TOP STORIES:

FOLLOW US

ಪೆಟ್ರೋಲೂ ಬೇಡ. ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!


ನವದೆಹಲಿ: ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆಟ್ರೋಲ್‌ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಇಲೆಕ್ಟ್ರಿಕಲ್‌ ಗಾಡಿಗಳು ಬೀದಿಗಿಳಿದಿವೆ. ಬೈಕ್‌, ಸ್ಕೂಟರ್‌ ಅಷ್ಟೇ ಏಕೆ ಬಸ್ಸುಗಳು ಕೂಡ ಎಲೆಕ್ಟ್ರಿಕ್‌ ಆಗಿ ಪರಿವರ್ತನೆಗೊಂಡಿವೆ.

ಇದಾಗಲೇ ಇಲೆಕ್ಟ್ರಿಕ್‌ ಬೈಕ್‌ಗಳು ಭರ್ಜರಿ ಮಾರಾಟ ಕೂಡ ಆಗುತ್ತಿವೆ.

ಇಲೆಕ್ಟ್ರಿಕ್‌ ಚಾರ್ಜಿಂಗ್‌ ಬೈಕ್‌ಗಳು ನೂರಾರು ಕಿಲೋ ಮೀಟರ್‌ ಓಡುವುದು ನಿಜವಾದರೂ, ಕೆಲವು ಕಡೆಗಳಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಇಲ್ಲದೇ ಪರದಾಡುವ ಸ್ಥಿತಿ ಇದೆ. ಅಂಥವರಿಗೆ ಇನ್ನೊಂದು ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಪುದುಚೇರಿ ಮೂಲದ ವಿಜಯನ್ ಪ್ರೇಮಾನಂದ್.

ಇದರ ಬೆನ್ನಲ್ಲೇ ಯಾರೂ ಊಹಿಸದ ಹೊಸದೊಂದು ತಂತ್ರಜ್ಞಾನವನ್ನು ಇವರು ಕಂಡುಹಿಡಿದಿದ್ದಾರೆ. ಅದೇನೆಂದರೆ ಇವರು ಕಂಡುಹಿಡಿದಿರುವ ಬೈಕ್‌ ಅನ್ನು ಚಾರ್ಜ್‌ ಮಾಡುವ ಅಗತ್ಯ ಕೂಡ ಇಲ್ಲ, ಹಾಗೆಂದು ಪೆಟ್ರೋಲ್‌ ಬೇಡ್ವವೇ ಬೇಡ. ಹಾಗಿದ್ದರೆ ಅದೆಂಥ ತಂತ್ರಜ್ಞಾನ ಅಂದಿರಾ?

ವಿಜಯನ್ ಅವರು ಕಂಡುಹಿಡಿದಿರುವ ಈ ಬೈಕ್‌ನಲ್ಲಿ ಇರುವ ಎರಡು ಬ್ಯಾಟರಿಗಳು ತಂತಾನೇ ಚಾರ್ಜ್‌ ಆಗುತ್ತವೆ, ಅದೂ ಗಾಡಿ ಓಡ್ತಾ ಓಡ್ತಾನೆ ಇದು ಚಾರ್ಜ್‌ ಆಗುತ್ತದೆ. ನೀವು ಚಾರ್ಜಿಂಗ್ ಸ್ಟೇಷನ್‌ಗೆ ಹೋಗಬೇಕಾಗಿಲ್ಲ. ಚಲಿಸುವಾಗ ಬೈಕ್‌ ತಂತಾನೇಯಾಗಿ ಚಾರ್ಜ್ ಆಗುತ್ತದೆ, ಇದರಿಂದ ವಿದ್ಯುತ್ ಉಳಿತಾಯ ಕೂಡ ಆಗುತ್ತದೆ ಎನ್ನುತ್ತಾರೆ ವಿಜಯನ್‌. ಇದಕ್ಕಾಗಿ ಇವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆಯಿಂದ ಪೇಟೆಂಟ್‌ ಕೂಡ ಪಡೆದುಕೊಂಡಿದ್ದಾರೆ.

‘ವಿದ್ಯುತ್‌ ಚಾರ್ಜಿಂಗ್‌ ಪಾಯಿಂಟ್‌ಗಳು ಬೇಕೆಂದ ಕಡೆಗಳಲ್ಲಿ ಸಿಗುವುದಿಲ್ಲ. ನಾನು ಕಂಡುಹಿಡಿದಿರುವ ಈ ಬೈಕ್‌ ಈ ಸಮಸ್ಯೆಯನ್ನು ನಿವಾರಿಸುತ್ತದೆ. ಚಾರ್ಜಿಂಗ್ ಸ್ಟೇಷನ್‌ನಲ್ಲಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ಇದರಲ್ಲಿ ಇರುವ ಬ್ಯಾಟರಿಗಳು ಪರಸ್ಪರ ಚಾರ್ಜ್ ಆಗುವಂತೆ ವಿನ್ಯಾಸ ಮಾಡಲಾಗಿದೆ. ಈ ಎರಡೂ ಬ್ಯಾಟರಿಗಳು ಚಾರ್ಜ್ ಆಗುವುದರಿಂದ ಶಕ್ತಿಯ ಬಳಕೆ ತುಂಬಾ ಕಡಿಮೆಯಾಗುತ್ತದೆ. ಇದರ ಅರ್ಥ ಬೇರೆ ಬ್ಯಾಟರಿಗಳಂತೆ ಬೇಗನೆ ಚಾರ್ಜ್‌ ಖಾಲಿಯಾಗುವುದಿಲ್ಲ’ ಎನ್ನುತ್ತಾರೆ ವಿಜಯನ್‌.

ಈ ತಂತ್ರಜ್ಞಾನವನ್ನು ಬಳಸಲು, ಹಲವು ವಾಹನ ತಯಾರಕರನ್ನು ಕೋರಲಾಗಿದೆ. ಕಂಪನಿಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ. ಇದೆಲ್ಲಾ ಓಕೆಯಾದರೆ ಇನ್ನು ಯಾವುದೇ ಸಮಸ್ಯೆ ಇರದ ಬೈಕ್‌ಗಳು ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿವೆ ಎನ್ನುವುದು ಅವರ ವಿಶ್ವಾಸ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »