TOP STORIES:

FOLLOW US

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…!!!


ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ..?. ರೀತಿಯ ಅನೇಕ ಪ್ರಶ್ನೆಗಳುಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ತುಂಬಾ ಪರಿಣಾಮ ಬೀರಿರುವುದು ನಿಜ. ಹೆಚ್ಚಿನ ಜನರಲ್ಲಿ ಕನಿಷ್ಠಯಾವುದಾದರೂ ಒಂದು ರೀತಿಯ ಸಾಮಾಜಿಕ ಜಾಲತಾಣದ ಖಾತೆ ಇದ್ದೇ ಇರುತ್ತದೆ. ಆದರೆ ನಿಮ್ಮ ಸಾವಿನ ಬಳಿಕ ಖಾತೆಏನಾಗುವುದು ಎಂದು ನಿಮಗೆ ತಿಳಿದಿದೆಯಾ?. ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆಏನಾಗುತ್ತದೆ, ಯಾರಾದರು ನಮ್ಮ ಖಾತೆಯನ್ನು ಹ್ಯಾಕ್ ಮಾಡಿ ಕೆಟ್ಟ ಸಂದೇಶ ಫೋಟೋಗಳನ್ನು ಹಂಚಿಕೊಂಡರೆ ಏನುಮಾಡೋದು..? ರೀತಿಯ ಅನೇಕ ಪ್ರಶ್ನೆಗಳು ಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ಫೇಸ್ಬುಕ್:
ವಿವಿಧ ರೀತಿಯ ಸಾಮಾಜಿಕ ಜಾಲತಾಣಗಳು ಅದರದ್ದೇ ಆಗಿರುವ ಕೆಲವೊಂದು ಖಾಸಗಿ ನಿಯಮಗಳನ್ನು ರೂಪಿಸಿರುತ್ತವೆ. ಫೇಸ್‌ಬುಕ್ ಅಂತೂ ನೀವು ಸತ್ತ ಮೇಲೆ ನಿಮ್ಮ ಖಾತೆಯನ್ನು ಯಾರು ನಿರ್ವಹಿಸಬೇಕೆಂಬುದನ್ನು ಮೊದಲೇ ನಿರ್ಧರಿಸುವುದಕ್ಕೆಬಳಕೆದಾರರಿಗೆ ಸೌಲಭ್ಯವನ್ನು ಕೂಡ ಒದಗಿಸಿದೆ. ಆದರೆ, ಇದು ಅನೇಕರಿಗೆ ತಿಳಿದಿಲ್ಲವಷ್ಟೆ. ಇದಕ್ಕಾಗಿ ಮೊದಲು ನಿಮ್ಮ ಫೇಸ್‌ಬುಕ್ಖಾತೆಯ ಸೆಟ್ಟಿಂಗ್‌ಗೆ ಹೋಗಿ ಅಲ್ಲಿ ಸೆಕ್ಯೂರಿಟಿ ಮತ್ತು ಪ್ರೈವಸಿಯಲ್ಲಿಲಿಗಸಿ ಕಾಂಟ್ಯಾಕ್ಟ್ಕ್ಲಿಕ್ ಮಾಡಬೇಕು. ಅಲ್ಲಿ ನೀವುಸಾಮಾಜಿಕ ಜಾಲತಾಣದಲ್ಲಿರುವಂತಹ ವ್ಯಕ್ತಿಯನ್ನು ನೀವು ಆಯ್ಕೆ ಮಾಡಿ ಸೆಲೆಕ್ಟ್ ಮಾಡಿದರೆ, ನೀವು ಸತ್ತ ನಂತರ ವ್ಯಕ್ತಿ ನಿಮ್ಮಖಾತೆಯನ್ನು ನಿಭಾಯಿಸುವಂತಹವರಾಗಿತ್ತಾರೆ.

ಇನ್ಸ್ಟಾಗ್ರಾಮ್:
ಹಾಗೆಯೆ ಫೇಸ್‌ಬುಕ್ ಬಳಕೆದಾರರು ತಮ್ಮ ಖಾತೆಗಳನ್ನು ಅಳಿಸಲು ಅಥವಾ ಅವರ ಸಾವಿನ ನಂತರ ಅವುಗಳನ್ನುಸ್ಮರಣಾರ್ಥವಾಗಿ ಪರಿವರ್ತಿಸಲು ಆಯ್ಕೆಯನ್ನು ಹೊಂದಿರುತ್ತಾರೆ. ಸ್ಮರಣೀಯವಾದ ಫೇಸ್‌ಬುಕ್ ಪುಟವು ಇತರ ಪುಟಗಳಂತೆಕಾಣುತ್ತದೆ. ಆದರೆ, ವ್ಯಕ್ತಿಯ ಹೆಸರಿನ ಮುಂದೆ “Remembering” ಎಂಬ ಪದವನ್ನು ನೋಡಬಹುದು. ಫೇಸ್‌ಬುಕ್‌ನಂತೆಯೇ, ಇನ್ಸ್ಟಾಗ್ರಾಮ್ ಖಾತೆಯನ್ನು ಸ್ಮರಣೀಯಗೊಳಿಸಬಹುದು ಅಥವಾ ಅಳಿಸಬಹುದಾದ ಆಯ್ಕೆಯನ್ನು ಹೊಂದಿದೆ. ಆದರೆಖಾತೆಯನ್ನು ಸ್ಮರಣಾರ್ಥವಾಗಿಸಲು, ಜನರು ಮರಣದ ಪುರಾವೆಯೊಂದಿಗೆ ಇನ್ಸ್ಟಾಗ್ರಾಮ್ ಅನ್ನು ಸಂಪರ್ಕಿಸಬೇಕು.

ಟ್ವಿಟರ್:ವಿಶ್ವದಲ್ಲಿ ಮತ್ತೊಂದು ಜನಪ್ರಿಯ ಸಾಮಾಜಿಕ ಜಾಲತಾಣವೆಂದರೆ ಟ್ವಿಟರ್. ಸಾವಿನ ಬಳಿಕ ಖಾತೆ ಯಾರು ಮುಂದುವರಿಸಿಕೊಂಡುಹೋಗಬಹುದು ಎನ್ನುವ ಬಗ್ಗೆ ಯಾವುದೇ ನಿಯಮವಿಲ್ಲ. ಆದರೆ ಮೃತನ ಕುಟುಂಬದವರು ಖಾತೆ ಮುಚ್ಚಬೇಕೆಂದು ಟ್ವಿಟರ್ಗೆಮನವಿ ಮಾಡಿಕೊಳ್ಳುವ ಅವಕಾಶವಿದೆ. ಖಾತೆದಾರನ ಕುಟುಂಬದವರು ಎಂದು ದೃಢಪಟ್ಟ ಬಳಿಕವಷ್ಟೇ ಖಾತೆಯ ಪೋಸ್ಟ್, ಫೋಟೋ ಮತ್ತು ಖಾತೆ ತೆಗೆದು ಹಾಕಲಾಗುವುದು. ಮರಣಪ್ರಮಾಣ ಪತ್ರ ಸಲ್ಲಿಸುವುದು ಅತೀ ಅಗತ್ಯ.

ಜಿಮೇಲ್:ಜಿಮೇಲ್‌ನಲ್ಲಿ ಸಹ ಖಾತೆಯನ್ನು ನಿಷ್ಕ್ರಿಯ ಮಾಡುವ ಅವಕಾಶಗಳನ್ನು ಗೂಗಲ್ ನೀಡಿದ್ದು, ಅದಕ್ಕಾಗಿಪ್ರಿ ಸೆಲೆಕ್ಟೆಡ್‌ ಪೀರಿಡ್ಆಯ್ಕೆ ಮತ್ತು ಖಾತೆ ಡಿಆಕ್ಟಿವ್ ಮಾಡಲು ಕುಟುಂಬ ಸದಸ್ಯರಿಗೆ ಆಕ್ಸಸ್‌ ನೀಡುವ ಆಯ್ಕೆಗಳನ್ನು ನೀಡಿದೆ. ಬಳಕೆದಾರರು ಪ್ರಿಸೆಲೆಕ್ಟೆಡ್ ಪೀರಿಡ್ ಆಯ್ಕೆಯ ಡಿಆಕ್ಟಿವ್ ಮಾಡುವ ಅವಕಾಶ ಇದೆ. ಬಳಕೆದಾರ ಇಲ್ಲವಾದಾಗ ಅವರ ಕುಟುಂಬ ಸದಸ್ಯರು ಖಾತೆಡಿಆಕ್ಟಿವ್ ಮಾಡಲು ಆಕ್ಸಸ್ ನೀಡುವ ಆಯ್ಕೆ ಗೂಗಲ್ ನೀಡಿದೆ.

ಯೂ ಟ್ಯೂಬ್:ಯೂ ಟ್ಯೂಬ್ ಖಾತೆದಾರರು ತಮ್ಮ ಭವಿಷ್ಯದ ಬಗ್ಗೆ ನಿರ್ಧರಿಸಲು ಅವಕಾಶ ನೀಡಿದೆ. ಯೂ ಟ್ಯೂಬ್​​ನಲ್ಲಿ ಹಣ ಸಂಪಾದನೆಮಾಡುವಂತಹ ಲಕ್ಷಾಂತರ ಮಂದಿಗೆ ಇದು ತುಂಬಾ ಒಳ್ಳೆಯ ಆಯ್ಕೆ. ಸಾವಿನ ಬಳಿಕ ನಿಮ್ಮ ಚಾನೆಲ್ ಅನ್ನು ಯಾರುನಿರ್ವಹಿಸಬಹುದು ಎನ್ನುವ ಬಗ್ಗೆ ಒಂದು ಕಾನೂನು ಪತ್ರ ಸಲ್ಲಿಸಬೇಕು. ಆಯ್ಕೆ ಮಾಡದೇ ಇದ್ದರೆ ಕೆಲವು ಸಮಯದ ತನಕಯಾವುದೇ ಪ್ರತಿಕ್ರಿಯೆ ಇಲ್ಲದೆ ಇರುವಂತಹ ನಿಮ್ಮ ಖಾತೆಯನ್ನು ಯೂ ಟ್ಯೂಬ್ ಮುಚ್ಚುತ್ತದೆ. ನೀವು ಗೂಗಲ್ ಇನ್ ಆಯಕ್ಟಿವ್ಅಕೌಂಟ್ ಮ್ಯಾನೇಜರ್ ಮೂಲಕ ಒಬ್ಬ ನಂಬಿಕಸ್ಥ ವ್ಯಕ್ತಿಗೆ ಖಾತೆಯ ನಿರ್ವಹಣೆ ನೀಡಬಹುದು.

ಇವಿಷ್ಟು ಮಾಹಿತಿಗಳು ನಿಮಗಾಗಿ. ಇದರಲ್ಲಿ ನಿಮ್ಮ ಅಕೌಂಟ್ ಗಳಿದ್ದರೆ ಈಗಲೇ ಅಪ್ಡೇಟ್ ಮಾಡ್ಕೊಳ್ಳಿ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »