TOP STORIES:

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಕ, ಬಡವರ ಬಂಧು ಶ್ರೀ ಪಿ. ಸೇಸಪ್ಪ ಟೈಲರ್ ಆಯ್ಕೆ


2020-21ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಜೀವನವನ್ನೇ ಸಮಾಜ ಸೇವೆಗೆ ಸಮರ್ಪಿಸಿರುವ ಸಮಾಜ ಸೇವಕ, ಬಡವರ ಬಂಧು ಅಜಾತ ಶತ್ರು ಶ್ರೀ ಪಿ. ಸೇಸಪ್ಪ ಟೈಲರ್ ಸುದರ್ಶನ ನಗರ ಪಜೀರು ಇವರಿಗೆ ತುಂಬು ಹೃದಯದ ಅಭಿನಂದನೆಗಳು.

ಶ್ರೀ ಸೇಸಪ್ಪ ಪೂಜಾರಿಯವರ ಜೀವನ ಪರಿಚಯ

ದಿ| ಗುರುವ ಪೂಜಾರಿ ಹಾಗೂ ಶ್ರೀಮತಿ ಗಂಗಾ ಪೂಜಾರ್ತಿ ದಂಪತಿಗಳಿಗೆ ಮೂರನೇ ಮಗನಾಗಿ ಪಜೀರು ಗ್ರಾಮದ ತಂಜರೆ ಎಂಬಲ್ಲಿ ಜನಿಸಿದ ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ, ಪಜೀರು ಇಲ್ಲಿ ಪೂರೈಸಿರುತ್ತಾರೆ. ಕಾರಣಾಂತರಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದೆ ಟೈಲರಿಂಗ್ ವೃತ್ತಿಯನ್ನು ಪ್ರಾರಂಭಿಸಿದರು. ವೃತ್ತಿಯಲ್ಲಿ ಟೈಲರ್ ಆಗಿದ್ದರೂ, ತಾವು ಪ್ರವೃತ್ತಿಯಲ್ಲಿ ರಾಜಕೀಯ ಮತ್ತು ಸಾಮಾಜಿಕ ಕಾರ್ಯವನ್ನು ಮಾಡಿರುತ್ತಾರೆ.

‌ಶ್ರೀ ಕೃಷ್ಣ ಭಜನಾ ಮಂದಿರ, ಪಜೀರು ಇದರ ಸ್ಥಾಪಕ ಸದಸ್ಯರಾಗಿ, ಕಾರ್ಯದರ್ಶಿಯಾಗಿ ಹಾಗೂ ನೂತನ ಕಟ್ಟಡದ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿ, ಮಂದಿರದ ಜೀರ್ಣೋದ್ಧಾರಕ್ಕೆ ಅವಿರತವಾಗಿ ಶ್ರಮ ಪಟ್ಟಿರುತ್ತಾರೆ. ‘ಶ್ರೀ ನಾರಾಯಣಗುರು ಸೇವಾ ಸಂಘ, ಗ್ರಾಮಛಾವಡಿ’ ಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿಯೂ ಅನನ್ಯ ಸೇವೆ ಸಲ್ಲಿಸಿದ ಇವರು, ಮಂದಿರದ ಸದಸ್ಯರು ಹಾಗೂ ಊರವರ ಸಹಕಾರದೊಂದಿಗೆ ನಾರಾಯಣಗುರು ಮಂದಿರವನ್ನು ನಿರ್ಮಿಸುವಲ್ಲಿ ಕಾರಣೀಕರ್ತರಾಗಿದ್ದಾರೆ.

ಅಮ್ಮೆಂಜಳ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ 3 ಅವಧಿಗೆ ನಿರ್ದೇಶಕರಾಗಿ, ಒಂದನೇ ದರ್ಜೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು, ‘ಸಾರ್ವಜನಿಕ ಹಿಂದೂ ರುದ್ರಭೂಮಿ, ಪಜೀರು.’ ಇದರ ಕಾರ್ಯದರ್ಶಿಯಾಗಿ ರುದ್ರಭೂಮಿ ನಿರ್ಮಿಸುವಲ್ಲಿ ಅವಿರತ ಪ್ರಯತ್ನ ಪಟ್ಟಿರುತ್ತಾರೆ. 1967 ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿಯೂ ಸಾರ್ವಜನಿಕ ಸೇವೆ ಸಲ್ಲಿಸಿದ್ದಾರೆ.

ಪಜೀರು ಗ್ರಾಮ ಪಂಚಾಯತ್ ನಲ್ಲಿ 13 ವರ್ಷ ಸೇವೆ ಸಲ್ಲಿಸಿದ ಇವರು ಉಪಾಧ್ಯಕ್ಷರಾಗಿ, ಪ್ರಭಾರ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಾರೆ. ಹಾಗೂ ತಾಲೂಕು ಪಂಚಾಯತ್ ನಲ್ಲಿ 5 ವರ್ಷ ಕ್ರಿಯಾಶೀಲ ಸದಸ್ಯರಾಗಿ ಸಾರ್ವಜನಿಕ ಸೇವೆ ಸಲ್ಲಿಸಿರುತ್ತಾರೆ. ಪಜೀರು ಗ್ರಾಮದ ಪ್ರತಿಯೊಂದು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಇವರು, ಗ್ರಾಮದ ಸರ್ವಜನಾಂಗದವರ ಪ್ರೀತಿಗೆ ಪಾತ್ರರಾಗಿರುತ್ತಾರೆ. ಸರ್ವೋದಯ ಯುವಕ ಮಂಡಲ, ಪಜೀರು ಸುದರ್ಶನನಗರ ಇದರ ಸದಸ್ಯರಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು, ‘ಟೈಲರಿಂಗ್ ಅಸೋಸಿಯೇಷನ್’ ನ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುತ್ತಾರೆ.

ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಶ್ರೀ ಕೃಷ್ಣ ಯಕ್ಷಗಾನ ಸಂಘದ ಪೋಷಕರಾಗಿ, ಊರಿನ ಮತ್ತು ಹತ್ತಿರದ ಗ್ರಾಮಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ನಿರಂತರ ಸಂಪರ್ಕವಿರಿಸಿಕೊಂಡಂತಹ ಇವರು, ತಮ್ಮ ವೃತ್ತಿ ಬದುಕಿನಲ್ಲಿ ಹಲವಾರು ಜನರಿಗೆ ಟೈಲರಿಂಗ್ ತರಬೇತಿ ನೀಡಿ ಅವರ ಜೀವನದ ದಾರಿದೀಪವಾಗಿದ್ದಾರೆ.‌ ಎಲ್ಲರ ಬಳಿ ಬಹಳ ಪ್ರೀತಿಯಿಂದಲೇ ಮಾತನಾಡಿಸುವ ಇವರ ಬಳಿ, ಯಾರೇ ಬಂದರೂ ಬಂದವರ ಮನೆ ಭಾಷೆಯಲ್ಲೇ ಆತ್ಮೀಯವಾಗಿ ಮಾತನಾಡುವರು. ತುಳು, ಬ್ಯಾರಿ, ಕೊಂಕಣಿ, ಮಲಯಾಳಂ ಹೀಗೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಮಾತನಾಡುವ ಜಾಣ್ಮೆ ಇವರದು. ಇವರ ಪತ್ನಿ, ತಾಲೂಕು ಪಂಚಾಯತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂದಿಗೂ ಇವರು ಹಾಗೂ ಇವರ ಪತ್ನಿ ಇಬ್ಬರೂ ಟೈಲರಿಂಗ್ ವೃತ್ತಿ ನಡೆಸಿ ಜೀವನ ಸಾಗಿಸುತ್ತಿದ್ದಾರೆ. 5 ಗ್ರಾಮಗಳಲ್ಲಿ ಚಿರಪರಿಚಿತರಾಗಿ, ‘ಬಡವರ ಬಂಧು’ ಎಂದು ಗುರುತಿಸಿಕೊಂಡಿರುವ ಪಜೀರು ಗ್ರಾಮದ ಶ್ರೀ ಸೇಸಪ್ಪ ಪೂಜಾರಿ ಇವರಿಗೆ ಗೌರವಪೂರ್ವಕವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಅವರಿಗೆ ತುಂಬು ಹೃದಯದ ಅಭಿನಂದನೆಗಳು.


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »