TOP STORIES:

FOLLOW US

ನಾರಾಯಣಗುರುಗಳ ಸಂಘಟನೆಯಿಂದ ಬಲಯುತರಾಗಿರಿ ಸಂದೇಶ ಸಮಾಜ ಒಪ್ಪಿಕೊಂಡಿದೆ : ದಯಾನಂದ ಕರ್ಕೇರ ಉಗ್ಗೆಲ್ ಬೆಟ್ಟು


ನಾರಾಯಣಗುರುಗಳ ಸಂದೇಶವನ್ನು ಅರಿತು, ಅಳವಡಿಸಿಕೊಳ್ಳುವ ಅನಿವಾರ್ಯತೆಯಿದೆ. ಅವರ ಸಂದೇಶಗಳು ಬದುಕಿಗೆ ಸಮರ್ಪಕವಾಗುವಂತಹ ಗಳು. ಅಂದಿನ ಅವರ ಚಿಂತನೆಯಿಂದ ಇಂದು ಬದಲಾವಣೆಯತ್ತ ನಾವು ಸಾಗುತ್ತಿದ್ದೇವೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಹೇಳಿದರು.
ಬ್ರಹ್ಮಶ್ರೀ ನಾರಾಯಣಗುರುಗಳ 92 ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಜಂಟಿ ಆಶ್ರಯದಲ್ಲಿ ನಡೆದ ಸಮಾಜದಲ್ಲಿ ಸಮಾನತೆಯನ್ನು ಸಾರುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಎಂಬ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ, ಸರಕಾರಿ ಕಾಲೇಜು ತೆಂಕನಿಡಿಯೂರಿನ ಉಪನ್ಯಾಸಕರಾದ ದಯಾನಂದ ಕರ್ಕೇರ ಉಗ್ಗೆಲ್ ಬೆಟ್ಟು ಮಾತನಾಡಿ ಜಾತಿ-ವರ್ಗಗಳ ಬೇಧವನ್ನು ಮರೆತು ಮಾನವೀಯತೆ, ಸಮಾನತೆಯ ಮನಸ್ಥಿತಿ ನಮ್ಮಲ್ಲಿ ಇದ್ದಾಗ ಸಮಾಜ ಪರಿವರ್ತನೆ ಸಾಧ್ಯವಾಗುತ್ತದೆ. ಗುರುಗಳ ಸಂಘಟನೆಯಿಂದ ಬಲಯುತರಾಗಿ ಎಂಬ ಸಂದೇಶ ಇಡೀ ಸಮಾಜವೇ ಒಪ್ಪಿಕೊಂಡಿದೆ. ಸಂಘಟನೆಗಳು ನೈತಿಕ ಬಲ ತುಂಬುವ ಮೂಲಕ ಸಮಾಜದ ತಪ್ಪುಗಳನ್ನು ಪ್ರಶ್ನಿಸುವ ಗುಣವು ನಮ್ಮಲ್ಲಿ ಬರಬೇಕಾಗಿದೆ. ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಸಂದೇಶ ಸಮಾನತೆ ತರುವಲ್ಲಿ ಸಹಕಾರಿಯಾಗಿದೆ ಎಂದರು.

ಪಡುಬಿದ್ರಿ ಬಿಲ್ಲವ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಮಾತನಾಡಿ ನಾರಾಯಣಗುರುಗಳು ಸಾಮಾಜಿಕ ಕ್ರಾಂತಿ ಮಾಡಿ ಹಿಂದುಳಿದ ವರ್ಗಗಳಿಗೆ ಶಕ್ತಿಯಾದರು. ಸತ್ಯದ ಹೋರಾಟದ ಮೂಲಕ ಜನರಲ್ಲಿ ವಿಶ್ವಾಸ ಮೂಡಿಸಿ ಬದಲಾವಣೆಯ ತಂದರು. ಅವರ ಅಂದಿನ ಸಂದೇಶ ಸಾರ್ವಕಾಲಿಕವಾಗಿದೆ.ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಚಿತ್ರಾಕ್ಷಿ ಕೆ. ಕೋಟ್ಯಾನ್ ವಹಿಸಿದ್ದರು.

ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾದ ಜಗದೀಶ್ ಸುವರ್ಣ, ಬಿಲ್ಲವ ಸಂಘದ ಕಾರ್ಯದರ್ಶಿ ಲಕ್ಷ್ಮಣ್ ಬಿ. ಅಮೀನ್, ಘಟಕದ ಕಾರ್ಯದರ್ಶಿ ಶಾಶ್ವತ್ ಎಸ್. ಉಪಸ್ಥಿತರಿದ್ದರು.

ಘಟಕದ ಅಧ್ಯಕ್ಷರಾದ ಚಿತ್ರಾಕ್ಷಿ ಕೆ. ಕೋಟ್ಯಾನ್ ಸ್ವಾಗತಿಸಿ, ಘಟಕದ ಮಾಜಿ ಅಧ್ಯಕ್ಷರಾದ ಸುಜಿತ್ ಕುಮಾರ್ ಪ್ರಸ್ತಾವಿಸಿ, ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಜಯ ಎನ್. ಪೂಜಾರಿ ವಂದಿಸಿ, ಯಶೋಧ ಕಾರ್ಯಕ್ರಮ ನಿರ್ವಹಿಸಿದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »