TOP STORIES:

ಪ್ರಾತಃಸ್ಮರಣೀಯ ದೇಯಿಬೈದೆತಿ,ಕೋಟಿಚೆನ್ನಯರ ಕಾರ್ಣಿಕಕ್ಕೆ ಶರಣಾಗಿ .


ಅಗಣಿತ ಮಹಿಮಾನ್ವಿತರಾದ ಕೋಟಿ ಚೆನ್ನಯರು ಹಾಗೂ ಮಾತೆ ದೇಯಿ ಬೈದೆತಿಯ ಪುಣ್ಯ ನೆಲೆಯಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯು ಸಮಸ್ತ ಆಸ್ತಿಕ ಬಂಧುಗಳ ಭಕ್ತಿ,ಶ್ರದ್ದೆ,ಇಚ್ಚಾಶಕ್ತಿಯ ಕ್ಷೇತ್ರವೆನಿಸಿ ಅಭೂತಪೂರ್ವ ಜೀರ್ಣೊದ್ದಾರದೊಂದಿಗೆ ಕಂಗೊಳಿಸುತ್ತಿರುವುದು ಧನ್ಯ ಸಂಗತಿ.ವಿಶ್ವ ಬಿಲ್ಲವರ ಸ್ವಾಭಿಮಾನದ ಪ್ರತೀಕವೆಂಬಂತೆ ಈ ಸ್ಥಾನ ಬಿಂಬಿತಗೊಂಡಿದ್ದೂ ಹೆಮ್ಮೆಯ ಅಂಶ.ಸಮಸ್ತ ಭಕ್ತರ ಪವಿತ್ರ ತಾಣವಾಗಿ ದಿನದಿಂದ ದಿನಕ್ಕೆ ಉತ್ತುಂಗ ಸ್ಥಿತಿಯಲ್ಲಿದ್ದ ಇಲ್ಲಿ ಪ್ರಸಕ್ತ ಆಡಳಿತಾತ್ಮಕ ವಿಚಾರದಲ್ಲಿ ನ್ಯಾಯಾಲಯದವರೆಗೆ ಹೋಗಿರುವಂತದ್ದು ಖೇಧಕರ.
ಅಭಿಪ್ರಾಯ ವ್ಯತ್ಯಾಸ ಸಾಮಾನ್ಯವಾಗಿ ಎಲ್ಲಾ ಕಡೆಗಳಲ್ಲಿ ಮತ್ತು ಎಲ್ಲರಲ್ಲಿ ಇರುವಂತದ್ದೆ.ಆದರೆ ಅದನ್ನೆ ಮುಖ್ಯವಾಗಿಸಿಕೊಂಡು ಹಠವಾದಿತನದ ಧೋರಣೆಯು ಸಮಸ್ತ ಭಕ್ತರಿಗೆ ಹಾಗೂ ಸಮಾಜಬಾಂಧವರಿಗೆ ನೋವಿನ ಸಂಗತಿ.ಇಡೀ ಸಮಾಜ ಹಲವಾರು ಒಳಿತಿನ ನಿರೀಕ್ಷೆಗಳನ್ನಿಟ್ಟುಕೊಂಡು ಮತ್ತು ಭಕ್ತಿಯ ನೆಲೆಯಲ್ಲಿ ತನುಮನಧನ ಸಹಕಾರ ನೀಡಿದ ಐತಿಹಾಸಿಕ ಸಂದರ್ಭಗಳನ್ನು ಮತ್ತು ಭವ್ಯ ಸಮಾರಂಭಗಳನ್ನು ಮರೆತು ಇದೀಗ ಪ್ರತಿಷ್ಠೆ ಮೆರೆಯಲು ಪ್ರಯತ್ನಿಸುತ್ತಿರುವುದು ಉತ್ತಮ ಬೆಳವಣಿಗೆಯಲ್ಲ.ನ್ಯಾಯಾಲಯ ಎಂದಾಕ್ಷಣ ಅಲ್ಲಿ ನಿಯಮಾನುಸಾರವಾಗಿ ವಾದ ಪ್ರತಿವಾದದ ಬೆಳವಣಿಗೆಗಳು ಯಾವ ದಿನ ಕೊನೆಯಾಗುತ್ತದೆ ಎಂಬುದು ಸ್ಪಷ್ಟವಿಲ್ಲದ ವಿಚಾರ.ಆದುದರಿಂದ ನಮ್ಮ ಮುಖಂಡರುಗಳಾಗಲಿ,ಸ್ಥಳಕ್ಕೆ ಸಂಬಂಧ ಪಟ್ಟವರಾಗಲಿ ಎಲ್ಲಾ ಆತುರ, ಆಕ್ರೋಶಗಳನ್ನು ಕರಗಿಸಿಕೊಂಡು ಪ್ರಾತಃಸ್ಮರಣೀಯ ದೇಯಿಬೈದೆತಿ,ಕೋಟಿಚೆನ್ನಯರ ಕಾರ್ಣಿಕಕ್ಕೆ ಶರಣಾಗಿ ಎಲ್ಲ ಭಿನ್ನಮತಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದು ಸಮಂಜಸವಾಗಿದೆ.ಒಂದಷ್ಟು ಗೊಂದಲ ಹಾಗೂ ತಪ್ಪು ಸಂದೇಶಗಳು ಸಾರ್ವತ್ರಿಕಗೊಳ್ಳುವ ಮುಂಚೆಯೆ ನಮ್ಮ ನಡುವಿನ,ಸಹಮತ, ಸಹೋದರತ್ವ ಸಾಬೀತಾಗಲಿ.ನಾವೆಲ್ಲರೂ ಒಗ್ಗೂಡಿಕೊಂಡು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗೋಣ

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ).


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »