TOP STORIES:

ಪೊಲೀಸ್ ಇಲಾಖೆಯಲ್ಲಿ ಗೈದ ಸಾಧನೆಗಾಗಿ ಮುಖ್ಯಮಂತ್ರಿ ಚಿನ್ನದ ಪದಕದಿಂದ ಪುರಸ್ಕೃತನಾದ ಗೋಪಾಲಕೃಷ್ಣ .ಕೆ ಬಜ್ಪೆ


ಮಂಗಳೂರು: ಮಂಗಳೂರಿನ ಕುಲಶೇಖರದ ವಾಮಯ್ಯ ಪೂಜಾರಿ ಮತ್ತು ಚಂದ್ರಾವತಿ ದಂಪತಿ ಸುಪುತ್ರರಾದ ಗೋಪಾಲಕೃಷ್ಣ .ಕೆ ಬಜೆ ಇವರು ಈ ಭುವಿಯ ಬೆಳಕನ್ನು ಕಂಡ ಇವರು ಸುಸಂಸ್ಕೃತ ವಾತಾವರಣದೊಂದಿಗೆ ಸಂಪದ್ಭರಿತ ಸ್ನಾತಕೋತ್ತರ ಪದವಿ ಶಿಕ್ಷಣ ದೊಂದಿಗೆ ಒಟ್ಟು ಸಮೃದ್ಧಿಯನ್ನು ಸಂಪಾದಿಸಿದವರು.1996 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಪ್ರಥಮವಾಗಿ ವಿಟ್ಲ ಠಾಣಾ ಬಳಿಕ ಬಜ್ಪೆ ,ನಂತರ ಪದೋನ್ನತಿ ಹೊಂದಿ ಕಾವೂರು ಠಾಣೆಯಲ್ಲಿ ಸೇವೆ ಸಲ್ಲಿಸುತ್ತಾ ಪ್ರಸ್ತುತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಇಲಾಖಾ ಸಂಪರ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಇವರು MBA ಟೂರಿಸಂ ಮಾಡುತ್ತಾ ಇದ್ದಾರೆ. ಇದರ ಪೂರ್ವದಲ್ಲಿ ಹೆದ್ದಾರಿ ಗಸ್ತು ಪಡೆಯಲ್ಲಿ ಕಾರ್ಯನಿರ್ವಹಿಸಿ ಕಠಿಣ ಅಪರಾಧ ಪ್ರಕರಣಗಳನ್ನು ಬೇಧಿಸಿದ ಹೆಚ್ಚುಗಾರಿಕೆ ಇವರದ್ದು.

ಜನಸ್ನೇಹಿ ಪೊಲೀಸ್ ಎಂದೇ ಗುರುತಿಸಲ್ಪಡುವ ಇವರು ಅಪರಾಧ ಮುಕ್ತ ಸಮಾಜ ನಿರ್ಮಾಣದ ಪ್ರಯತ್ನದಲ್ಲಿ ಬಹಳಷ್ಟು ದೂರ ಸಾಗಿ ಬಂದವರು.

ಈ ನೆಲೆಯಲ್ಲಿ ಸೀಮಾತೀತವಾಗಿ ಶಿಕ್ಷಣ ಸಂಸ್ಥೆಗಳ ಸದಸ್ಯರುಗಳಿಗೆ ಮಾಹಿತಿ ಕಾರ್ಯಕ್ರಮಗಳನ್ನು ವ್ಯಕ್ತಿತ್ವ ವಿಕಸನ ಚಟುವಟಿಕೆಗಳನ್ನು ಸದಾ ನಡೆಸಿಕೊಂಡು ಬಂದವರು.

ಶಿಸ್ತಿ ಜೀವನ ಮೌಲ್ಯ ವ್ಯಕ್ತಿ ವಿಕಸನ,ವ್ಯಕ್ತಿತ್ವ ನಿರ್ಮಾಣ ಪರಿಸರ ಪ್ರೇಮ ವನಮಹೋತ್ಸವ ,ಸ್ವಚ್ಛತಾಅಭಿಯಾನ.ಸಾವಯವ ,ಎರೆಹುಳು ಗೊಬ್ಬರ ತಯಾರಿ ತರಬೇತಿ ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕ ಪಾವತಿ ,ಅಸಹಾಯಕರಿಗೆ ಸಹಾಯ,ಉಚಿತ ಆರೋಗ್ಯ ಶಿಬಿರ,ಕಣ್ಣಿನ ಉಚಿತ ತಪಾಸಣೆ ಮತ್ತು ಕನ್ನಡಕ ವಿತರಣೆ,ಇಲಾಖಾ ಪ್ರಶಿಕ್ಷಾಣಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿಯೂ ಪರಿಚಯಿಸಿಕೊಂಡವರು ಗೋಪಾಲಕೃಷ್ಣ .ಕೆ ಬಜ್ಪೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »