TOP STORIES:

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…!!!


ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ..?. ರೀತಿಯ ಅನೇಕ ಪ್ರಶ್ನೆಗಳುಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ತುಂಬಾ ಪರಿಣಾಮ ಬೀರಿರುವುದು ನಿಜ. ಹೆಚ್ಚಿನ ಜನರಲ್ಲಿ ಕನಿಷ್ಠಯಾವುದಾದರೂ ಒಂದು ರೀತಿಯ ಸಾಮಾಜಿಕ ಜಾಲತಾಣದ ಖಾತೆ ಇದ್ದೇ ಇರುತ್ತದೆ. ಆದರೆ ನಿಮ್ಮ ಸಾವಿನ ಬಳಿಕ ಖಾತೆಏನಾಗುವುದು ಎಂದು ನಿಮಗೆ ತಿಳಿದಿದೆಯಾ?. ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆಏನಾಗುತ್ತದೆ, ಯಾರಾದರು ನಮ್ಮ ಖಾತೆಯನ್ನು ಹ್ಯಾಕ್ ಮಾಡಿ ಕೆಟ್ಟ ಸಂದೇಶ ಫೋಟೋಗಳನ್ನು ಹಂಚಿಕೊಂಡರೆ ಏನುಮಾಡೋದು..? ರೀತಿಯ ಅನೇಕ ಪ್ರಶ್ನೆಗಳು ಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ಫೇಸ್ಬುಕ್:
ವಿವಿಧ ರೀತಿಯ ಸಾಮಾಜಿಕ ಜಾಲತಾಣಗಳು ಅದರದ್ದೇ ಆಗಿರುವ ಕೆಲವೊಂದು ಖಾಸಗಿ ನಿಯಮಗಳನ್ನು ರೂಪಿಸಿರುತ್ತವೆ. ಫೇಸ್‌ಬುಕ್ ಅಂತೂ ನೀವು ಸತ್ತ ಮೇಲೆ ನಿಮ್ಮ ಖಾತೆಯನ್ನು ಯಾರು ನಿರ್ವಹಿಸಬೇಕೆಂಬುದನ್ನು ಮೊದಲೇ ನಿರ್ಧರಿಸುವುದಕ್ಕೆಬಳಕೆದಾರರಿಗೆ ಸೌಲಭ್ಯವನ್ನು ಕೂಡ ಒದಗಿಸಿದೆ. ಆದರೆ, ಇದು ಅನೇಕರಿಗೆ ತಿಳಿದಿಲ್ಲವಷ್ಟೆ. ಇದಕ್ಕಾಗಿ ಮೊದಲು ನಿಮ್ಮ ಫೇಸ್‌ಬುಕ್ಖಾತೆಯ ಸೆಟ್ಟಿಂಗ್‌ಗೆ ಹೋಗಿ ಅಲ್ಲಿ ಸೆಕ್ಯೂರಿಟಿ ಮತ್ತು ಪ್ರೈವಸಿಯಲ್ಲಿಲಿಗಸಿ ಕಾಂಟ್ಯಾಕ್ಟ್ಕ್ಲಿಕ್ ಮಾಡಬೇಕು. ಅಲ್ಲಿ ನೀವುಸಾಮಾಜಿಕ ಜಾಲತಾಣದಲ್ಲಿರುವಂತಹ ವ್ಯಕ್ತಿಯನ್ನು ನೀವು ಆಯ್ಕೆ ಮಾಡಿ ಸೆಲೆಕ್ಟ್ ಮಾಡಿದರೆ, ನೀವು ಸತ್ತ ನಂತರ ವ್ಯಕ್ತಿ ನಿಮ್ಮಖಾತೆಯನ್ನು ನಿಭಾಯಿಸುವಂತಹವರಾಗಿತ್ತಾರೆ.

ಇನ್ಸ್ಟಾಗ್ರಾಮ್:
ಹಾಗೆಯೆ ಫೇಸ್‌ಬುಕ್ ಬಳಕೆದಾರರು ತಮ್ಮ ಖಾತೆಗಳನ್ನು ಅಳಿಸಲು ಅಥವಾ ಅವರ ಸಾವಿನ ನಂತರ ಅವುಗಳನ್ನುಸ್ಮರಣಾರ್ಥವಾಗಿ ಪರಿವರ್ತಿಸಲು ಆಯ್ಕೆಯನ್ನು ಹೊಂದಿರುತ್ತಾರೆ. ಸ್ಮರಣೀಯವಾದ ಫೇಸ್‌ಬುಕ್ ಪುಟವು ಇತರ ಪುಟಗಳಂತೆಕಾಣುತ್ತದೆ. ಆದರೆ, ವ್ಯಕ್ತಿಯ ಹೆಸರಿನ ಮುಂದೆ “Remembering” ಎಂಬ ಪದವನ್ನು ನೋಡಬಹುದು. ಫೇಸ್‌ಬುಕ್‌ನಂತೆಯೇ, ಇನ್ಸ್ಟಾಗ್ರಾಮ್ ಖಾತೆಯನ್ನು ಸ್ಮರಣೀಯಗೊಳಿಸಬಹುದು ಅಥವಾ ಅಳಿಸಬಹುದಾದ ಆಯ್ಕೆಯನ್ನು ಹೊಂದಿದೆ. ಆದರೆಖಾತೆಯನ್ನು ಸ್ಮರಣಾರ್ಥವಾಗಿಸಲು, ಜನರು ಮರಣದ ಪುರಾವೆಯೊಂದಿಗೆ ಇನ್ಸ್ಟಾಗ್ರಾಮ್ ಅನ್ನು ಸಂಪರ್ಕಿಸಬೇಕು.

ಟ್ವಿಟರ್:ವಿಶ್ವದಲ್ಲಿ ಮತ್ತೊಂದು ಜನಪ್ರಿಯ ಸಾಮಾಜಿಕ ಜಾಲತಾಣವೆಂದರೆ ಟ್ವಿಟರ್. ಸಾವಿನ ಬಳಿಕ ಖಾತೆ ಯಾರು ಮುಂದುವರಿಸಿಕೊಂಡುಹೋಗಬಹುದು ಎನ್ನುವ ಬಗ್ಗೆ ಯಾವುದೇ ನಿಯಮವಿಲ್ಲ. ಆದರೆ ಮೃತನ ಕುಟುಂಬದವರು ಖಾತೆ ಮುಚ್ಚಬೇಕೆಂದು ಟ್ವಿಟರ್ಗೆಮನವಿ ಮಾಡಿಕೊಳ್ಳುವ ಅವಕಾಶವಿದೆ. ಖಾತೆದಾರನ ಕುಟುಂಬದವರು ಎಂದು ದೃಢಪಟ್ಟ ಬಳಿಕವಷ್ಟೇ ಖಾತೆಯ ಪೋಸ್ಟ್, ಫೋಟೋ ಮತ್ತು ಖಾತೆ ತೆಗೆದು ಹಾಕಲಾಗುವುದು. ಮರಣಪ್ರಮಾಣ ಪತ್ರ ಸಲ್ಲಿಸುವುದು ಅತೀ ಅಗತ್ಯ.

ಜಿಮೇಲ್:ಜಿಮೇಲ್‌ನಲ್ಲಿ ಸಹ ಖಾತೆಯನ್ನು ನಿಷ್ಕ್ರಿಯ ಮಾಡುವ ಅವಕಾಶಗಳನ್ನು ಗೂಗಲ್ ನೀಡಿದ್ದು, ಅದಕ್ಕಾಗಿಪ್ರಿ ಸೆಲೆಕ್ಟೆಡ್‌ ಪೀರಿಡ್ಆಯ್ಕೆ ಮತ್ತು ಖಾತೆ ಡಿಆಕ್ಟಿವ್ ಮಾಡಲು ಕುಟುಂಬ ಸದಸ್ಯರಿಗೆ ಆಕ್ಸಸ್‌ ನೀಡುವ ಆಯ್ಕೆಗಳನ್ನು ನೀಡಿದೆ. ಬಳಕೆದಾರರು ಪ್ರಿಸೆಲೆಕ್ಟೆಡ್ ಪೀರಿಡ್ ಆಯ್ಕೆಯ ಡಿಆಕ್ಟಿವ್ ಮಾಡುವ ಅವಕಾಶ ಇದೆ. ಬಳಕೆದಾರ ಇಲ್ಲವಾದಾಗ ಅವರ ಕುಟುಂಬ ಸದಸ್ಯರು ಖಾತೆಡಿಆಕ್ಟಿವ್ ಮಾಡಲು ಆಕ್ಸಸ್ ನೀಡುವ ಆಯ್ಕೆ ಗೂಗಲ್ ನೀಡಿದೆ.

ಯೂ ಟ್ಯೂಬ್:ಯೂ ಟ್ಯೂಬ್ ಖಾತೆದಾರರು ತಮ್ಮ ಭವಿಷ್ಯದ ಬಗ್ಗೆ ನಿರ್ಧರಿಸಲು ಅವಕಾಶ ನೀಡಿದೆ. ಯೂ ಟ್ಯೂಬ್​​ನಲ್ಲಿ ಹಣ ಸಂಪಾದನೆಮಾಡುವಂತಹ ಲಕ್ಷಾಂತರ ಮಂದಿಗೆ ಇದು ತುಂಬಾ ಒಳ್ಳೆಯ ಆಯ್ಕೆ. ಸಾವಿನ ಬಳಿಕ ನಿಮ್ಮ ಚಾನೆಲ್ ಅನ್ನು ಯಾರುನಿರ್ವಹಿಸಬಹುದು ಎನ್ನುವ ಬಗ್ಗೆ ಒಂದು ಕಾನೂನು ಪತ್ರ ಸಲ್ಲಿಸಬೇಕು. ಆಯ್ಕೆ ಮಾಡದೇ ಇದ್ದರೆ ಕೆಲವು ಸಮಯದ ತನಕಯಾವುದೇ ಪ್ರತಿಕ್ರಿಯೆ ಇಲ್ಲದೆ ಇರುವಂತಹ ನಿಮ್ಮ ಖಾತೆಯನ್ನು ಯೂ ಟ್ಯೂಬ್ ಮುಚ್ಚುತ್ತದೆ. ನೀವು ಗೂಗಲ್ ಇನ್ ಆಯಕ್ಟಿವ್ಅಕೌಂಟ್ ಮ್ಯಾನೇಜರ್ ಮೂಲಕ ಒಬ್ಬ ನಂಬಿಕಸ್ಥ ವ್ಯಕ್ತಿಗೆ ಖಾತೆಯ ನಿರ್ವಹಣೆ ನೀಡಬಹುದು.

ಇವಿಷ್ಟು ಮಾಹಿತಿಗಳು ನಿಮಗಾಗಿ. ಇದರಲ್ಲಿ ನಿಮ್ಮ ಅಕೌಂಟ್ ಗಳಿದ್ದರೆ ಈಗಲೇ ಅಪ್ಡೇಟ್ ಮಾಡ್ಕೊಳ್ಳಿ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »