TOP STORIES:

ದ.ಕ. ಜಿಲ್ಲಾ ಯುವವಾಹಿನಿ ಕೊಲ್ಯ ಘಟಕದಿಂದ ಬ್ರಹ್ಮ ಶ್ರೀ ನಾರಾಯಣ ಗುರು ಮಹಾಸಮಾಧಿಯ ಪುಣ್ಯದಿನ ಆಚರಣೆ


ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ, ಸೋಮೇಶ್ವರ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೊಲ್ಯ ಘಟಕ ಇದರ ವತಿಯಿಂದ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಲೋಕ ಮುಖಕ್ಕೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪುಣ್ಯ ದಿನದ ಅಂಗವಾಗಿ ವಿಶೇಷ ಭಜನಾ ಸೇವೆ ಹಾಗೂ ವಿಶೇಷ ಮಹಾಪೂಜೆ ಯು ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಇಲ್ಲಿ ನೆರವೇರಿತು.

ಯುವವಾಹಿನಿ (ರಿ.)ಕೊಲ್ಯ ಘಟಕವು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 167 ನೇ ಜನ್ಮ ಜಯಂತಿಯ ಅಂಗವಾಗಿ ಅಂತರ್ಜಾಲದಲ್ಲಿ ಏಪರ್ಡಿಸಿದ ಗುರುಶ್ಲೋಕ ಕಂಠಪಾಠ,ಗಾಯನ ಸ್ಪರ್ಧೆ “ಶ್ರೀ ಗುರುಶೃತಿ-2021” ಇದರ ಬಹುಮಾನ ವಿತರಣಾ ಸಮಾರಂಭವು ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.

ಸಭಾಕಾರ್ಯಕ್ರಮ ವನ್ನು ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಇವರು ಉದ್ಘಾಟಿಸಿ ಮಾತನಾಡಿದರು ಹಾಗೂ ಸಭಾಧ್ಯಕ್ಷತೆಯನ್ನು ಯುವವಾಹಿನಿ(ರಿ.)ಕೊಲ್ಯ ಘಟಕದ ಅಧ್ಯಕ್ಷರಾದ ಮೋಹನ್ ಮಾಡೂರು ವಹಿಸಿದ್ದರು.

ಯುವವಾಹಿನಿ(ರಿ.)ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಜಗದೀಶ್ಚಂದ್ರ ಡಿ.ಕೆ ಮೂಡುಬಿದಿರೆ ಮತ್ತು ಯುವಸಿಂಚನ ಪತ್ರಿಕೆಯ ಸಂಪಾದಕ ದೇವರಾಜ್ ಅಮೀನ್ ಬಜ್ಪೆ ಅತಿಥಿಗಳಾಗಿ ಭಾಗವಹಿಸಿದ್ದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಆನಂದ ಮಲಯಾಳಕೋಡಿ, ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ನ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ, ಸಮಿತಿಯ ಅಧ್ಯಕ್ಷರು ಪದ್ಮನಾಭ ಕೊಲ್ಯ,ಯುವವಾಹಿನಿ ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಶ್ರೀಮತಿ ಅರ್ಚನಾ.ಎಂ.ಬಂಗೇರ, ನಾರಾಯಣ ಗುರು ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಕುಸುಮ ಭರತ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

“ಗುರುಶೃತಿ-2021” ಸ್ಪರ್ಧೆಯು ಕ್ರಮವಾಗಿ ಮೂರು ವಿಭಾಗಗಳಲ್ಲಿ ಆಯೋಜನೆಗೊಂಡಿದ್ದು ವಿವಿಧ ಸಮಾಜದ ಬಂಧುಗಳು ಜಾತಿ ಮತ ಭೇದವಿಲ್ಲದೆ ಭಾಗವಹಿಸಿ, ದೂರದ ಊರು ಶಿವಮೊಗ್ಗ, ವಿರಾಜ್ ಪೇಟೆ ಹಾಗೂ ನಮ್ಮೂರಿನ ಪ್ರತಿಭೆಗಳು ಈ ಸ್ಪರ್ಧೆಯಲ್ಲಿ ಬಹುಮಾನವನ್ನು ತಮ್ಮದಾಗಿಸಿಕೊಂಡಿರುವರು.

ಸ್ಪರ್ಧೆಯಲ್ಲಿ ನ್ಯಾಯಯುತ ತೀರ್ಪು ನೀಡಿ ಸಹಕರಿಸಿದ ಯುವ ಸಾಹಿತಿ ಡಾ.ಅರುಣ್ ಉಳ್ಳಾಲ್ ಮತ್ತು ಶಿಕ್ಷಕಿ,ಸಾಹಿತಿ ವಿಜಯಲಕ್ಷ್ಮಿ ಕಟೀಲು ಹಾಗೂ ಸಾಹಿತಿ ರಮಾನಾಥ ಕೋಟೆಕಾರು ಇವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ಹಲವು ವರ್ಷಗಳಿಂದ ಮಂದಿರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಪೂಜಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಿಸ್ವಾರ್ಥ ಸೇವೆಗೈಯ್ಯುತ್ತಿರುವ ಪುರುಷೋತ್ತಮ ಅಡ್ಕ,,,ಗೋಪಾಲ ಕೊಂಡಾಣ ಹಾಗೂ ಮಾಧವ ಪರ್ಯತ್ತೂರು ಇವರನ್ನು ಗುರುತಿಸಿ ವೇದಿಕೆಯಲ್ಲಿ ಗಣ್ಯರ ಸಮಕ್ಷಮದಲ್ಲಿ ಘಟಕದ ವತಿಯಿಂದ ಗೌರವಿಸಲಾಯಿತು.

ಶ್ರೀಮತಿ ವತ್ಸಲಾ ರಘುರಾಮ್ ಶ್ರೀಮತಿ ವಿನುತ ಬಾಲಕೃಷ್ಣ ಪ್ರಾರ್ಥಿಸಿದರು. ಉಪಾಧ್ಯಕ್ಷರಾದ ಸುಂದರ ಸುವರ್ಣ ಸ್ವಾಗತಿಸಿ,ಪ್ರಾಸ್ತಾವಿಸಿದರು.
ಕಾರ್ಯದರ್ಶಿ ಶಿರಲ್ ಕೊಲ್ಯ ವಂದಿಸಿದರು.ಸುಧಾ ಸುರೇಶ್ ಕೊಲ್ಯ,ಲತೀಶ್ ಎಂ.ಸಂಕೊಳಿಗೆ,ಸೌಮ್ಯ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »