TOP STORIES:

ಬಜ್ಪೆಯ ವಿಮಾನ ನಿಲ್ದಾಣದ ಹೆಸರು ಇನ್ನು ಕೂಡಾ ಬದಲಾವಣೆ ಆಗಿಲ್ಲ ಯಾಕೆ?


ಮಂಗಳೂರು ವಿಮಾನ ನಿಲ್ದಾಣದ ಮರುನಾಮಕರಣದ ಬಗ್ಗೆ ನನ್ನ ವೈಯುಕ್ತಿಕ ಅನಿಸಿಕೆ ಸತ್ಯಾಂಶ ಇದ್ದಲ್ಲಿ ಧಾರಾಳವಾಗಿ ಶೇರ್ ಮಾಡಬಹುದು..

ಅತ್ತ ಮಂಗಳೂರಿನಲ್ಲಿ ಒಂದು ರಸ್ತೆಯ ಹೆಸರು ಬದಲಾವಣೆ ಆಗಿದೆ, ಇತ್ತ ಉಡುಪಿಯಲ್ಲಿ ಒಂದು ರಸ್ತೆಯ ಹೆಸರು ಬದಲಾವಣೆಯಾಗಿದೆ,

ಆಗಲಿ ಒಳ್ಳೆಯ ವಿಚಾರ ಯಾಕೆಂದರೆ ಹಿಂದೂಗಳ ಹೆಸರಿನಿಂದಲೇ ಮರುನಾಮಕರಣ ಆಗಿರೋದು..
ಬಜ್ಪೆ ಗ್ರಾಮ ಪಂಚಾಯತ್ ನಿಂದ “ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು”ಎಂಬ ಹೆಸರು ಬದಲಾವಣೆಗಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು ಕೂಡಾ ಬಜ್ಪೆಯ ಅಂತಾರಷ್ಟ್ರೀಯ ವಿಮಾನ ನಿಲ್ದಾಣದ *ಹೆಸರು ಇನ್ನು ಕೂಡಾ ಬದಲಾವಣೆ ಆಗಿಲ್ಲ ಯಾಕೆ?

ಉಡುಪಿಯಲ್ಲಿ ಮತ್ತು ಮಂಗಳೂರಿನಲ್ಲಿ ಎರಡು ರಸ್ತೆಗಳ ಹೆಸರು ಬದಲಾವಣೆ ಈಗಾಗಲೇ ಆಗಿದ್ದು ಅದಕ್ಕೆ ಮನವಿ ಸಲ್ಲಿಸಿದ್ದು ಯಾರು ಮತ್ತು ಅದರ *ಹೆಸರು ಬದಲಾವಣೆ ಅಷ್ಟು ಸಲೀಸಾಗಿ ಯಾಕಾಯಿತು?

ಕೋಟಿ ಚೆನ್ನಯ ಅಥವಾ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಇಡಬೇಕ್ಕೆನ್ನುವಾಗ ನನ್ನದು ಒಂದಿರಲಿ ಅಂತ ಬರುವವರು ಯಾರು?

ಮಂಗಳೂರಿನ ದಿಲ್ ರಾಜ್ ಆಳ್ವರೇ…
“ತುಳುನಾಡ್ ಇಂಟರ್ನ್ಯಾಷನಲ್ ಏರ್ಪೋರ್ಟ್”ಅನ್ನೋ ಹೆಸರು ಸೂಕ್ತವಾಗಿದೆ, ಒಪ್ಪಿಕೊಳ್ಳುವಂತದ್ದೇ..
ಆದರೂ ಕೂಡಾ ಈಗಾಗಲೇ ಒಂದು ಹೆಸರಿನ ಬಗ್ಗೆ ಮನವಿ ಸಲ್ಲಿಸಿರುವಾಗ ಯಾರು ಊಹಿಸದ ಹೆಸರನ್ನು ಏಕಾಏಕಿ ಸೃಷ್ಟಿ ಮಾಡಿ ಅದನ್ನೇ ಇಡಬೇಕೆಂದರೆ ಇದು ಯಾವ ರೀತಿಯ ನ್ಯಾಯ?
ಕೋಟಿ ಚೆನ್ನಯ v/s ತುಳುನಾಡು ಅಂದ ಹಾಗಾಯಿತು ನಿಮ್ಮ ಕಥೆ.. ನಿಮಗೂ ಗೊತ್ತಿರಬಹುದಲ್ಲವೇ?
ಇವೆರಡು ಒಂದೇ ನಾಣ್ಯದ ಎರಡು ಮುಖಗಳು.. ಹೆಡ್ or ಟೆಲ್ ಅಂದಾಗ? ನಾನಂತು ಮೌನಿಯಾಗುತ್ತೇನೆ..
ಯಾಕಂದ್ರೆ ತುಳುನಾಡು, ತುಳುಭಾಷೆ ನಮಗೆ ಏನು ಕೊಟ್ಟಿದೆ ನೋಡಿ ಅದನ್ನು ಎಂದಿಗೂ ಮರೆಯೋಕೆ ಸಾಧ್ಯ ಇಲ್ಲ.. ಹಾಗಾಗಿ ತುಳುವರೇ ತುಳುನಾಡಿನಲ್ಲಿ ಮೇರೆದಾಡಿದಂತಹ ಕಾರಣಿಕ ಪುರುಷರ ಹೆಸರನ್ನು ಇಡಲು ಹೊರಟಾಗ ಬೆಂಬಲ ಸೂಚಿಸುವ ಬದಲು ಈ ರೀತಿ ನನ್ನದು ಒಂದಿರಲಿ ಅನ್ನೋದು ಸಮಂಜಸವೇ?

ಉಡುಪಿಯ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿಗಳೇ..
ತುಳುನಾಡಿನಲ್ಲಿ 66 ಗರಡಿಗಳನ್ನು ಕಟ್ಟಿಸಿಕೊಂಡಂತಹ ಅವಳಿ ವೀರರ ಹೆಸರು ಇಡಬೇಕೆಂದು ಈಗಾಗಲೇ ಮನವಿ ಸಲ್ಲಿಸಿಯಾಗಿದೆ.
ಈ ನಡುವೆ ಶಂಕರಾಚಾರ್ಯ, ಮದ್ವಾಚಾರ್ಯರಂತಹ ದಾರ್ಶನಿಕರ ಹೆಸರನ್ನೇಕೆ ಬಳಸುತ್ತಿರಿ? ಅದಕ್ಕಿಂತ ನಿಮ್ಮ ಹೆಸರನ್ನೇ ಇಡಬೇಕೆಂದು ಆಗ್ರಹಿಸಬಹುದಿತ್ತಲ್ಲವೇ?
ಕೋಟಿ ಚೆನ್ನಯರು ಕೂಡಾ ಹಿಂದೂ ಧರ್ಮದ ಭಾಗವೇ ಆಗಿರುವಾಗ ಅವರ ಹೆಸರಿಗೆ ಯಾಕೆ ನಿಮ್ಮ ಆಕ್ಷೇಪ?
ಅದಕ್ಕಿಂತ ಉಡುಪಿಯ ಇಂದ್ರಾಳಿ ರೈಲ್ವೆ ಸ್ಟೇಷನ್ ಹೆಸರನ್ನು ಬದಲಾವಣೆ ಮಾಡಿ “ಮದ್ವಾಚಾರ್ಯ ರೈಲ್ವೆ ಸ್ಟೇಷನ್ ಉಡುಪಿ” ಅಥವಾ “ಶಂಕರಾಚಾರ್ಯ ರೈಲ್ವೆ ಸ್ಟೇಷನ್ ಉಡುಪಿ” ಎಂದು ಮರುನಾಮಕರಣ ಮಾಡಲು ಮನವಿ ಸಲ್ಲಿಸಬಹುದಿತ್ತಲ್ವಾ? ವಿವಾದಗಳ ನಡುವೆ ವಿವಾದ ಸೃಷ್ಟಿಸುವ ಹೇಳಿಕೆ ಯಾತಕ್ಕಾಗಿ ಕೊಡ್ತೀರಾ ಸ್ವಾಮಿ?

ಇನ್ನು ಮಾನ್ಯ ಮಿಥುನ್ ರೈಯವರು ಮಾಡಿದಂತಹ ಪ್ರತಿಭಟನೆ ರಾಜಕೀಯ ಉದ್ದೇಶ ರಹಿತ ಆಗಿದ್ದರೆ ಕೋಟಿ ಚೆನ್ನಯರ ಆಶೀರ್ವಾದ ಸದಾ ಅವರ ಮೇಲಿರಲಿ…
ರಾಜಕೀಯದ ಉದ್ದೇಶ ಕೂಡಿದ್ದರೆ ನಾನು ಹೇಳಬೇಕೆಂದಿಲ್ಲ ಕೋಟಿಚೆನ್ನಯರ ಸುರಿಯದ ತುದಿಗಳು ಸುಗಮವಾದ ದಾರಿಯನ್ನೇ ತೋರಿಸುತ್ತವೆ..

ಹಿಂದೂಪರ ಸಂಘಟನೆಗಳು ಜಾಣ ಮೌನಕ್ಕೆ ಶರಣಾಗದಿರಿ*
ನ್ಯಾಯಕ್ಕೆ ಎದೆಯಲ್ಲಿ ಜಾಗ ತೋರಿಸುತ್ತೇವೆ,
ಅನ್ಯಾಯಕ್ಕೆ ಕತ್ತಿಯಲ್ಲಿ ಜಾಗ ತೋರಿಸುತ್ತೇವೆ. (ನ್ಯಾಯೋಗ್ ತಿಗಲೆಡ್ ಸಾದಿ ಕೊರ್ಪ, ಅನ್ಯಾಯೋಗ್ ಸುರಿಯಡ್ ಸಾದಿ ತೋಜಾವ)
“ನಂಬಿನಕಲೇ ಇಂಬು ಕೊರ್ಪ ಸತ್ಯ ಗೆಂದಾದ್ ಕೊರ್ಪ” ಎಂದು ವಾಗ್ದಾನ ಕೊಟ್ಟಂತಹ ಅವಳಿ ವೀರರ ಹೆಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾರಾಜಿಸುವಂತಾಗಲಿ..

ಇನ್ನು, ಮೇಲೆಯೂ ನಮ್ಮದೇ ಸರ್ಕಾರ, ಕೆಳಗೆಯೂ ನಮ್ಮದೇ ಸರ್ಕಾರ ಅನ್ನೋರಿಗೆ ಚಪ್ಪಲಿ ತಗೊಂಡು ಹೊಡಿಯೋದೊಂದು ಬಾಕಿ ಇದೆ ಅಷ್ಟೇ..

ವಿಕ್ಕಿ ಪೂಜಾರಿ ಮಡುಂಬು


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »