರಾವಳಿಯ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡ ಸೋಡಾ ಶರ್ಬತ್ ಹೊಸ ವರ್ಷದ ಶುಭಾರಂಭದಲ್ಲೂ ತನ್ನ ಜೈತ್ರಯಾತ್ರೆಯನ್ನು ಮುಂದುವರೆಸಿದೆ. ಬಹಳ ಸಮಯದ ನಂತರ ಉತ್ತಮ ಕಥಾಹಂದರವನ್ನು ಹೊಂದಿದ ಚಿತ್ರವೊಂದು ಬಿಡುಗಡೆಯಾದದ್ದು ಸಿನಿಪ್ರಿಯರನ್ನು ಚಿತ್ರಮಂದಿರಗಳಿಗೆ ಆಕರ್ಷಿಸುವಂತೆ ಮಾಡಿದೆ. ಇದಕ್ಕಿಂತಲೂ ಮಿಗಿಲಾಗಿ ಸೋಡಾ ಶರ್ಬತ್ ಚಿತ್ರದ ಮೂಲಕ ತುಳು ಚಿತ್ರರಂಗಕ್ಕೆ ಪ್ರತಿಭಾವಂತ ನಿರ್ದೇಶಕ ಹಾಗೂ ನಟನೋರ್ವನ ಪ್ರವೇಶವಾಗಿದೆ ಎಂದು ಪ್ರೇಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಮೂಡಬಿದಿರೆ ಸಮೀಪದ ಪಾಲಡ್ಕ ನಿವಾಸಿಯಾದ ಪ್ರದೀಪ್ ಬರ್ಬೋಜಾ ಉಧ್ಯೋಗ ನಿಮಿತ್ತ ಕಳೆದ ಹದಿನೈದು ವರ್ಷಗಳಿಂದ ಯುಎಇಯಲ್ಲಿ ವಾಸವಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ನಾಟಕ ರಚನೆ ಹಾಗೂ ಅಭಿನಯದ ಗೀಳು ಹಚ್ಚಿಸಿಕೊಂಡ ಪ್ರದೀಪ್ ಮೂಡಬಿದ್ರೆ ಪರಿಸರದ ಸಾಂಸ್ಕೃತಿಕ ರಂಗದಲ್ಲಿ ಅತೀ ಕಿರಿವಯಸ್ಸಿನಲ್ಲಿಯೇ ವಿಶೇಷ ಸದ್ದು ಮಾಡಿದ್ದರು. ಅವರು ಬರೆದು ನಿರ್ದೇಶಿಸಿದ ತುಳು ನಾಟಕ ’ಬಂಡಲ್ ಭಾಸ್ಕರೆ’ ವಿಶೇಷ ಜನಮನ್ನಣೆಗೆ ಪಾತ್ರವಾಗಿತ್ತು. ಯುಎಇಗೆ ತಲುಪಿದ ನಂತರ ಅಲ್ಲೂ ನಾಟಕ ರಂಗದಲ್ಲಿ ಸಕ್ರೀಯವಾಗಿದ್ದ ಪ್ರದೀಪ್ ಹಲವಾರು ಕೊಂಕಣಿ ನಾಟಕಗಳನ್ನು ರಚಿಸಿ ನಿರ್ದೇಶಿದ್ದಾರೆ. ವಿದೇಶದಲ್ಲಿ ನೂರಕ್ಕಿಂತಲೂ ಹೊಸ ಕಲಾವಿದರಿಗೆ ರಂಗಕಲೆಯ ಬಗ್ಗೆ ತರಬೇತಿಯನ್ನಿತ್ತು ರಂಗಭೂಮಿಯಲ್ಲಿ ನಂತರ ಸೀರಿಯಲ್/ಸಿನೆಮಾ ಕ್ಷೇತ್ರದಲ್ಲಿ ಮಿಂಚುವಂತೆ ಮಾಡಿದ ಕೀರ್ತಿ ಪ್ರದೀಪ್ ಅವರಿಗೆ ಸಲ್ಲುತ್ತದೆ.

ಈ ಮಧ್ಯೆ 2016ರಲ್ಲಿ ’ಏಕ್ ಅಸ್ಲ್ಯಾರ್ ಏಕ್ ನಾ’ ಎಂಬ ಕೊಂಕಣಿ ಸಿನೆಮಾವನ್ನು ನಿರ್ದೇಶಿಸಿ ಅಧಿಕೃತವಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಪ್ರದೀಪ್ ಅವರ ಮೊದಲ ಕೊಂಕಣಿ ಸಿನೆಮಾವು ಕೊಂಕಣಿ ಚಿತ್ರರಂಗದ ಅಯಾಮನ್ನೇ ಬದಲಿಸಿತು ಎಂದು ಹೇಳಬಹುದು. ನಾಟಕ ಹಾಗೂ ನಾಟಕೀಯತೆಯನ್ನು ಚಿತ್ರೀಕರಣ ಮಾಡಿ ಸಿನೆಮಾ ಎಂದು ತೋರಿಸುತ್ತಿದ್ದ ಕೊಂಕಣಿ ಜಗತ್ತಿನಲ್ಲಿ ಪ್ರದೀಪ್ ಅವರ ’ಏಕ್ ಅಸ್ಲ್ಯಾರ್ ಏಕ್ ನಾ’ ನೈಜ ಸಿನೆಮಾದತ್ತ ಮುಖಮಾಡುವಂತೆ ಮಾಡಿತು. ಕೊಂಕಣಿ ಮೂಲಭಾಷೆಯಾಗಿದ್ದುಕೊಂಡು ತುಳು-ಕನ್ನಡ ಚಿತ್ರರಂಗಲ್ಲಿ ನಟರೆನಿಸಿಕೊಂಡ ಹೆಚ್ಚಿನ ಮುಖಗಳು ಪ್ರದೀಪ್ ಬಾರ್ಬೋಜಾ ಅವರ ಕೈಕೆಳಗೆ ಪಳಗಿದವರೇ.

ಕೊಂಕಣಿ ಚಿತ್ರದ ನಂತರ ಕೆಲ ಕನ್ನಡ-ತುಳು ಚಿತ್ರಗಳಲ್ಲಿ ನಟಿಸಿದ ಪ್ರದೀಪ್ ಅವರಿಗೆ ತುಳುವಿನಲ್ಲಿ ಚಿತ್ರವೊಂದನ್ನು ನಿರ್ದೇಶಿಸುವ ಕನಸಿತ್ತು. ಇದೀಗ ಸೋಡಾ ಶರ್ಬತ್ ಮೂಲಕ ಈ ಕನಸು ಈಡೇರಿದಂತಾಗಿದೆ. ಚಿತ್ರದುದ್ದಕ್ಕೂ ತನ್ನ ವಿಭಿನ್ನ ಶೈಲಿಯ ನಟನೆಯೊಂದಿಗೆ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡ ಪ್ರದೀಪ್ ತುಳು ಚಿತ್ರರಂಗದಲ್ಲೂ ಸೈ ಎನಿಸಿಕೊಂಡಿದ್ದಾರೆ. ಸದಭಿರುಚಿಯ ಚಿತ್ರಗಳ ಕೊರತೆ ಎದ್ದು ಕಾಣುತ್ತಿದ್ದ ಸಂದರ್ಭದಲ್ಲಿ ಪ್ರದೀಪ್ ಅವರು ಇಡೀ ಸಮಾಜೆವೇ ಚರ್ಚಿಸುವಂತಹ ಸಿನೆಮಾವೊಂದನ್ನು ಮಾಡಿ ತನ್ನ ಚಾಕಚಕ್ಯತೆ ಮೆರೆದಿದ್ದಾರೆ. ಪಾಲಡ್ಕ ಎಂಬ ಪುಟ್ಟ ಹಳ್ಳಿಯಿಂದ ಬಂದ ಪ್ರತಿಭೆ ಮುಂದೊಂದು ದಿನ ತುಳು ಚಿತ್ರರಂಗದಲ್ಲಿ ಇಷ್ಟೊಂದು ಅಬ್ಬರದ ಎಂಟ್ರಿ ಕೊಡಬಹುದು ಎಂದು ಯಾರೂ ನಂಬಿರಲಿಕ್ಕಿಲ್ಲ. ಆದರೆ ಛಲವಾದಿಯಾದ ಪ್ರದೀಪ್ ಅದನ್ನು ಮಾಡಿ ತೋರಿಸಿದ್ದಾರೆ. ಸೋಡಾ ಶರ್ಬತಿನ ಗೆಲುವು ಪ್ರದೀಪ್ ಹಾಗೂ ತಂಡಕ್ಕೆ ಮಾತ್ರವಲ್ಲದೆ ತುಳುಚಿತ್ರರಂಗಕ್ಕೂ ದಕ್ಕಿದ ಗೆಲುವಾಗಿದೆ. ಮೊದಲ ಪ್ರಯತ್ನದಲ್ಲೇ ತುಳು ಸಿನಿಪ್ರಿಯರ ಹೃದಯಗಳನ್ನು ಗೆದ್ದ ಪ್ರದೀಪ್ ಅವರಿಂದ ಇನ್ನೂ ಹೆಚ್ಚಿನ ಚಿತ್ರಗಳು ಮೂಡಿಬರಲಿ ಎಂದು ಆಶಿಸೋಣ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »