TOP STORIES:

ದೇಹದಲ್ಲಿ ಕಬ್ಬಿಣದ ಸಮಸ್ಯೆಯಿದ್ರೆ ಈ ಪಾತ್ರೆಯಲ್ಲಿ ಆಹಾರ ತಯಾರಿಸಿ


ಹಿಂದೆ ಜನರು ಕಬ್ಬಿಣದ ಪಾತ್ರೆಗಳನ್ನು ಹೆಚ್ಚು ಬಳಸುತ್ತಿದ್ದರು. ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಾರುಕಟ್ಟೆಗೆ, ಉಕ್ಕು, ನಾನ್ ಸ್ಟಿಕ್ ಸೇರಿದಂತೆ ನಾನಾ ಬಗೆಯ ಪಾತ್ರೆಗಳು ಲಗ್ಗೆಯಿಟ್ಟಿವೆ. ಆದ್ರೆ ಹಿಂದಿನ ಕಾಲದಲ್ಲಿ ಬಳಸ್ತಿದ್ದ ಕಬ್ಬಿಣದ ಪಾತ್ರೆಯಷ್ಟು ಉತ್ತಮವಾದ ಪಾತ್ರೆ ಯಾವುದೂ ಇಲ್ಲ.


ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಕಬ್ಬಿಣದ ಪಾತ್ರೆಗಳಲ್ಲಿ ಆಹಾರವನ್ನು ಬೇಯಿಸಿ ತಿಂದರೆ, ದೇಹದಲ್ಲಿ ಕಬ್ಬಿಣದ ಸಮಸ್ಯೆ ಎದುರಾಗುವುದಿಲ್ಲ. ಇದು ಆರೋಗ್ಯ ವೃದ್ಧಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ. ಕಬ್ಬಿಣದ ಪಾತ್ರೆಯನ್ನು ಅಡುಗೆಯಲ್ಲಿ ಸರಿಯಾಗಿ ಬಳಸಿದರೆ, ದೇಹದಲ್ಲಿ ಕಬ್ಬಿಣದ ಮಟ್ಟವನ್ನು ಕಾಪಾಡಬಹುದೆಂದು ವರದಿಯಲ್ಲಿ ಹೇಳಲಾಗಿದೆ.

ಕಬ್ಬಿಣದ ಪಾತ್ರೆಯಲ್ಲಿ ಯಾವುದೇ ಆಹಾರವನ್ನು ನೀವು ತಯಾರಿಸಬಹುದು. ಹೆಚ್ಚು ಹುಳಿ ಪದಾರ್ಥಗಳನ್ನು ಬೇಯಿಸಬಾರದು. ಕಬ್ಬಿಣದ ತವಾದಲ್ಲಿ ರೊಟ್ಟಿ, ಚಪಾತಿ, ದೋಸೆಯನ್ನು ಬೇಯಿಸಿ ಸೇವನೆ ಮಾಡಬಹುದು. ಇದು ಆಹಾರದಲ್ಲಿ ಕಬ್ಬಿಣದ ಗುಣಗಳನ್ನು ಹೆಚ್ಚಿಸುವುದಲ್ಲದೆ, ಸುವಾಸನೆಯನ್ನು ಹೆಚ್ಚಿಸುತ್ತದೆ.

ನೀರು ಅಥವಾ ಯಾವುದೇ ಇತರ ಪಾನೀಯವನ್ನು ಕಬ್ಬಿಣದ ಪಾತ್ರೆಗಳಲ್ಲಿ ಇಡಬಾರದು. ಕಬ್ಬಿಣವು ತೇವಾಂಶದೊಂದಿಗೆ ಪ್ರತಿಕ್ರಿಯಿಸಿ, ತುಕ್ಕನ್ನು ಉತ್ಪಾದಿಸುತ್ತದೆ.

ಕಬ್ಬಿಣದ ಪಾತ್ರೆಗಳಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ತಕ್ಷಣವೇ ಬೇರೆ ಯಾವುದೇ ಪಾತ್ರೆಗೆ, ವಿಶೇಷವಾಗಿ ಗಾಜಿನ ಪಾತ್ರೆಗೆ ವರ್ಗಾಯಿಸಬೇಕು.

ಹುಳಿ ಅಥವಾ ಆಮ್ಲೀಯ ಆಹಾರಗಳು ಕಬ್ಬಿಣದೊಂದಿಗೆ ಪ್ರತಿಕ್ರಿಯಿಸುತ್ತವೆ. ಇದು ಜೀರ್ಣಕ್ರಿಯೆ ಸಮಸ್ಯೆಗೆ ಕಾರಣವಾಗಬಹುದು. ಆದ್ದರಿಂದ, ಕಬ್ಬಿಣದ ಪಾತ್ರೆಯಲ್ಲಿ ಕರಿ, ರಸಂ, ಸಾಂಬಾರ್, ಟೊಮೆಟೊಗಳಿಂದ ಮಾಡಿದ ಆಹಾರವನ್ನು ತಯಾರಿಸಬಾರದು.

ಕಬ್ಬಿಣದ ಪಾತ್ರೆಗಳನ್ನು ತೊಳೆದು ತಕ್ಷಣ ಒರೆಸಬೇಕು. ಒರಟಾದ ಸ್ಕ್ರಬ್ಬರ್ ಬಳಸಬೇಡಿ. ಪಾತ್ರೆಗಳನ್ನು ಯಾವಾಗಲೂ ಸ್ವಚ್ಛ ಮತ್ತು ಶುಷ್ಕ ಸ್ಥಳದಲ್ಲಿ ಇರಿಸಿ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »