TOP STORIES:

FOLLOW US

ದಿನನಿತ್ಯ ದಾಳಿಂಬೆ ತಿಂದರೆ ಹೀಗೆ ಆಗುವುದು ಕಂಡಿತ…


ನಾವು ದಿನನಿತ್ಯ ಉಪಯೋಗಿಸುವ ಹಣ್ಣುಹಂಪಲುಗಳಲ್ಲಿ ದಾಳಿಂಬೆ ವಿಭಿನ್ನ ಮತ್ತು ವಿಶಿಷ್ಟ ಹಣ್ಣಾಗಿದ್ದು ನಾಲಿಗೆ ರುಚಿ ಮಾತ್ರವಲ್ಲದೆ ದೇಹಕ್ಕೆ ಶಕ್ತಿಕೊಡುವ ಗುಣವನ್ನು ಹೊಂದಿದೆ ಎಂದರೆ ತಪ್ಪಾಗಲಾರದು.

ಇದನ್ನು ಹಣ್ಣಿನ ರೂಪದ ತಿನಿಸಾಗಿ ಮಾತ್ರವಲ್ಲದೆ, ಸಂಬಾರ ಪದಾರ್ಥಗಳಲ್ಲಿಯೂ ಉಪಯೋಗಿಸಲಾಗುತ್ತದೆ. ದಾಳಿಂಬೆಯು ಹಲವಷ್ಟು ಔಷಧೀಯ ಗುಣಗಳನ್ನು ಹೊಂದಿದ್ದು, ಸೇವನೆಗೆ ಉಪಯುಕ್ತವಾಗಿದೆ. ಮಾರುಕಟ್ಟೆಯಲ್ಲಿ ದೊರೆಯುವ ದಾಳಿಂಬೆಗೆ ಬಹಳಷ್ಟು ಬೇಡಿಕೆಯಿದ್ದು, ಇದನ್ನು ಎಲ್ಲ ಕಡೆಗಳಲ್ಲಿ ಬೆಳೆಯುವುದು ಸಾಧ್ಯವಾಗದ ಮಾತು. ಸಮಶೀತೋಷ್ಣ ವಾತಾವರಣ ಶೀತವಲಯಗಳಲ್ಲಿ ಇದು ಚೆನ್ನಾಗಿ ಬೆಳೆಯುತ್ತದೆ. ಹಿಮಾಚಲಪ್ರದೇಶ, ಜಮ್ಮು ಇಲ್ಲಿನ ಕಾಡುಗಳಲ್ಲಿ ಕಾಡು ದಾಳಿಂಬೆಗಳು ಹೆಚ್ಚಾಗಿ ಕಂಡು ಬರುತ್ತವೆ.

ಈಗಾಗಲೇ ಹಲವು ರೈತರು ದಾಳಿಂಬೆ ಬೆಳೆದು ಬದುಕು ಕಂಡುಕೊಂಡಿದ್ದಾರೆ. ಇತ್ತೀಚೆಗೆ ಹಲವು ತಳಿಗಳು ಬಂದಿವೆ. ಬಹಳಷ್ಟು ಕಡೆಗಳಲ್ಲಿ ತಮ್ಮ ಮನೆಯ ಹಿತ್ತಲಲ್ಲಿ ಗಿಡನೆಟ್ಟು ಬೆಳೆಸುವುದು ಕೂಡ ಕಾಣಸಿಗುತ್ತದೆ. ದಾಳಿಂಬೆ ವಾಣಿಜ್ಯಿಕವಾಗಿ ಆದಾಯ ತರುವುದನ್ನು ಆಚೆಗಿಟ್ಟು ಆರೋಗ್ಯದ ದೃಷ್ಠಿಯಿಂದ ಸಿಗುವ ಲಾಭವನ್ನು ಅರಿತರೆ ಮನೆ ಪಕ್ಕದಲ್ಲೊಂದು ಗಿಡನೆಡೋಣ ಎಂದೆನಿಸದಿರದು. ಕಾರಣ ಇದರ ಹಣ್ಣು ಮಾತ್ರವಲ್ಲದೆ, ಮರದ ಬೇರಿನಿಂದ ಹಿಡಿದು ತೊಗಟೆ, ಹೂ, ಬೀಜ ಎಲ್ಲವೂ ಔಷಧೀಯ ಗುಣಗಳಿಂದ ಕೂಡಿದ್ದು ಬಹು ಉಪಯುಕ್ತವಾಗಿವೆ.

ದಾಳಿಂಬೆ ರಸವನ್ನು ಸೇವಿಸುವುದರಿಂದ ಅಮಶಂಕೆಯನ್ನು ತಡೆಯಬಹುದಾಗಿದೆ. ಗಿಡದ ತೊಗಟೆಯ ಕಷಾಯಕ್ಕೆ ಚಿಟಿಕೆ ಉಪ್ಪು ಬೆರೆಸಿ ಮುಕ್ಕಳಿಸಿದರೆ ಹಲ್ಲು ನೋವು ಕಡಿಮೆಯಾಗುತ್ತದೆ. ಇದರ ಚಿಗುರು ಎಲೆಗಳನ್ನು ಬಾಯಲ್ಲಿ ಹಾಕಿಕೊಂಡು ಅಗೆಯುವುದರಿಂದ ವಸಡಿನಿಂದ ರಕ್ತ ಬರುವುದನ್ನು ತಡೆಯಲು ಸಾಧ್ಯವಿದೆ. ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಚೆನ್ನಾಗಿ ಪುಡಿ ಮಾಡಿ ಅದರೊಂದಿಗೆ ಸ್ವಲ್ಪ ಕರಿಮೆಣಸು, ಉಪ್ಪು ಬೆರೆಸಿ ನುಣ್ಣಗೆ ಪುಡಿ ಮಾಡಿ ಆ ಪುಡಿಯಿಂದ ಹಲ್ಲು ಉಜ್ಜಿದರೆ ಹಲ್ಲು ಹೊಳಪು ಬರುತ್ತದೆ. ಜತೆಗೆ ದೃಢತ್ವ ಹೊಂದುತ್ತದೆ.

ದಾಳಿಂಬೆ ಹಣ್ಣು ಸೇವಿಸುವುದರಿಂದ ವಿಷಮ ಶೀತ ಜ್ವರ, ಅಸ್ತಮಾ, ಮಾನಸಿಕ ಒತ್ತಡ ಹಾಗೂ ನರಗಳ ದೌರ್ಬಲ್ಯದಿಂದ ಉಂಟಾಗುವ ತಲೆನೋವು ಕಡಿಮೆಯಾಗುತ್ತದೆ. ಇದು ಪಿತ್ತಶಮನ ಗುಣ ಹೊಂದಿದ್ದು, ಬಾಯಾರಿಕೆಯನ್ನು ನೀಗಿಸುವಲ್ಲಿ ಮತ್ತು ದೇಹಕ್ಕೆ ಶಕ್ತಿ ನೀಡುವಲ್ಲಿ ಸಹಕಾರಿಯಾಗಿದೆ. ರಸದೊಂದಿಗೆ ಅಷ್ಟೇ ಪ್ರಮಾಣದ ಜೇನು ಬೆರೆಸಿ ಸೇವಿಸಿದ್ದೇ ಆದಲ್ಲಿ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಬೇಸಿಗೆಯಲ್ಲಿ ಆಗುವ ಬಾಯಾರಿಕೆ ತಡೆಗೆ ದಾಳಿಂಬೆ ರಸದಿಂದ ಮಾಡಿದ ಪಾನೀಯ ಉತ್ತಮವಾಗಿದ್ದು, ಬಾಯಾರಿಕೆ ನೀಗಿಸಿ ದೇಹವನ್ನು ತಂಪಾಗಿಡುವಲ್ಲಿ ಸಹಾಯ ಮಾಡುತ್ತದೆ.

ದಾಳಿಂಬೆಯ ಬೀಜದಲ್ಲಿ ಜಠರೋತ್ತೇಜಕ ಗುಣವಿದ್ದು, ಬೀಜದ ಪುಡಿಯೊಂದಿಗೆ ಸ್ವಲ್ಪ ಜೇನು ಸೇರಿಸಿ ಸೇವಿಸಿದರೆ ಅತಿಸಾರವನ್ನು ನಿಯಂತ್ರಿಸಬಹುದು. ಒಂದು ಚಮಚದಷ್ಟು ಹಣ್ಣಿನ ಬೀಜಗಳನ್ನು ತೆಗೆದುಕೊಂಡು ಚೆನ್ನಾಗಿ ಅರೆದು ನಂತರ ಒಂದು ಲೋಟದ ತುಂಬಾ ಹುರುಳಿ ಕಾಳಿನ ಸೂಪ್ ನ್ನು ತೆಗೆದುಕೊಂಡು ಎರಡನ್ನು ಬೆರೆಸಿ ಕುಡಿಯುವುದರಿಂದ ಮೂತ್ರಕೋಶದ ಮತ್ತು ಮೂತ್ರ ಜನಕಾಂಗಗಳಲ್ಲಿ ಸಿಕ್ಕಿ ಹಾಕಿಕೊಂಡ ಕಲ್ಲುಗಳು ಕರಗುತ್ತವೆ ಎನ್ನಲಾಗಿದೆ.

ಇನ್ನು ದಾಳಿಂಬೆ ಹಣ್ಣಿನ ಒಳಗಡೆ ರಸ ತುಂಬಿದ ಕೆಂಪು ಗುಲಾಬಿ ಹಳದಿ ಬಿಳಿಯ ಸಿಹಿ ಒಗರು ಹುಳಿ ರುಚಿಯ ತಿರುಳಿನ ಬೀಜಗಳನ್ನು ಒಣಗಿಸಿ ಅನಾರ್ ದಾನ್ ತಯಾರಿಸುತ್ತಾರೆ ಇದು ರುಚಿಕಾರಕ ಗುಣ ಹೊಂದಿದ್ದು, ಉತ್ತರ ಭಾರತದಲ್ಲಿ ಹೆಚ್ಚಾಗಿ ಅಡುಗೆಗಳಿಗೆ ಹುಳಿಯ ರುಚಿ ಕೊಡಲು ಬಳಸುತ್ತಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ದಾಳಿಂಬೆ ಆರೋಗ್ಯದ ದೃಷ್ಠಿಯಿಂದ ಹಲವು ರೀತಿಯಲ್ಲಿ ಉಪಕಾರಿಯಾಗಿದ್ದು, ಅದನ್ನು ಸೇವಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಜಾಣತನವಾಗಿದೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »