TOP STORIES:

FOLLOW US

ಬಂಬ್ರಾಣ ಕೊಟ್ಯದ ಮನೆ ”ಆನೆ ಬೈದ್”ಯ ಬಿರುದಾಂಕಿತ ನಾರಾಯಣ ಪೂಜಾರಿಯವರ 70 ನೇ ಹುಟ್ಟುಹಬ್ಬ ಆಚರಣೆ


ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಧಾರ್ಮಿಕ ಕ್ಷೇತ್ರಗಳಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡುತ್ತಾ ಸಮಾಜ ಸೇವೆಯನ್ನು ಮಾಡುತ್ತಿರುವ ಕುಂಬಳೆ ಸಮೀಪದ ಬಂಬ್ರಾಣ ಕೊಟ್ಯದ ಮನೆ “ಆನೆ ವೈದ್ಯ ” ಬಿರುದಾಂಕಿತ ಶ್ರೀ ನಾರಾಯಣ ಪೂಜಾರಿ ಯವರ 70ನೇ ಹುಟ್ಟುಹಬ್ಬದ ಅಂಗವಾಗಿ 20-02-2022 ಭಾನುವಾರ ಬಂಬ್ರಾಣ ಕೊಟ್ಯದ ಮನೆಯಲ್ಲಿ ಭೀಮರಥ ಶಾಂತಿ, ಸತ್ಯನಾರಾಯಣ ಪೂಜೆ, ನಾಗತಂಬಿಲ.. ಹೀಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ,ಅಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ವರ್ಕಳ ಶಿವಗಿರಿ ಮಠದ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಕ್ಷೇತ್ರದ ತಂತ್ರಿ ವರ್ಯರಾದ ಬ್ರಹ್ಮ ಶ್ರೀ ಚಕ್ರಪಾಣಿ ದೇವಪೂಜಿತ್ತಾಯರ ಮಾರ್ಗದರ್ಶನದಂತೆ ಜರಗಿದ ಈ ಕಾರ್ಯಕ್ರಮದಲ್ಲಿ, ಕುದ್ರೋಳಿ ಗೋಕರ್ಣನಾಥೆಶ್ವರ ಕ್ಷೇತ್ರದ ಕೋಶಾಧಿಕಾರಿ ಹಾಗೂ ಗುರುಬೆಳದಿಂಗಳು(ರಿ) ಅಧ್ಯಕ್ಷರಾದ ಶ್ರೀ ಪದ್ಮರಾಜ್. ಆರ್. ರವರು ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ನೂತನ ವಿಧ್ಯಾನಿಧಿ ಟ್ರಸ್ಟ್ ಗೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಖ್ಯಾತ ರಂಗ ಭೂಮಿ ಹಾಗೂ ಚಲನ ಚಿತ್ರ ನಟರಾದ ಶ್ರೀ ಅರವಿಂದ ಬೋಳಾರ್, ಶ್ರೀ ಸಂಜೀವ ಪೂಜಾರಿ ಕೂರೇಲು, ಶ್ರೀ ಪಿ ಮುರಲೀಧರನ್ ನ್ಯಾಯವಾದಿ , ವಾರ್ಡ್ ಸದಸ್ಯ ಶ್ರೀ ಮೋಹನ್ ಬಂಬ್ರಾಣ , ಡಾl ರವೀಶ್ ಪಡುಮಲೆ, ಶ್ರೀ ವಿಶ್ವನಾಥ್ ಕೆಮ್ಮಣ್ಣು ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 70 ರ “ಸಪ್ತತಿ ಸಂಭ್ರಮ “ದ ಸವಿ ನೆನಪಿಗಾಗಿ 70 ಔಷಧೀಯ ಗುಣವುಳ್ಳ ಸಸ್ಯವನ್ನು ವಿತರಣೆ ಮಾಡಲಾಯಿತು.

ಸಮಾಜದ ಪ್ರಮುಖ ಸಾಧಕರಾದ ಕುಟುಂಬದ ಸದಸ್ಯರಾಗಿರುವ ಪೊಲೀಸ್ ಇಲಾಖೆಯಲ್ಲಿ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಮಂಗಳೂರಿನ
ಸಹಾಯಕ ಪೊಲೀಸ್ ನಿರ್ದೇಶಕರಾದ ಶ್ರೀ ಕುಮಾರ ಚಂದ್ರ ರವರನ್ನು, ಲಕ್ಷಾಂತರ ಗಿಡಗಳನ್ನು ನೆಟ್ಟು ಪರಿಸರವನ್ನು ಹಸಿರಾಗಿರುವಲ್ಲಿ ತೆರೆ ಮರೆಯಲ್ಲಿ ಶ್ರಮಿಸುತ್ತಿರುವ ಪರಿಸರ ಪ್ರೇಮಿ ಶ್ರೀ ಮಾಧವ ಉಳ್ಳಾಲ, ಯಕ್ಷರಂಗದ ಯಕ್ಷಗಾನ ಕಲಾವಿದರಾಗಿ ಕಟೀಲು 1ನೇ ಮೇಳದಲ್ಲಿ ದೇವಿಯ ಪಾತ್ರವನ್ನು ನಿರ್ವಹಿಸುತ್ತಿರುವ ಶ್ರೀ ರಾಜೇಶ್ ಬೆಳ್ಳಾರೆ, ಕಂಬಳದಲ್ಲಿ ಅಪ್ರತಿಮ ಸಾಧನೆ ಗೈದು ಸತತವಾಗಿ 3 ಬಾರಿ ಬಹುಮಾನ ಗಳನ್ನು ಬಾಚಿ ಕೊಳ್ಳುವಲ್ಲಿ ಯಶಸ್ವಿಯಾದ ವಂದಿತ್ ಶೆಟ್ಟಿ ಬಂಬ್ರಾಣ,
ಭಾರತ ಮಾತೆಯ ವೀರ ಸೇನಾನಿಯಾಗಿ ಕಾರ್ತಿಕ್ ಬೆಳ್ಳೂರು ರವರನ್ನು ಸೇರಿ 5 ಸಾಧಕರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ರಾಮ್ ಕುಮಾರ್ ಮುಂಡಿತಡ್ಕ, ಹಾಗೂ ರಮೇಶ್ ಬಾಳ್ಯ್ ರು ರವರು ನಿರೂಪಿಸಿ, ಹೇಮಾನಾಥ್ ಮೈತಡ್ಕ ರವರು ವಂದಿಸಿದರು.

 


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »