TOP STORIES:

FOLLOW US

ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ : ವಾರ್ಷಿಕ ಮಹಾಸಭೆ


ಉಡುಪಿ : ನಾರಾಯಣಗುರು ಅರ್ಬನ್ ಕೋಆಪರೇಟಿವ್ ಬ್ಯಾಂಕ್ ಲಿ, ಉಡುಪಿ, ಇದರ 2021 – 2022 ನೇ ಸಾಲಿನ 20ನೇಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಸೆಪ್ಟೆಂಬರ್‌ 11, ಭಾನುವಾರ ಬಿಲ್ಲವರ ಸೇವಾ ಸಂಘ (ರಿ), ಬನ್ನಂಜೆ ಉಡುಪಿ ಇದರಶಿವಗಿರಿ ಸಭಾಂಗಣದಲ್ಲಿ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ವಾರ್ಷಿಕ ಸಾಮಾನ್ಯ ಸಭೆಯನ್ನು ಬ್ಯಾಂಕಿನ ಮಾರ್ಗದರ್ಶಕರಾದ ಎಸ್‌ ಕೆ ಸಾಲ್ಯಾನ್ ,ರಾಮಚಂದ್ರ ಕಿದಿಯೂರು ಮತ್ತು ಸೂರ್ಯಪ್ರಕಾಶ್ ಜಂಟಿಯಾಗಿ ಉದ್ಘಾಟಿಸಿ ಶುಭ ಹಾರೈಸಿದರು. ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ ಹರಿಶ್ಚಂದ್ರ ಅಮೀನ್ ಅವರು ಸರ್ವಸದಸ್ಯರುಗಳನ್ನು ಸ್ವಾಗತಿಸಿ ನಮ್ಮ ಬ್ಯಾಂಕ್ಭಾರತೀಯ ರಿಸರ್ವ್ ಬ್ಯಾಂಕಿನ ಮಾನ್ಯತೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, ನಮ್ಮ ಬ್ಯಾಂಕ್ ಅಧುನಿಕ ಸೌಲಭ್ಯಗಳಾದ ಕೋರ್ಬ್ಯಾಂಕಿಂಗ್ ,ಆರ್ ಟಿ ಜಿ ಎಸ್ / ನೆಪ್ಟ್ , ಸಿ ಟಿ ಎಸ್ ಚೆಕ್ ಕ್ಲಿಯರಿಂಗ್, ಸೇಫ್ ಲಾಕರ್ ಸೌಲಭ್ಯಗಳನ್ನು ಒಳಗೊಂಡಿದೆ . ಗ್ರಾಹಕರಐದು ಲಕ್ಷದವರೆಗಿನ ಠೇವಣಿಗಳಿಗೆ ಡಿ ಸಿ ಜಿ ಸಿ. ವಿಮಾ ಸೌಲಭ್ಯವನ್ನು ಹೊಂದಿದೆ . ಸ್ವಸಹಾಯ ಗುಂಪಿನ ಸದಸ್ಯರಿಗೆ ಅತ್ಯಂತಕಡಿಮೆ ಬಡ್ಡಿಯ ಸಾಲವನ್ನು ನೀಡುತ್ತಿದ್ದು ಚಿನ್ನಾಭರಣ ಈಡಿನ ಸಾಲ, ಗೃಹ ನಿರ್ಮಾಣ ಸಾಲ, ಅಡಮಾನ ಸಾಲ , ಭದ್ರತಾ ಸಾಲ , ವೈಯಕ್ತಿಕ ಸಾಲ , ವಾಹನ ಸಾಲ ವೇತನಾಧಾರಿತ ಸಾಲ ಹಾಗೂ ವ್ಯಾಪಾರ ಅಭಿವೃದ್ಧಿ ಸಾಲಗಳನ್ನು  ವಾಣಿಜ್ಯ ಬ್ಯಾಂಕಿನ ಬಡ್ಡಿ ದರಕ್ಕೆಸ್ಪರ್ಧಾತ್ಮಕವಾಗಿ ನೀಡಲಾಗುತ್ತದೆ .ಗ್ರಾಹಕರ ಠೇವಣಿಗೆ ಅತ್ಯಧಿಕ ಬಡ್ಡಿಯನ್ನು ನೀಡುತ್ತಿದ್ದು ಹಿರಿಯ ನಾಗರಿಕರಿಗೆ 0.5% ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಗ್ರಾಹಕರ ಹಾಗೂ ಆಡಳಿತ ಮಂಡಳಿಯ ಸಹಕಾರ ಸಿಬ್ಬಂದಿಗಳ ನಗುಮೊಗದ ಸೇವೆ ಸದಸ್ಯರಪ್ರೋತ್ಸಾಹದಿಂದ ನಮ್ಮ ಬ್ಯಾಂಕ್ ಉತ್ತಮ ಲಾಭವನ್ನು ಕಾಣುವಂತಾಗಿದೆ ಎಂದರು.

ಉಪಾಧ್ಯಕ್ಷರಾದ ವಿಜಯಾ ಜಿ ಬಂಗೇರ ಪ್ರಾಸ್ತಾವಿಕದ ಮೂಲಕ ವೇದಿಕೆಗೆ ಬರಮಾಡಿಕೊಂಡರು. ನಿರ್ದೇಶಕರಾದ ಕೆ. ಜಯಕುಮಾರ್‌, ಪ್ರಭಾಕರ ಬಂಗೇರ ಬಿ.ಬಿ. ಪೂಜಾರಿ, ನವೀನ್ ಅಮೀನ್, ಆನಂದ ಜತ್ತನ್ನ, ಡಿ.ಆರ್ ರಾಜು, ಶೇಕರ ಬಿ ಪೂಜಾರಿರಮೇಶ್ ಕೆ ಕೋಟ್ಯಾನ್ ,ಅಶೋಕ್ ಕುಮಾರ್ ,ಅರಣ್ ಜತ್ತನ್ನ      ವೃತ್ತಿಪರ ನಿರ್ದೇಶಕರಾದ ಬಾಸ್ಕರ ಪೂಜಾರಿ ಹಾಗೂ ಕೃಷ್ಣಬಿಲ್ಲವ ಸಭೆಯಲ್ಲಿ ಉಪಸ್ಥಿತರಿದ್ದರು.

ಸದಸ್ಯರಾದ ಗುರದತ್ ಅಮೀನ್ , ಕಟಪಾಡಿ ಶಂಕರ್ ಪೂಜಾರಿ, ರಮೇಶ್  ಬಂಗೇರ ,ಶೇಖರ್ ಕೋಟ್ಯಾನ್ ಮತ್ತು ಸುಲೋಚನಾದಾಮೋದರ್ ಇವರು ಬ್ಯಾಂಕಿನ ಅಭಿವೃದ್ಧಿಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿ ಬ್ಯಾಂಕನ್ನು ಲಾಭದತ್ತ ಮುನ್ನಡೆಸಿದ ಆಡಳಿತಮಂಡಳಿಯನ್ನು ಅಭಿನಂದಿಸಿದರು.

ಬ್ಯಾಂಕಿನ ನಿರ್ದೇಶಕರಾದ ಶಕುಂತಲ ಶ್ರೀನಿವಾಸ್ ಪ್ರಾರ್ಥಿಸಿ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಶನ್ ಫೌಸ್ಟಿನ್ಆಲ್ವರವರು ಬ್ಯಾಂಕಿನ 19ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ವರದಿಯನ್ನು ವಾಚಿಸಿದರು. ನಿರ್ದೇಶಕ ಶಿವಾಜಿ ಸುವರ್ಣಅವರು ಧನ್ಯವಾದವಿತ್ತರು.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »