TOP STORIES:

FOLLOW US

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..


ಒಂದೇ ಜಾತಿ ಒಂದೇ ಮತ ಒಂದೇ ದೇವರುಎಂಬ ನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆ ಮಮತೆಯ ದೀವಿಗೆಯಾಗಿ ಸಮಾಜಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಪರರ ನೋವು ನಲಿವುಗಳಿಗೆ ಧ್ವನಿಯಾಗಿ ಕಷ್ಟ ಎಂದು ಕಂಬನಿ ಮಿಡಿಯುವ ಮನಗಳಿಗೆಅವರ ಕಣ್ಣೀರೋರೆಸಿ ಮನ  ಮನೆಯಲ್ಲಿ ನಂದಾದೀಪ ಬೆಳಗಿಸಿದವೇ ನಮ್ಮ ಪ್ರೀತಿಯ ಬಿರುವೆರ್ ಕುಡ್ಲ ಸಂಘಟನೆಯ ರೂವಾರಿಉದಯ ಪೂಜಾರಿ ಬಲ್ಲಾಳ್ ಬಾಗ್.

ಆಡಡೆಲೆ ಮಾಡುವವನು ರೂಢಿಯೊಳಗುತ್ತಮಎನ್ನುವ ಸರ್ವಜ್ಞನ ಸಾರದಂತೆ ಯಾವುದೇ ಸದ್ದುಗದ್ದಲವಿಲ್ಲದೆ ಸಮಾಜದಸೇವೆಗಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟವರು. ಮಾತ್ರವಲ್ಲದೆ ಸಮಾಜ ಒದಗಿಸಿರೋ ಅವಕಾಶವನ್ನು ಸಮಾಜದ ಸೇವೆಗಾಗಿಮೀಸಲಾಗಿಟ್ಟವರು.

ಬಿರುವೆರ್ ಕುಡ್ಲ ಸ್ಥಾಪನೆಯಾಗಿ 7ವರ್ಷ ಕಳೆದಿಲ್ಲ ಆದರೆ ಕಡಿಮೆ ಅವಧಿಯಲ್ಲಿ ಮಹತ್ತರವಾದ ಸೇವೆಯ ಮುಖೇನ ಸುಮಾರು20 ಘಟಕಗಳನ್ನು ಸ್ಥಾಪಿಸಿ  ಕೋಟ್ಯಾತರ ರೂಪಾಯಿ ಮೊತ್ತದ  ಸಹಾಯಹಸ್ತವನ್ನು ಸಮಾಜದ ಬಡ ಜನರಿಗಾಗಿ ನೀಡಿರುವುದುಮಾತ್ರವಲ್ಲದೆ ಕೊರೊನಾ ಮಹಾಮಾರಿಯಿಂದ ಜನತೆ ತತ್ತರಿಸುತ್ತಿರುವ ಸಂಧರ್ಭದಲ್ಲಿ ಲಕ್ಷಾಂತರ ರೂಪಾಯಿ ಮೊತ್ತದ ಆಂಬುಲೆನ್ಸ್ನ್ನು ಜನರ ಸೇವೆಗಾಗಿ ನೀಡಿದ್ದು ಒಂದು ದಾಖಲೆಯೇ ಸರಿ. ಇಂತಹ ಸಮಾಜಮುಖಿ ಚಿಂತನೆಯ ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ ಕುಡ್ಲ ಸಂಘಟನೆಯ  ಕೀರ್ತಿ,  ಶ್ರೇಯಸ್ಸನ್ನು ಕಂಡು ಕೆಲವರಿಗೆ ಸಹಿಸಲಾಗಲಿಲ್ಲವೋ ಏನೋ, ಅದಕ್ಕಾಗಿಯೇ ಸಂಚುರೂಪಿಸಿ ಸಂಘಟನೆಯ ಹೆಸರಿಗೆ ಕಪ್ಪು ಚುಕ್ಕಿ ತರುವ ಪ್ರಯತ್ನ ಮಾಡುತ್ತಿರುವುದು ಅವರ ಕೀಳು ಮನಸ್ಥಿತಿಯನ್ನು ಎತ್ತಿತೋರಿಸುತ್ತದೆ.

ನಿಟ್ಟಿನಲ್ಲಿ ಶರಣ್ ಪಂಪ್ ವೆಲ್ ಅವರು ಬಿರುವೆರ್ ಕುಡ್ಲದ ಸಾಧನೆ  ಸೇವೆ ಕಣ್ಣಿಗೆ ಬಿದ್ದರೂ ಅರಗಿಸಿಕೊಳ್ಳಲಾಗಲ್ಲಿವೇನೋಅನಿಸುತ್ತಿದೆ. ಶರಣ್ ಅಣ್ಣ ನಿಮ್ಮ ಹಿಂದೂಪರ ಹೋರಾಟದ ಬಗ್ಗೆ ನಮಗೆ ತುಂಬಾ ಅಭಿಮಾನ ಹೆಮ್ಮೆ ಇತ್ತು.. ಗೌರವ ಇತ್ತು.. ಆದರೆಈಗ ನೀವು ಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಪ್ರತಿಭಟಿಸುದನ್ನು ಕಂಡು ಅದೆಲ್ಲವನ್ನೂಕಳೆದಕೊಂಡಿರಿ..

ಒಂದು ಜಾತಿ ಧರ್ಮ, ಸಮುದಾಯವನ್ನು ಮೀರಿ ಬೆಳೆದು ನಿಂತು ಎಲ್ಲಾ ಸಮಾಜದ ಪ್ರೀತಿಗೆ ಪಾತ್ರರಾದ ಬಿರುವೆರ್ ಕುಡ್ಲಸಂಘಟನೆಯ ಬಗ್ಗೆ ಅನವಶ್ಯಕವಾಗಿ ಆರೋಪ ಮಾಡಿದ ಹಿನ್ನಲೆಯಲ್ಲಿ  ಅದರ ಹಿಂದಿರುವ ಕಾಣದ ಕೈಗಳ ಕೈವಾಡಖಂಡಿತವಾಗಿಯೂ ಒಂದಲ್ಲ ಒಂದು ದಿನ ಜನರ ಮುಂದೆ ಬರುತ್ತದೆ.

ಪಂಪ್ ವೆಲ್ ರವರೆ ಒಮ್ಮೆ ಯೋಚಿಸಿ ಶುಭ ಮಂಗಳ ಕಾರ್ಯದ ಸಮಯದಲ್ಲಿಉದಯಣ್ಣ ಸ್ಥಾನದಲ್ಲಿ ನೀವಿರುತ್ತಿದ್ದರೆಹೇಗಾಗುತ್ತಿತ್ತು!!!!!!!! ಎಂದು. ಕನಿಷ್ಠ ಮಾನವೀಯತೆಯನ್ನೂ ಮರೆತು ನೀವು ರೀತಿ ಮಾಡುತ್ತಿರುವುದು ಬಿರುವೆರ್ ಕುಡ್ಲಸಂಘಟನೆ ಮಾತ್ರವಲ್ಲ ಲಕ್ಷಾಂತರ ತುಳು ಕನ್ನಡಿಗ ಉದಯಣ್ಣನ ಅಭಿಮಾನಿ ಬಳಗಕ್ಕೆ ಅತೀವ ನೋವಾಗಿದೆ.

ಶರಣ್ ರವರೆ,…. ಹಣ ಅಧಿಕಾರ ಅಂತಸ್ತು ಯಾವುದೂ ಶಾಶ್ವತವಲ್ಲ ಆದರೇ ಎಲ್ಲಕ್ಕಿಂತ ಮಿಗಿಲಾದುದು ಮಾನವೀಯತೆ, ಮಾನವೀಯ ಮೌಲ್ಯಗಳುಅದನ್ನು ತುಳಿದು ನಡೆಯಬೇಡಿ….

ನಮ್ಮಂತಹ ನೂರಾರು ಜನರಿಗೆ ನಿಮ್ಮ ಮೇಲೆ ಗೌರವ ಅಭಿಮಾನ ವಿತ್ತು ಆದರೆ ಅರ್ಹತೆಯನ್ನು ನಿಮ್ಮ ಕೀಳುಮಟ್ಟದರಾಜಕಾರಣದಿಂದ ಮಣ್ಣುಪಾಲು ಮಾಡಿದಿರಿ.. ಎಲ್ಲದಕ್ಕೂ ಭಗವಂತ ಹಾಗೂ ತುಳುನಾಡಿನ ಸತ್ಯಗಳು ನಿಮಗೆ ಒಳ್ಳೆಯ ಬುದ್ದಿನೀಡಲಿ ಎಂದು ಆಶಿಸುತ್ತೇವೆ.

ಉದಯಣ್ಣ ಸತ್ಯಕ್ಕೆ ಜಯವಿದೆ.

ನಿಮ್ಮೊಂದಿಗೆ ನಾವಿದ್ದೇವೆ

ಪ್ರೀತಿ ಅಭಿಮಾನ ಗೌರವ ಅನವರತ….

ಜೈ ಬಿರುವೆರ್ ಕುಡ್ಲ ಜೈ ಉದಯಣ್ಣ..

✒️ಪ್ರಭಾಕರ ಬೆಳುವಾಯಿ

(ನಮನ ಫ್ರೆಂಡ್ಸ್ ಮುಂಬಯಿ)


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »