TOP STORIES:

FOLLOW US

ದೇಹದಲ್ಲಿ ಕಬ್ಬಿಣದ ಸಮಸ್ಯೆಯಿದ್ರೆ ಈ ಪಾತ್ರೆಯಲ್ಲಿ ಆಹಾರ ತಯಾರಿಸಿ


ಹಿಂದೆ ಜನರು ಕಬ್ಬಿಣದ ಪಾತ್ರೆಗಳನ್ನು ಹೆಚ್ಚು ಬಳಸುತ್ತಿದ್ದರು. ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಾರುಕಟ್ಟೆಗೆ, ಉಕ್ಕು, ನಾನ್ ಸ್ಟಿಕ್ ಸೇರಿದಂತೆ ನಾನಾ ಬಗೆಯ ಪಾತ್ರೆಗಳು ಲಗ್ಗೆಯಿಟ್ಟಿವೆ. ಆದ್ರೆ ಹಿಂದಿನ ಕಾಲದಲ್ಲಿ ಬಳಸ್ತಿದ್ದ ಕಬ್ಬಿಣದ ಪಾತ್ರೆಯಷ್ಟು ಉತ್ತಮವಾದ ಪಾತ್ರೆ ಯಾವುದೂ ಇಲ್ಲ.


ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಕಬ್ಬಿಣದ ಪಾತ್ರೆಗಳಲ್ಲಿ ಆಹಾರವನ್ನು ಬೇಯಿಸಿ ತಿಂದರೆ, ದೇಹದಲ್ಲಿ ಕಬ್ಬಿಣದ ಸಮಸ್ಯೆ ಎದುರಾಗುವುದಿಲ್ಲ. ಇದು ಆರೋಗ್ಯ ವೃದ್ಧಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ. ಕಬ್ಬಿಣದ ಪಾತ್ರೆಯನ್ನು ಅಡುಗೆಯಲ್ಲಿ ಸರಿಯಾಗಿ ಬಳಸಿದರೆ, ದೇಹದಲ್ಲಿ ಕಬ್ಬಿಣದ ಮಟ್ಟವನ್ನು ಕಾಪಾಡಬಹುದೆಂದು ವರದಿಯಲ್ಲಿ ಹೇಳಲಾಗಿದೆ.

ಕಬ್ಬಿಣದ ಪಾತ್ರೆಯಲ್ಲಿ ಯಾವುದೇ ಆಹಾರವನ್ನು ನೀವು ತಯಾರಿಸಬಹುದು. ಹೆಚ್ಚು ಹುಳಿ ಪದಾರ್ಥಗಳನ್ನು ಬೇಯಿಸಬಾರದು. ಕಬ್ಬಿಣದ ತವಾದಲ್ಲಿ ರೊಟ್ಟಿ, ಚಪಾತಿ, ದೋಸೆಯನ್ನು ಬೇಯಿಸಿ ಸೇವನೆ ಮಾಡಬಹುದು. ಇದು ಆಹಾರದಲ್ಲಿ ಕಬ್ಬಿಣದ ಗುಣಗಳನ್ನು ಹೆಚ್ಚಿಸುವುದಲ್ಲದೆ, ಸುವಾಸನೆಯನ್ನು ಹೆಚ್ಚಿಸುತ್ತದೆ.

ನೀರು ಅಥವಾ ಯಾವುದೇ ಇತರ ಪಾನೀಯವನ್ನು ಕಬ್ಬಿಣದ ಪಾತ್ರೆಗಳಲ್ಲಿ ಇಡಬಾರದು. ಕಬ್ಬಿಣವು ತೇವಾಂಶದೊಂದಿಗೆ ಪ್ರತಿಕ್ರಿಯಿಸಿ, ತುಕ್ಕನ್ನು ಉತ್ಪಾದಿಸುತ್ತದೆ.

ಕಬ್ಬಿಣದ ಪಾತ್ರೆಗಳಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ತಕ್ಷಣವೇ ಬೇರೆ ಯಾವುದೇ ಪಾತ್ರೆಗೆ, ವಿಶೇಷವಾಗಿ ಗಾಜಿನ ಪಾತ್ರೆಗೆ ವರ್ಗಾಯಿಸಬೇಕು.

ಹುಳಿ ಅಥವಾ ಆಮ್ಲೀಯ ಆಹಾರಗಳು ಕಬ್ಬಿಣದೊಂದಿಗೆ ಪ್ರತಿಕ್ರಿಯಿಸುತ್ತವೆ. ಇದು ಜೀರ್ಣಕ್ರಿಯೆ ಸಮಸ್ಯೆಗೆ ಕಾರಣವಾಗಬಹುದು. ಆದ್ದರಿಂದ, ಕಬ್ಬಿಣದ ಪಾತ್ರೆಯಲ್ಲಿ ಕರಿ, ರಸಂ, ಸಾಂಬಾರ್, ಟೊಮೆಟೊಗಳಿಂದ ಮಾಡಿದ ಆಹಾರವನ್ನು ತಯಾರಿಸಬಾರದು.

ಕಬ್ಬಿಣದ ಪಾತ್ರೆಗಳನ್ನು ತೊಳೆದು ತಕ್ಷಣ ಒರೆಸಬೇಕು. ಒರಟಾದ ಸ್ಕ್ರಬ್ಬರ್ ಬಳಸಬೇಡಿ. ಪಾತ್ರೆಗಳನ್ನು ಯಾವಾಗಲೂ ಸ್ವಚ್ಛ ಮತ್ತು ಶುಷ್ಕ ಸ್ಥಳದಲ್ಲಿ ಇರಿಸಿ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »