TOP STORIES:

FOLLOW US

ನೃತ್ಯಪಟು ಬಹುಮುಖ ಬಾಲ ಪ್ರತಿಭೆ ದಿಶಾ ಕೆ ಪೂಜಾರಿ


‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬ ಮಾತಿನಂತೆ ಚಿಕ್ಕ ವಯಸ್ಸಿನಲ್ಲೇ ಹಲವು ಪ್ರಶಸ್ತಿಗಳನ್ನು ಮುಡಿಗೆರಿಸಿ ಕೊಂಡವಳು.’ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು’ ಎನ್ನುವಾಗೆ ಇನ್ನೂ 11 ವರ್ಷದಲ್ಲೇ ಜಿಲ್ಲಾಮಟ್ಟ,ರಾಜ್ಯ ಮಟ್ಟದವರೆಗೆ ತನ್ನ ಪ್ರತಿಭೆಯನ್ನು ಪ್ರದರ್ಶಿಸಿ ಸೈ ಎನಿಸಿಕೊಂಡು,ಸಾಧನೆಯ ಹಾದಿಯಲ್ಲಿ ಹೆಜ್ಜೆಗಳನ್ನಿಡುತ್ತ ಸಾಗುತ್ತಿರುವ ಹೆಮ್ಮೆಯ ನೃತ್ಯಪಟು ಬಹುಮುಖ ಬಾಲ ಪ್ರತಿಭೆ ದಿಶಾ.ಕೆ.ಪೂಜಾರಿ.

ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕೇಶವ ಪೂಜಾರಿ ಮತ್ತು ರಾಜೀವಿ.ಕೆ ದಂಪತಿಗಳ ಮೊದಲನೆ ಸುಪುತ್ರಿಯಾಗಿ 6/10/2009ರಲ್ಲಿ ಜನಿಸಿದರು. ಒಂದು ಸಹೋದರ ಒಳಗೊಂಡ ಚಿಕ್ಕ ಸಂಸಾರ ಇವರದ್ದು. ಪ್ರಸ್ತುತ ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ.

ಚಿಕ್ಕ ವಯಸ್ಸಿನಲ್ಲೇ ನೃತ್ಯದಲ್ಲಿ ಆಸಕ್ತಿ ಇದ್ದ ಇವರು, ಈಗಾಗಲೇ 500 ಮಿಕ್ಕಿ ವೇದಿಕೆಯಲ್ಲಿ ತನ್ನ ಕಲೆಯನ್ನು ಪ್ರದರ್ಶಿಸಿದ್ದಾರೆ.ಇಷ್ಟೇ ಅಲ್ಲದೆ ಯಕ್ಷಗಾನ,ನಾಟಕ,ಚಿತ್ರಕಲೆ,ಯೋಗ,ಭರತನಾಟ್ಯ,ಸಂಗೀತ ಮತ್ತು ನಿರೂಪಣೆ ಕ್ಷೇತ್ರದಲ್ಲು ಮುಂಚೂಣಿಯಲ್ಲಿರುವುದು ಇವರಲ್ಲಿ ಇರುವ ಪ್ರತಿಭೆಗೆ ಸಾಕ್ಷಿಯಾಗಿದೆ. ಚಿಕ್ಕ ವಯಸ್ಸಿನಲ್ಲೇ ಹತ್ತು-ಹಲವು ಸಂಘ-ಸಂಸ್ಥೆಗಳು ಸನ್ಮಾನಗಳು ಇವರ ಮಡಿಲಿಗೆ ಸೇರಿದೆ. ಸ್ಥಳೀಯ ಟಿ.ವಿ ಚಾನೆಲ್ ಗಳು ನಡೆಸಿದ ಡ್ಯಾನ್ಸ್ ಸ್ಪರ್ಧೆಯಲ್ಲಿ ಪಾಲ್ಗೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ‘ರಾರಾಸಂ ಫೌಂಡೇಶನ್ ರವರು ನಡೆಸಿದ ಡ್ಯಾನ್ಸ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಹಾಗೂ ಯುವವಾಹಿನಿ ನಡೆಸುವ ‘ಡೆನ್ನಾನ ಡೆನ್ನಾನ’ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಜನರ ಮನಸ್ಸನ್ನು ಗೆದ್ದ ಹೆಮ್ಮೆಯ ಬಾಲ ಸಾಧಕಿ.#Namma Tv ಚಾನೆಲ್ ನಡೆಸಿದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ‘ಬಿಟ್ ದಿ ಬಿಟ್’ ನೃತ್ಯ ಸ್ಪರ್ಧೆಯಲ್ಲಿ, ‘ವಾಯ್ಸ್ ಝೊನ್’ ಏರ್ಪಡಿಸಿದ ‘ನಮ್ಮ ಡ್ಯಾನ್ಸ್ ಚಾಂಪಿಯನ್’ ಟಿ.ವಿ ಶೋನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.

#Bodhi media ಆಯೋಜಿಸಿದ “ಗೋಲ್ಡನ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್” ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಗಳಿಸಿದ್ದಾರೆ. “ಡ್ಯಾನ್ಸ್ ಮಾಡಿ ಬಹುಮಾನ ಗೆಲ್ಲಿರಿ” ಎನ್ನುವ ವಿಭಿನ್ನ ಡ್ಯಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ ಕೀರ್ತಿ ಈ ಬಾಲ ಪ್ರತಿಭೆಯದ್ದು, ಇಷ್ಟೇ ಅಲ್ಲದೆ ಮಾಜಿ ಸಚಿವರಾದ ರಮನಾಥ ರೈರವರಿಂದ ಸನ್ಮಾನವನ್ನು ಗಿಟ್ಟಿಸಿಕೊಂಡು,ಹೆಗ್ಗಳಿಕೆ ಮಾತುಗಳನ್ನಾಡಿ,ಶುಭ ಹಾರೈಸಿದ್ದಾರೆ. ಕನ್ನಡ ಚಲನಚಿತ್ರದಲ್ಲಿ ಬಾಲ ನಟಿಯಾಗಿ ಬಣ್ಣ ಹಚ್ಚಿ ನಟನೆ ಮಾಡಿರುವುದು ಇವರ ಸಾಧನೆಯ ದೊಡ್ಡ ಹೆಜ್ಜೆ ಆಗಿದೆ ಮತ್ತು ಈ ಚಲನಚಿತ್ರಯು ಸಾಧ್ಯದಲ್ಲೆ ಬಿಡುಗಡೆಗೊಳ್ಳಲಿದೆ.ಚಿಕ್ಕ ವಯಸ್ಸಿನಲ್ಲೇ ಹಲವು ಶಾರ್ಟ್ ಫಿಲ್ಮ್ ಮತ್ತು ಆಲ್ಬಮ್ ಸಾಂಗ್ ನಲ್ಲಿ ಪಾತ್ರಗಳನ್ನು ಮಾಡಿ ನಟನೆಯಲ್ಲು ತಮ್ಮ ಛಾಪುನ್ನು ಮೂಡಿಸಿದ್ದಾರೆ.

ಹತ್ತು ಹಲವು ಪ್ರಶಸ್ತಿ,ಸನ್ಮಾನಗಳನ್ನು ಬಾಚಿಕೊಂಡಿರುವ ದಿಶಾರವರು ಮತ್ತು ಈಗಾಗಲೇ ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇವರು ಪ್ರಸ್ತುತ ‘ಶ್ರೀ ಚಿಂತಾಮಣಿ ಡ್ಯಾನ್ಸ್ ಗ್ರೂಪ್’ ಕಡೇಶಿವಾಲಯದ ತಂಡದ ನಾಯಕ ಮತ್ತು ಕೋರಿಯೊಗ್ರಾಪರ್ ಆದ ಮಹೇಶ್ ಕುಲಾಲ್ ಇವರಿಂದ ನೃತ್ಯವನ್ನು ಅಭ್ಯಾಸ ಮಾಡುತ್ತಿದ್ದಾರೆ.

 

ನಿಮ್ಮೆಲ್ಲಾ ಕನಸು ನನಸಾಗಲಿ,ಸಾಧನೆಯ ಶಿಖರವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ,ಸಾಧನೆಯ ಹಾದಿ ಸುಗಮವಾಗಲಿ,ಇನ್ನಷ್ಟು ಅವಕಾಶಗಳು ನಿಮ್ಮ ಮಡಿಲಿಗೆ ಸೇರಲಿ,ಪ್ರಶಸ್ತಿ ಪುರಸ್ಕಾರಗಳು ನಿಮಗೆ ಹರಸಿ ಬರಲಿ ಎನ್ನುವ ಶುಭಾಶಯಗಳೊಂದಿಗೆ,ನೃತ್ಯ ಲೋಕದಲ್ಲಿ ಇನ್ನೂ ಎತ್ತರದ ಸ್ಥಾನಕ್ಕೇರಲು ಈ ಪ್ರತಿಭೆಯನ್ನು ಹರಸಿ,ಹಾರೈಸಿ,ಆರ್ಶಿವಾದಿಸೋಣ ಎನ್ನುವ ಕೋರಿಕೆ.

✍ ರಾಜೇಶ್ ಎಸ್ ಬಲ್ಯ


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »