TOP STORIES:

ಪುಷ್ಪರಾಜ್ ಅಮಿನ್ ಮತ್ತು ತಂಡದಿಂದ ಮೈಕ್ರೋ ಲೈಟ್ ಸೀ ಪ್ಲೇನ್ ತಯಾರು – ಬೇಕಿದೆ ಸರಕಾರದ ಸಹಾಯ ಹಸ್ತ


ಉಡುಪಿ: ಒಂದೆಡೆ ಸರಕಾರಗಳು ದೇಶೀಯ ಉತ್ಪನ್ನ, ಸಂಶೋಧನೆಗಳಿಗೆ ಒತ್ತು ನೀಡಿ ಸ್ವದೇಶದಲ್ಲಿ ತಯಾರಾಗುವ ಅವಿಶ್ಕಾರಗಳಿಗೆ ವೇದಿಕೆ ಒಗದಿಸಲು ಚಿಂತನೆ ನಡೆಸುತ್ತಿದೆ. ಆದರೆ ಮತ್ತೊಂದೆಡೆ ಉಡುಪಿಯ ಹೆಜಮಾಡಿ ಎಂಬ ಪುಟ್ಟ ಹಳ್ಳಿಯಲ್ಲಿ ದೇಶದಲ್ಲೇ ಮೊದಲು ಎನ್ನುವ ರೀತಿಯಲ್ಲಿ ಸಂಶೋಧನೆ ಒಂದು ನಡೆದಿದ್ದು ಸರಕಾರದ ಸಹಾಯ ಹಸ್ತದ ನಿರೀಕ್ಷೆಯಲ್ಲಿದೆ.

ಉಡುಪಿಯ ಗಡಿಭಾಗ ಹೆಜಮಾಡಿ ಎಂಬ ಪುಟ್ಟ ಗ್ರಾಮದಲ್ಲಿ ಉತ್ಸಾಹಿ ಯುವ ಪಡೆ ತಮ್ಮದೇ ಸ್ವಂತ ಬಂಡವಾಳದೊಂದಿಗೆ ದೇಶದಲ್ಲೇ ಮೊದಲು ಎಂಬಂತೆ ಮೈಕ್ರೋ ಲೈಟ್ ಸೀ ಪ್ಲೇನ್ ಒಂದನ್ನು ತಯಾರು ಮಾಡಿದ್ದಾರೆ. ಈ ಸೀ ಪ್ಲೇನ್ ದೇಶೀಯ ನಿರ್ಮಿತ ಪ್ರಥಮ ಸೀ ಪ್ಲೇನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿನ ಪುಷ್ಪರಾಜ್ ಅಮಿನ್ ಎಂಬವರು ಈ ಯೋಜನೆಯ ರೂವಾರಿ. 8 ಮಂದಿ ಯುವಕ ಯುವತಿಯರ ಜೊತೆ ಗೂಡಿ ಈ ಸೀ ಪ್ಲೇನ್ ಅನ್ನು ತಯಾರಿಸಿದ್ದು ಇಲ್ಲಿನ ಶಾಂಭವಿ ನದಿಯಲ್ಲಿ ಯಶಸ್ವಿ ಪ್ರಾಯೋಗಿಕ ಹಾರಾಟ ಕೂಡಾ ನಡೆದಿದೆ, 1 ವರ್ಷದ ಕಠಿಣ ಪರಿಶ್ರಮ ಮತ್ತು ಸಂಶೋಧನೆಯ ಫಲವಾಗಿ ಸೀ ಪ್ಲೇನ್ ನಿರ್ಮಾಣವಾಗಿದ್ದು ಸುಮಾರು 7 ರಿಂದ 8 ಲಕ್ಷ.ರೂ. ವೆಚ್ಚ ತಗುಲಿದೆ.

“ಸಣ್ಣದಿಂದಲೇ ನನಗೆ ವಿಮಾನ ಹಾರಿಸಬೇಕು ಎಂಬ ಆಸೆ ಇದ್ದಿತ್ತು. ಕಳೆದ ಕೆಲ ವರ್ಷಗಳಲ್ಲಿ ಸಣ್ಣ ಸಣ್ಣ ವಿಮಾನದ ಮಾಡೆಲ್‌‌ಗಳನ್ನು ಮಾಡಿದ್ದೇನೆ. ಹಲವಾರು ಮಕ್ಕಳಿಗೆ ತರಬೇತಿಯನ್ನು ಕೂಡಾ ನೀಡಿದ್ದೇನೆ. ಓರ್ವ ವ್ಯಕ್ತಿ ಕುಳಿತುಕೊಂಡು ಹೋಗುವಂತಹ ವಿಮಾನ ಮಾಡಬೇಕು ಎಂಬ ಆಸೆ ಇದ್ದಿತ್ತು. ಆದರೆ ವಿಮಾನ ಮಾಡುವುದು ತುಂಬಾ ಕಷ್ಟಕರ. ಆಕಾಶದಲ್ಲಿ ಹಾರುವ ವಿಮಾನ ತಯಾರಿಸಲು ಜಾಗದ ಕೊರತೆ ಮತ್ತು ಹಣದ ಅವಶ್ಯಕತೆ ಕೂಡಾ ಇತ್ತು ಹೀಗಾಗಿ ನೀರಿನಲ್ಲಿ ಹೋಗುವ ವಿಮಾನವನ್ನು ತಯಾರಿಸಿದೆವು. ನನ್ನ ಮನೆಯ ಹತ್ತಿರವೇ ನದಿ ಇರುವುದರಿಂದ ಇದರ ಪ್ರಾಯೋಗಿಕ ಪ್ರಯೋಗಕ್ಕೆ ಮತ್ತು ಇನ್ನಿತರ ಕೆಲಸಕ್ಕೆ ಕೂಡಾ ಸುಲಭವಾಗಿತ್ತು. ಈ ಯೋಜನೆಗೆ ಸಹಕಾರಿಯಾಗುವಂತೆ ಸರಕಾರ ನಮಗೆ ಒಂದು ಸಣ್ಣ ಮಟ್ಟದ ವರ್ಕ್ ಶಾಪ್ ಮತ್ತು ಅಗತ್ಯ ಸವಲತ್ತುಗಳನ್ನು ಒದಗಿಸಿ ಕೊಡಬೇಕು” ಎನ್ನುತ್ತಾರೆ ಈ ತಂಡದ ಮುಖ್ಯಸ್ಥರು ಮತ್ತು ಮಾರ್ಗದರ್ಶಕರು ಆದ ಪುಷ್ಪರಾಜ್ ಅಮಿನ್.

ಈ ಇಡೀ ಸೀ ಪ್ಲೇನ್ ತಯಾರಾದದ್ದು ಪುಷ್ಪರಾಜ್ ಅವರ ಮನೆಯ ಅಂಗಳ ಗದ್ದೆ, ಮತ್ತು ತೋಟದಲ್ಲಿ. ಯಾವುದೇ ದೊಡ್ಡ ವರ್ಕ್ ಶಾಪ್ ಇಲ್ಲದೇ, ಆಧುನಿಕ ಉಪಕಣಗಳು ಇಲ್ಲದೇ ತಮ್ಮಲ್ಲಿ ಲಭ್ಯವಿರುವ ಉಪಕರಣಗಳನ್ನು ಬಳಸಿ ಈ ಸೀ ಪ್ಲೇನ್ ಅನ್ನು ತಯಾರು ಮಾಡಿದ್ದಾರೆ, ತಂಡದಲ್ಲಿ ಪುಷ್ಪರಾಜ್ ಅಮೀನ್ ಸೇರಿದಂತೆ, ಟ್ರೈನಿ ಪೈಲಟ್ ವಿನಯಾ ಯು, ಯಾಚ್ ಕ್ಯಾಪ್ಟನ್ ವಸುರಾಜ್ ಅಮಿನ್, ವೃತ್ತಿಪರ ಡ್ರೋನ್‌‌ ಆಪರೇಟರ್ ಅಭಿಷೇಕ್ ಎಂ ಕೋಟ್ಯಾನ್, ಏರೋನಾಟಿಕಲ್ ವಿದ್ಯಾರ್ಥಿ ಉತ್ಸವ್ ಉಮೇಶ್, ಏರೋನಾಟಿಕಲ್ ಪ್ರಾಧ್ಯಾಪಕ ಶಯನಿ ರಾವ್, ರೇಶ್ಮಾ ಬಂಗೇರ, ಅಶ್ವಿನಿ ರಾವ್ ಸೇರಿದ್ದಾರೆ.

“ಈ ಸೀ ಪ್ಲೇನ್ 190 ಕೆಜಿ ಇದ್ದು, ಓರ್ವ ಪೈಲಟ್ ಕುಳಿತುಕೊಂಡು ಸಂಚರಿಸಲು ಸಾಧ್ಯವಿದೆ. ನಮ್ಮ ಪ್ರಥಮ ಪ್ರಯತ್ನದಲ್ಲೇ ನಾವು ಯಶಸನ್ನು ಕಂಡಿದ್ದೇವೆ. ನಮ್ಮ ದೇಶದಲ್ಲಿ ಇಷ್ಟು ಕಡಿಮೆ ವೆಚ್ಚ ಮತ್ತು ಸಮಯದಲ್ಲಿ ತಯಾರಾಗಿರುವ ಪ್ರಥಮ ವಿಮಾನ ಇದು. ಇದನ್ನು ದ್ವೀಪಗಳ ನಡುವೆ ಸಂಚಾರಕ್ಕೆ, ನೆರೆ ಸಂಧರ್ಭದಲ್ಲಿ ಪರಿಹಾರ ಕಾರ್ಯಕ್ಕೆ, ಪ್ರವಾಸೋದ್ಯಮಕ್ಕೆ, ಬಳಕೆ ಮಾಡಬಹುದು. ಆದರೆ ಸರಿಯಾದ ವರ್ಕ್ ಶಾಪ್, ಉಪಕರಣಗಳು ಇಲ್ಲದೇ ಈ ಪ್ರಯೋಗ ಯಶಸ್ವಿಯಾಗಿದೆ” ಎನ್ನುತ್ತಾರೆ ತಂಡದ ಸದಸ್ಯ ಶಯನಿ ರಾವ್.

ದೃತಿ ಮೈಕ್ರೋಲೈಟ್ ಸೀ ಪ್ಲೇನ್ ಎಂದು ಇದನ್ನು ಹೆಸರಿಸಲಾಗಿದ್ದು ಸುಮಾರು 120 ಕೆಜಿ ಭಾರವಿದೆ. 33 ಹೆಚ್.ಪಿ ಮೋಟಾರ್ ಅನ್ನು ಈ ಸೀ ಪ್ಲೇನ್‌‌ಗಾಗಿ ಬಳಸಲಾಗಿದೆ. ಗ್ರೇಡ್ ಅಲುಮಿನಿಯಂ, ಫೋಮ್, ಫೈಬರ್ ಬಟ್ಟೆ, ನೈಲಾನ್ ಬಟ್ಟೆ ಮತ್ತು ಇನ್ನಿತರ ಸಾಮಾಗ್ರಿಗಳನ್ನು ಈ ಸೀ ಪ್ಲೇನ್ ತಯಾರಿಯಲ್ಲಿ ಬಳಸಲಾಗಿದೆ. ತಂಡವು ಸೂಕ್ತ ಪರಿಕರ, ವ್ಯವಸ್ಥೆಗಳು ಲಭ್ಯವಾದಲ್ಲಿ ಮುಂದಿನ ದಿನಗಳಲ್ಲಿ 4,610 ಸೀಟರ್ ಸೀ ಪ್ಲೇನ್ ಗಳನ್ನು ತಯಾರಿಸಲು ಕೂಡಾ ಯೋಜನೆ ಹಾಕಿಕೊಳ್ಳುತ್ತಿದೆ.

ಈ ಪ್ರಯೋಗಕ್ಕೆ ಆಗಿರುವ ಖರ್ಚು ವೆಚ್ಚ ಎಲ್ಲವನ್ನೂ ತಂಡದ ಸದಸ್ಯರು, ಸ್ನೇಹಿತರು, ಮತ್ತು ಸಾಲ ಮಾಡುವ ಮೂಲಕ ನಿಭಾಯಿಸಿದ್ದಾರೆ.

ಈ ಮೊದಲು ಗುಜರಾತಿನ ಅಹಮದಾಬಾದ್‌ನಲ್ಲಿ ವಿದೇಶದಿಂದ ತರಿಸಿದ್ದ ಸೀ ಪ್ಲೇನ್ ಅನ್ನು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿ ಅದರಲ್ಲಿ ಪ್ರಯಾಣವನ್ನು ಕೂಡಾ ಮಾಡಿದ್ದರು. ಆದರೆ ದೇಶೀಯ ನಿರ್ಮಿತ ಪ್ರಥಮ ಸೀ ಪ್ಲೇನ್‌ಗೆ ಇದೀಗ ಅಗತ್ಯ ಬೆಂಬಲ ಬೇಕಾಗಿದೆ. ಸರಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಗಮನಹರಿಸಿ ಈ ಯುವ ಅವಿಷ್ಕಾರಿಗಳಿಗೆ ನೆರವಾಗಬೇಕಿದೆ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »