TOP STORIES:

ನಾಡು ಕಂಡ ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ!! ಎಸ್ ಬಂಗಾರಪ್ಪ ಜನುಮ ದಿನದಂದು ಗೌರವ ಪೂರ್ವಕ ನಮನಗಳು


ಬಂಗಾರಪ್ಪಾಜಿಯವರ ಸ್ಮರಣೋತ್ಸವದ ಅಂಗವಾಗಿ ಈ ಲೇಖನ.

ಎಸ್, ಬಂಗಾರಪ್ಪ ಅಂದರೆ ಸಾರೆಕೊಪ್ಪ ಬಂಗಾರಪ್ಪ ಅಂತ ಅರ್ಥ. ಸಾರೆಕೊಪ್ಪ ಎಂಬುದು ಅಂಚೆ ವಿಳಾಸ.

ಇವರ ಹುಟ್ಟೂರು ಶಿವಮೊಗ್ಗ* ಜಿಲ್ಲೆಯ *ಸೊರಬ* ತಾಲೂಕಿನ *ಕುಬಟೂರು* ಎಂಭ ಕುಗ್ರಾಮ. ಇವರ ತಂದೆಯ ಹೆದರು *ಕಲ್ಲಪ್ಪ.* ಮತ್ತು ತಾಯಿಯ ಹೆಸರು *ಕಲ್ಲಮ್ಮ* ಎಂದು. ಇವರಿಗೆ ಈ ಹೆಸರು ಬರಲು ಕಾರಣ *ಕಾರವಾರ* ಜಿಲ್ಲೆಯ *ಶಿರ್ಶಿ* ತಾಲೂಕಿನ *ಕದಂಭರು* ಆಳಿದ *ಬನವಾಸಿಯ* ಹತ್ತಿರ ಕೇವಲ ಮೂರು ಕಿ.ಮೀ. ದಲ್ಲಿ *ಗುಡ್ನಾಪುರ* ಎಂಬ ಹಳ್ಳಿ ಇದೆ. ಈ ಹಳ್ಳಿಯ ಪಕ್ಕದಲ್ಲಿ *ದೊಡ್ಡದಾದ ಕೆರೆಯೊಂದಿದೆ* ಸದಾ ವರ್ಷವಿಡೀ ನೀರಿನಿಂದ ತುಂಬಿರುವ ಈ ಕೆರೆಯ ಮಧ್ಯಭಾಗದಲ್ಲಿ *ಬಂಗಾರೇಶ್ವರ ದೇವಾಲಯವಿದೆ.* ಅಲ್ಲಿ *ಶಿವನ* ಅವತಾರ *ಬಂಗಾರೇಶ್ವರ* ನೆಲೆಸಿದ್ದಾನೆ.

 

*ಕಲ್ಲಪ್ಪ* ಮತ್ತು *ಕಲ್ಲಮ್ಮ* ದಂಪತಿಗಳಿಗೆ ಬಹಳ ದಿನವಾದರೂ ಗಂಡು ಸಂತಾನವಾಗುವುದಿಲ್ಲ ಆಗ ಮನೆದೇವರು *ಹುಚ್ಚುರಾಯೇಶ್ವರ ಸ್ವಾಮಿ {ಆಂಜನೇಯ ಸ್ವಾಮಿ}* ನೆನೆಯುತ್ತಾ ಈ ಬಂಗಾರೇಶ್ವರ ದೇವರಿಗೆ ಹರಕೆ ಹೊತ್ತರಂತೆ ಗಂಡು ಮಗು ಜನಿಸಿದರೆ ನಿನ್ನ ಹೆಸರೇ ನಾಮಕರಣ ಮಾಡುತ್ತೇವೆ ಅಂತ.ಆ ನಂತರದಲ್ಲಿ ಕಲ್ಲಮ್ಮನವರು ನವಮಾಸ ತುಂಬಿ ಮಗುವಿಗೆ ಜನ್ಮ ನೀಡಿದಾಗ ಗಂಡಯ ಮಗು ಆಗಿತ್ತಂತೆ ಹರಕೆಯ ಪ್ರಕಾರ ಆ ಗಂಡು ಮಗುವಿಗೆ *ಬಂಗಾರೇಶ್ವರನ* ಆಶಿರ್ವಾದದಿಂದ ಜನಿಸಿದ್ದಕ್ಕೆ *ಬಂಗಾರಪ್ಪ* ಎಂದು ನಾಮಕರಣ ಮಾಡಿದರಂತೆ. ಇವರೇ ನಾಡುಕಂಡ ಧೀಮಂತ ವ್ಯಕ್ತಿ , ಬಡವರ ಬಂಧು *ಈಡಿಗ ಸಮುದಾಯದ ಆಶಾಕಿರಣ ಬಂಗಾರಪ್ಪನವರು.*

 

ಅದೇ ರೀತಿಯಾಗಿ *ಬಂಗಾರಪ್ಪನವರ* ಸಹೋದರಿಯರು *ದೊಡ್ಡ ಕೆರಿಯಮ್ಮ* ಮತ್ತು *ಸಣ್ಣ ಕೆರಿಯಮ್ಮ* ಎಂದು. *ಬಂಗಾರೇಶ್ವರ* ದೇವಾಲಯದ ಪಕ್ಕ ಇರುವ *ಗುಡ್ನಾಪುರ* ಎಂಬ ಕುಗ್ರಾಮದ ಪಕ್ಕ ಕೆರೆ ಇದೆಯಲ್ಲ, ಅಲ್ಲಿ *ಬಂಗಾರೇಶ್ವರ ಸ್ವಾಮಿಯ ಜೊತೆಗೆ ಶಕ್ತಿಸ್ವರೂಪಿಣಿ ಆದಿಶಕ್ತಿ ಅಮ್ಮನಾಗಿ ಕೆರೆಯಲ್ಲಿರುವುದರಿಂದ ಕೆರೆಯಮ್ಮಳಾಗಿ ದರ್ಶನ ಕೊಡುತ್ತಿದ್ದಾಳೆ.*

 

ಆದ್ದರಿಂದ *ಬಂಗಾರಪ್ಪನವರ* ತಂದೆ ತಾಯಿ ತಮ್ಮ ಹೆಣ್ಣಮಕ್ಕಳಿಗೆ *ದೊಡ್ಡ ಕೆರೆಯಮ್ಮ,,, ಸಣ್ಣ ಕೆರೆಯಮ್ಮ* ಎಂದು ನಾಮಕರಣ ಮಾಡಿದ್ದಾರೆ.

ಬಂಗಾರಪ್ಪನವರು ಈಡಿಗ ಜಾತಿಗೆ ಸೇರಿದವರು. ಈಡಿಗ ಜಾತಿಯ ಉಪಜಾತಿಯಾದ ದೀವರು ಸಮುದಾಯಕ್ಕೆ ಸೇರಿದವರು.ಇವರ ಧರ್ಮ ಪತ್ನಿಯ ಹೆಸರು *ಶಕುಂತಲ. ಇವರದು ಕಾರವಾರ ಜಿಲ್ಲೆಯ ಶಿರ್ಶಿ ತಾಲೂಕಿನ ಮಳಲಗಾಂವ್ಎಂಬ ಹಳ್ಳಿ.ಇವರದು ಸಹಿತ ಈಡಿಗ ಸಮುದಾಯದ ಉಪಜಾತಿ ನಾಯ್ಕ ಕುಟುಂಬದವರು.

 

ಬಂಗಾರಪ್ಪನವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಇವರ ಒಬ್ಬ ಪುತ್ರಿಯನ್ನು ಇದೇ ಸಮುದಾಯದ ಕನ್ನಡದ ಮುತ್ತು ಪದ್ಮಬೂಷಣ ಡಾ ! ರಾಜಕುಮಾರ ಅವರ ಪುತ್ರ ಶಿವರಾಜಕುಮಾರ ಮದುವೆಯಾಗಿದ್ದಾರೆ.

ಇನ್ನೋರ್ವ ಪುತ್ರಿ ಹೆಸರಾಂತ ದಿನಪತ್ರಿಕೆ ಪ್ರಜಾವಾಣಿಯ ಮಾಲಾಕರನ್ನು ಮಡದಿಯಾಗಿದ್ದಾರೆ.

ಬಂಗಾರಪ್ಪನವರು ತಮ್ಮ ರಾಜಕೀಯ ಅಕಾಂಕ್ಷೆಗೆ ಕಲಾವಿದರನ್ನು ಎಂದೂ ಬಳಸಿಕೊಳ್ಳಲಿಲ್ಲ. *ಡಾ ! ರಾಜ್* ಅವರನ್ನು ಒಂದು ದಿನವೂ ತಮ್ಮ ರಾಜಕೀಯ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಲಿಲ್ಲ.

ಮಿರಿ ಮಿರಿ ಮಿಂಚುವ ಶರ್ಟ್ ಬಿಳಿ ಪ್ಯಾಂಟ್ ಬಿಳಿ ಚಪ್ಪಲಿ ಅಥವಾ ಶೂ, ಕಣ್ಣಿಗೆ ಕೂಲಿಂಗ್ ಕನ್ನಡಕ, ಕೈಯಲ್ಲಿ ಕನ್ನಡಕ ಇಡುವ ಬಾಕ್ಸ್ ಇದು *ಬಂಗಾರಪ್ಪನವರ* ಸಾರ್ವಜನಿಕ ವಸ್ತ್ರ ಸಂಹಿತೆ. ವೇದಿಕೆ ಮೇಲಿರುವಾಗಲಂತೂ ದೂರದಲ್ಲಿ ನಿಂತು ನೋಡುವವರಿಗೆ ಗುರುತು ಹಿಡಿಯಲು *ಮಿಂಚು ಅಚ್ಚಕೆಂಪು, ತಿಳಿನೀಲಿ, ಅಚ್ಚನೀಲಿ,ಶರ್ಟ್ ದರಿಸುತ್ತಿದ್ದರು.

ಬಂಗಾರಪ್ಪನವರನ್ನು ಈ ದಿನ ಮನದಲ್ಲಿ ಸ್ಮರಿಸಿಕೊಳ್ಳುತ್ತಾ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಹಾರೈಸೋಣ.

ವಿಷಯ ಸಂಗ್ರಹ : ಆಂಜನೇಯ.ಟಿ.{ ಈಡಿಗ }

ಅಗಡಿ ಹಾವೇರಿ

9113604162


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »