TOP STORIES:

ಪೆಟ್ರೋಲೂ ಬೇಡ. ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!


ನವದೆಹಲಿ: ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆಟ್ರೋಲ್‌ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಇಲೆಕ್ಟ್ರಿಕಲ್‌ ಗಾಡಿಗಳು ಬೀದಿಗಿಳಿದಿವೆ. ಬೈಕ್‌, ಸ್ಕೂಟರ್‌ ಅಷ್ಟೇ ಏಕೆ ಬಸ್ಸುಗಳು ಕೂಡ ಎಲೆಕ್ಟ್ರಿಕ್‌ ಆಗಿ ಪರಿವರ್ತನೆಗೊಂಡಿವೆ.

ಇದಾಗಲೇ ಇಲೆಕ್ಟ್ರಿಕ್‌ ಬೈಕ್‌ಗಳು ಭರ್ಜರಿ ಮಾರಾಟ ಕೂಡ ಆಗುತ್ತಿವೆ.

ಇಲೆಕ್ಟ್ರಿಕ್‌ ಚಾರ್ಜಿಂಗ್‌ ಬೈಕ್‌ಗಳು ನೂರಾರು ಕಿಲೋ ಮೀಟರ್‌ ಓಡುವುದು ನಿಜವಾದರೂ, ಕೆಲವು ಕಡೆಗಳಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಇಲ್ಲದೇ ಪರದಾಡುವ ಸ್ಥಿತಿ ಇದೆ. ಅಂಥವರಿಗೆ ಇನ್ನೊಂದು ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಪುದುಚೇರಿ ಮೂಲದ ವಿಜಯನ್ ಪ್ರೇಮಾನಂದ್.

ಇದರ ಬೆನ್ನಲ್ಲೇ ಯಾರೂ ಊಹಿಸದ ಹೊಸದೊಂದು ತಂತ್ರಜ್ಞಾನವನ್ನು ಇವರು ಕಂಡುಹಿಡಿದಿದ್ದಾರೆ. ಅದೇನೆಂದರೆ ಇವರು ಕಂಡುಹಿಡಿದಿರುವ ಬೈಕ್‌ ಅನ್ನು ಚಾರ್ಜ್‌ ಮಾಡುವ ಅಗತ್ಯ ಕೂಡ ಇಲ್ಲ, ಹಾಗೆಂದು ಪೆಟ್ರೋಲ್‌ ಬೇಡ್ವವೇ ಬೇಡ. ಹಾಗಿದ್ದರೆ ಅದೆಂಥ ತಂತ್ರಜ್ಞಾನ ಅಂದಿರಾ?

ವಿಜಯನ್ ಅವರು ಕಂಡುಹಿಡಿದಿರುವ ಈ ಬೈಕ್‌ನಲ್ಲಿ ಇರುವ ಎರಡು ಬ್ಯಾಟರಿಗಳು ತಂತಾನೇ ಚಾರ್ಜ್‌ ಆಗುತ್ತವೆ, ಅದೂ ಗಾಡಿ ಓಡ್ತಾ ಓಡ್ತಾನೆ ಇದು ಚಾರ್ಜ್‌ ಆಗುತ್ತದೆ. ನೀವು ಚಾರ್ಜಿಂಗ್ ಸ್ಟೇಷನ್‌ಗೆ ಹೋಗಬೇಕಾಗಿಲ್ಲ. ಚಲಿಸುವಾಗ ಬೈಕ್‌ ತಂತಾನೇಯಾಗಿ ಚಾರ್ಜ್ ಆಗುತ್ತದೆ, ಇದರಿಂದ ವಿದ್ಯುತ್ ಉಳಿತಾಯ ಕೂಡ ಆಗುತ್ತದೆ ಎನ್ನುತ್ತಾರೆ ವಿಜಯನ್‌. ಇದಕ್ಕಾಗಿ ಇವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆಯಿಂದ ಪೇಟೆಂಟ್‌ ಕೂಡ ಪಡೆದುಕೊಂಡಿದ್ದಾರೆ.

‘ವಿದ್ಯುತ್‌ ಚಾರ್ಜಿಂಗ್‌ ಪಾಯಿಂಟ್‌ಗಳು ಬೇಕೆಂದ ಕಡೆಗಳಲ್ಲಿ ಸಿಗುವುದಿಲ್ಲ. ನಾನು ಕಂಡುಹಿಡಿದಿರುವ ಈ ಬೈಕ್‌ ಈ ಸಮಸ್ಯೆಯನ್ನು ನಿವಾರಿಸುತ್ತದೆ. ಚಾರ್ಜಿಂಗ್ ಸ್ಟೇಷನ್‌ನಲ್ಲಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ಇದರಲ್ಲಿ ಇರುವ ಬ್ಯಾಟರಿಗಳು ಪರಸ್ಪರ ಚಾರ್ಜ್ ಆಗುವಂತೆ ವಿನ್ಯಾಸ ಮಾಡಲಾಗಿದೆ. ಈ ಎರಡೂ ಬ್ಯಾಟರಿಗಳು ಚಾರ್ಜ್ ಆಗುವುದರಿಂದ ಶಕ್ತಿಯ ಬಳಕೆ ತುಂಬಾ ಕಡಿಮೆಯಾಗುತ್ತದೆ. ಇದರ ಅರ್ಥ ಬೇರೆ ಬ್ಯಾಟರಿಗಳಂತೆ ಬೇಗನೆ ಚಾರ್ಜ್‌ ಖಾಲಿಯಾಗುವುದಿಲ್ಲ’ ಎನ್ನುತ್ತಾರೆ ವಿಜಯನ್‌.

ಈ ತಂತ್ರಜ್ಞಾನವನ್ನು ಬಳಸಲು, ಹಲವು ವಾಹನ ತಯಾರಕರನ್ನು ಕೋರಲಾಗಿದೆ. ಕಂಪನಿಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ. ಇದೆಲ್ಲಾ ಓಕೆಯಾದರೆ ಇನ್ನು ಯಾವುದೇ ಸಮಸ್ಯೆ ಇರದ ಬೈಕ್‌ಗಳು ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿವೆ ಎನ್ನುವುದು ಅವರ ವಿಶ್ವಾಸ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »