TOP STORIES:

” ದೀಪಾವಳಿ ಮಾಂಕಾಳಿ ಕುಣಿತ “


ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಹಾಗು ಉಡುಪಿ ತಾಲೂಕುಗಳಲ್ಲಿ ಮಾತ್ರ ಹೆಚ್ಚಾಗಿ ಈ ಕುಣಿತ ಕಂಡು ಬರುತ್ತದೆ. ದೀಪಾವಳಿ ಪಾಡ್ಯದಿಂದ ಮೊದಲ್ಗೊಂಡು ಪ್ರತೀ ಹಗಲಲ್ಲಿ ನಲಿಕೆ (ಪಾಣ) ಜನಾಂಗದವರು ಈ ಕುಣಿತವನ್ನು ನಡೆಸುತ್ತಾರೆ. ಗ್ರಾಮದ ಗುತ್ತು ಅಥವಾ ಗೂಡಿನ ಮನೆಯಿಂದ ಆರಂಭಿಸಿ ಎಲ್ಲಾ ಮನೆಗಳಿಗೂ ಹೋಗುತ್ತಾರೆ. ಇವರಿಗೆ ಸಂಭಾವನೆಯಾಗಿ ಮನೆಮನೆಯಿಂದ ಹಣ ಸಿಗುವುದಿಲ್ಲ. ಬದಲಿಗೆ ಅಕ್ಕಿ, ಎಣ್ಣೆ, ಉಪ್ಪು, ಮೆಣಸು ದೊರೆಯುತ್ತದೆ.ಮಾಂಕಾಳಿ ಕುಣಿತದಲ್ಲಿ ಒಬ್ಬ ನರ್ತಕ ಇರುತ್ತಾನೆ. ಈತ ಕಂಗಿನ ಹಾಳೆಯಿಂದ ತಯಾರಿಸಿದ ಮುಖವಾಡವನ್ನು ಮುಖಕ್ಕೆ ಹಿಡಿದುಕೊಳ್ಳುತ್ತಾನೆ. ಮುಖವಾಡವೆಂದರೆ ಕಣ್ಣು, ಮೂಗು, ತೆರೆದ ಬಾಯಿ, ಚಾಚಿದ ನಾಲಿಗೆಯನ್ನು ಬಿಳಿ, ಹಳದಿ, ಕಪ್ಪು, ಹಸಿರು, ಕೆಂಪು ಬಣ್ಣಗಳಿಂದ ತಯಾರಿಸುತ್ತಾರೆ. ಕುಣಿಯುವವ ಸೀರೆಯನ್ನು ನೆರಿಗೆ ಹಾಕಿ ಒಂದರ ಮೇಲೊಂದರಂತೆ ಹಂತಹಂತವಾಗಿ ಹಾಕಿ ಸೊಂಟಕ್ಕೆ ಕಟ್ಟಿಕೊಳ್ಳುತ್ತಾನೆ. ಕಾಲಿಗೆ ಗಗ್ಗರ ಕಟ್ಟಿ ಮೈಯನ್ನು ದೊಗಲೆ ಅಂಗಿಯಿಂದ ಮುಚ್ಚಿಕೊಳ್ಳುತ್ತಾನೆ. ಮುಖವಾಡದ ಹಿಂದಿನಿಂದ ಒಂದು ಸೀರೆಯನ್ನು ಇಳಿ ಬಿಟ್ಟಿರುತ್ತಾನೆ. ಇದು ಮುಖವಾಡ ಇಟ್ಟುಕೊಂಡ ವ್ಯಕ್ತಿಯ ಬೆನ್ನನ್ನು ಆವರಿಸುತ್ತದೆ. ಮುಖವಾಡವನ್ನು ಮುಖಕ್ಕೆ ಕಟ್ಟಿಕೊಳ್ಳುವುದಿಲ್ಲ. ಬದಲಿಗೆ ಎರಡು ಕೈಗಳಿಂದ ಮುಖದೆದುರು ಹಿಡಿದುಕೊಳ್ಳುತ್ತಾರೆ.

Watch Video is here:  https://www.facebook.com/watch/?v=698187894157792

ಹಾಡು ಹೇಳುವಾತ ತೆಂಬರೆಯನ್ನು ಬಡಿದು ಹಾಡು ಹೇಳುತ್ತಿದ್ದಂತೆ ಇದರ ಲಯಕ್ಕನುಗುಣವಾಗಿ ನರ್ತಕ ಸಣ್ಣ ಹೆಜ್ಜೆಗಳನ್ನಿಟ್ಟು ಸುತ್ತು ಬರುತ್ತಾನೆ. ತೆಂಬರೆಯ ಬಡಿತ ನಿಧಾನವಾಗಿರುತ್ತದೆ. ಕೈಗಳಲ್ಲಿ ಮುಖವಾಡವನ್ನು ಮುಖಕ್ಕೆ ಎದುರಾಗಿ ಹಿಡಿದುಕೊಂಡಿರುವುದರಿಂದ ಕೈಗಳಲ್ಲಿ ಯಾವುದೇ ಭಂಗಿಯನ್ನು ಅಭಿನಯಿಸುವಂತಿಲ್ಲ. ಮುಖವಾಡವನ್ನೆತ್ತಿ ಕುಣಿತಗಾರ ನೆಲವನ್ನು ನೋಡಬೇಕಾಗಿರುವುದರಿಂದ ಕುಣಿತದಲ್ಲಿ ವೇಗ ಇರುವುದಿಲ್ಲ. ಈ ಸಂದರ್ಭದಲ್ಲಿ ಹೇಳುವ ಹಾಡು ತುಳು ಭಾಷೆಯಲ್ಲಿರುತ್ತದೆ. ಊರಿನ ರೋಗ ರುಜಿನಗಳನ್ನು ಹೋಗಲಾಡಿಸಲು ಘಟ್ಟದಿಂದ ಇಳಿದು ಮಾಂಕಾಳಿ ಬರುತ್ತಾಳೆ ಎಂಬ ನಂಬಿಕೆ ಜನಪದರಲ್ಲಿದೆ. ತುಳು ನಾಡಿನಲ್ಲಿ ಆಚರಣೆಯಲ್ಲಿರುವ ಅಟಿಕಳಿಂಜನು ಊರಿನ ಮಾರಿಯನ್ನು ನಿವಾರಿಸುವುದಕ್ಕಾಗಿ ಆಷಾಢ ಮಾಸದಲ್ಲಿ ವರ್ಷಕ್ಕೆ ಒಂದಾವರ್ತಿ ಗ್ರಾಮದಲ್ಲಿ ಬರುವುದು. ತುಳಸಿ ಪೂಜೆಯ ದಿನ ಮಾಂಕಾಳಿ ಕುಣಿತದ ಅಂತ್ಯ ಪೂಜೆ. ಆ ದಿನ ಸಂಭಾವನೆಯಾಗಿ ದೊರೆತ ಭತ್ತ, ಅಕ್ಕಿ, ತೆಂಗಿನಕಾಯಿ, ಉಪ್ಪು, ಹುಳಿ, ಮಸಿ, ಮೆಣಸುಗಳನ್ನು ಸರಳೀ ಎಲೆಯಲ್ಲಿ ಸಾಂಕೇತಿಕವಾಗಿ ಮನೆಯ ಪಕ್ಕದಲ್ಲಿ ಬಡಿಸಿಡುತ್ತಾರೆ, ಅದರ ಎದುರು ಮಾಂಕಾಳಿಯ ಮುಖವಾಡವನ್ನಿಟ್ಟು ಊರಿನ ಮಾರಿಯನ್ನು ಕಳೆಯುವಂತೆ ಪ್ರಾರ್ಥಿಸುತ್ತಾರೆ, ಹಾಗೂ ಮುಖವಾಡವನ್ನು ತೆಗೆದು ಹೊಳೆಯಲ್ಲಿ ಬಿಡುತ್ತಾರೆ. ಈ ಮೂಲಕವಾಗಿ ಊರಿನ ಮಾರಿಯನ್ನು ಹೊಳೆ ದಾಟಿಸುವ ಆಶಯವನ್ನು ಕಾಣಬಹುದಾಗಿದೆ.

(ಸಂಪಾದಕರು: ಪ್ರೊ. ಹಿ. ಚಿ. ಬೋರಲಿಗಯ್ಯ, ಕರ್ನಾಟಕ ಜನಪದ ಕಲೆಗಳ ಕೋಶ. ಪುಟ ೨೬.)

Credits: Beauty of Tulunad  facebook page


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »