TOP STORIES:

ಬಜ್ಪೆಯ ವಿಮಾನ ನಿಲ್ದಾಣದ ಹೆಸರು ಇನ್ನು ಕೂಡಾ ಬದಲಾವಣೆ ಆಗಿಲ್ಲ ಯಾಕೆ?


ಮಂಗಳೂರು ವಿಮಾನ ನಿಲ್ದಾಣದ ಮರುನಾಮಕರಣದ ಬಗ್ಗೆ ನನ್ನ ವೈಯುಕ್ತಿಕ ಅನಿಸಿಕೆ ಸತ್ಯಾಂಶ ಇದ್ದಲ್ಲಿ ಧಾರಾಳವಾಗಿ ಶೇರ್ ಮಾಡಬಹುದು..

ಅತ್ತ ಮಂಗಳೂರಿನಲ್ಲಿ ಒಂದು ರಸ್ತೆಯ ಹೆಸರು ಬದಲಾವಣೆ ಆಗಿದೆ, ಇತ್ತ ಉಡುಪಿಯಲ್ಲಿ ಒಂದು ರಸ್ತೆಯ ಹೆಸರು ಬದಲಾವಣೆಯಾಗಿದೆ,

ಆಗಲಿ ಒಳ್ಳೆಯ ವಿಚಾರ ಯಾಕೆಂದರೆ ಹಿಂದೂಗಳ ಹೆಸರಿನಿಂದಲೇ ಮರುನಾಮಕರಣ ಆಗಿರೋದು..
ಬಜ್ಪೆ ಗ್ರಾಮ ಪಂಚಾಯತ್ ನಿಂದ “ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು”ಎಂಬ ಹೆಸರು ಬದಲಾವಣೆಗಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು ಕೂಡಾ ಬಜ್ಪೆಯ ಅಂತಾರಷ್ಟ್ರೀಯ ವಿಮಾನ ನಿಲ್ದಾಣದ *ಹೆಸರು ಇನ್ನು ಕೂಡಾ ಬದಲಾವಣೆ ಆಗಿಲ್ಲ ಯಾಕೆ?

ಉಡುಪಿಯಲ್ಲಿ ಮತ್ತು ಮಂಗಳೂರಿನಲ್ಲಿ ಎರಡು ರಸ್ತೆಗಳ ಹೆಸರು ಬದಲಾವಣೆ ಈಗಾಗಲೇ ಆಗಿದ್ದು ಅದಕ್ಕೆ ಮನವಿ ಸಲ್ಲಿಸಿದ್ದು ಯಾರು ಮತ್ತು ಅದರ *ಹೆಸರು ಬದಲಾವಣೆ ಅಷ್ಟು ಸಲೀಸಾಗಿ ಯಾಕಾಯಿತು?

ಕೋಟಿ ಚೆನ್ನಯ ಅಥವಾ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಇಡಬೇಕ್ಕೆನ್ನುವಾಗ ನನ್ನದು ಒಂದಿರಲಿ ಅಂತ ಬರುವವರು ಯಾರು?

ಮಂಗಳೂರಿನ ದಿಲ್ ರಾಜ್ ಆಳ್ವರೇ…
“ತುಳುನಾಡ್ ಇಂಟರ್ನ್ಯಾಷನಲ್ ಏರ್ಪೋರ್ಟ್”ಅನ್ನೋ ಹೆಸರು ಸೂಕ್ತವಾಗಿದೆ, ಒಪ್ಪಿಕೊಳ್ಳುವಂತದ್ದೇ..
ಆದರೂ ಕೂಡಾ ಈಗಾಗಲೇ ಒಂದು ಹೆಸರಿನ ಬಗ್ಗೆ ಮನವಿ ಸಲ್ಲಿಸಿರುವಾಗ ಯಾರು ಊಹಿಸದ ಹೆಸರನ್ನು ಏಕಾಏಕಿ ಸೃಷ್ಟಿ ಮಾಡಿ ಅದನ್ನೇ ಇಡಬೇಕೆಂದರೆ ಇದು ಯಾವ ರೀತಿಯ ನ್ಯಾಯ?
ಕೋಟಿ ಚೆನ್ನಯ v/s ತುಳುನಾಡು ಅಂದ ಹಾಗಾಯಿತು ನಿಮ್ಮ ಕಥೆ.. ನಿಮಗೂ ಗೊತ್ತಿರಬಹುದಲ್ಲವೇ?
ಇವೆರಡು ಒಂದೇ ನಾಣ್ಯದ ಎರಡು ಮುಖಗಳು.. ಹೆಡ್ or ಟೆಲ್ ಅಂದಾಗ? ನಾನಂತು ಮೌನಿಯಾಗುತ್ತೇನೆ..
ಯಾಕಂದ್ರೆ ತುಳುನಾಡು, ತುಳುಭಾಷೆ ನಮಗೆ ಏನು ಕೊಟ್ಟಿದೆ ನೋಡಿ ಅದನ್ನು ಎಂದಿಗೂ ಮರೆಯೋಕೆ ಸಾಧ್ಯ ಇಲ್ಲ.. ಹಾಗಾಗಿ ತುಳುವರೇ ತುಳುನಾಡಿನಲ್ಲಿ ಮೇರೆದಾಡಿದಂತಹ ಕಾರಣಿಕ ಪುರುಷರ ಹೆಸರನ್ನು ಇಡಲು ಹೊರಟಾಗ ಬೆಂಬಲ ಸೂಚಿಸುವ ಬದಲು ಈ ರೀತಿ ನನ್ನದು ಒಂದಿರಲಿ ಅನ್ನೋದು ಸಮಂಜಸವೇ?

ಉಡುಪಿಯ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿಗಳೇ..
ತುಳುನಾಡಿನಲ್ಲಿ 66 ಗರಡಿಗಳನ್ನು ಕಟ್ಟಿಸಿಕೊಂಡಂತಹ ಅವಳಿ ವೀರರ ಹೆಸರು ಇಡಬೇಕೆಂದು ಈಗಾಗಲೇ ಮನವಿ ಸಲ್ಲಿಸಿಯಾಗಿದೆ.
ಈ ನಡುವೆ ಶಂಕರಾಚಾರ್ಯ, ಮದ್ವಾಚಾರ್ಯರಂತಹ ದಾರ್ಶನಿಕರ ಹೆಸರನ್ನೇಕೆ ಬಳಸುತ್ತಿರಿ? ಅದಕ್ಕಿಂತ ನಿಮ್ಮ ಹೆಸರನ್ನೇ ಇಡಬೇಕೆಂದು ಆಗ್ರಹಿಸಬಹುದಿತ್ತಲ್ಲವೇ?
ಕೋಟಿ ಚೆನ್ನಯರು ಕೂಡಾ ಹಿಂದೂ ಧರ್ಮದ ಭಾಗವೇ ಆಗಿರುವಾಗ ಅವರ ಹೆಸರಿಗೆ ಯಾಕೆ ನಿಮ್ಮ ಆಕ್ಷೇಪ?
ಅದಕ್ಕಿಂತ ಉಡುಪಿಯ ಇಂದ್ರಾಳಿ ರೈಲ್ವೆ ಸ್ಟೇಷನ್ ಹೆಸರನ್ನು ಬದಲಾವಣೆ ಮಾಡಿ “ಮದ್ವಾಚಾರ್ಯ ರೈಲ್ವೆ ಸ್ಟೇಷನ್ ಉಡುಪಿ” ಅಥವಾ “ಶಂಕರಾಚಾರ್ಯ ರೈಲ್ವೆ ಸ್ಟೇಷನ್ ಉಡುಪಿ” ಎಂದು ಮರುನಾಮಕರಣ ಮಾಡಲು ಮನವಿ ಸಲ್ಲಿಸಬಹುದಿತ್ತಲ್ವಾ? ವಿವಾದಗಳ ನಡುವೆ ವಿವಾದ ಸೃಷ್ಟಿಸುವ ಹೇಳಿಕೆ ಯಾತಕ್ಕಾಗಿ ಕೊಡ್ತೀರಾ ಸ್ವಾಮಿ?

ಇನ್ನು ಮಾನ್ಯ ಮಿಥುನ್ ರೈಯವರು ಮಾಡಿದಂತಹ ಪ್ರತಿಭಟನೆ ರಾಜಕೀಯ ಉದ್ದೇಶ ರಹಿತ ಆಗಿದ್ದರೆ ಕೋಟಿ ಚೆನ್ನಯರ ಆಶೀರ್ವಾದ ಸದಾ ಅವರ ಮೇಲಿರಲಿ…
ರಾಜಕೀಯದ ಉದ್ದೇಶ ಕೂಡಿದ್ದರೆ ನಾನು ಹೇಳಬೇಕೆಂದಿಲ್ಲ ಕೋಟಿಚೆನ್ನಯರ ಸುರಿಯದ ತುದಿಗಳು ಸುಗಮವಾದ ದಾರಿಯನ್ನೇ ತೋರಿಸುತ್ತವೆ..

ಹಿಂದೂಪರ ಸಂಘಟನೆಗಳು ಜಾಣ ಮೌನಕ್ಕೆ ಶರಣಾಗದಿರಿ*
ನ್ಯಾಯಕ್ಕೆ ಎದೆಯಲ್ಲಿ ಜಾಗ ತೋರಿಸುತ್ತೇವೆ,
ಅನ್ಯಾಯಕ್ಕೆ ಕತ್ತಿಯಲ್ಲಿ ಜಾಗ ತೋರಿಸುತ್ತೇವೆ. (ನ್ಯಾಯೋಗ್ ತಿಗಲೆಡ್ ಸಾದಿ ಕೊರ್ಪ, ಅನ್ಯಾಯೋಗ್ ಸುರಿಯಡ್ ಸಾದಿ ತೋಜಾವ)
“ನಂಬಿನಕಲೇ ಇಂಬು ಕೊರ್ಪ ಸತ್ಯ ಗೆಂದಾದ್ ಕೊರ್ಪ” ಎಂದು ವಾಗ್ದಾನ ಕೊಟ್ಟಂತಹ ಅವಳಿ ವೀರರ ಹೆಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾರಾಜಿಸುವಂತಾಗಲಿ..

ಇನ್ನು, ಮೇಲೆಯೂ ನಮ್ಮದೇ ಸರ್ಕಾರ, ಕೆಳಗೆಯೂ ನಮ್ಮದೇ ಸರ್ಕಾರ ಅನ್ನೋರಿಗೆ ಚಪ್ಪಲಿ ತಗೊಂಡು ಹೊಡಿಯೋದೊಂದು ಬಾಕಿ ಇದೆ ಅಷ್ಟೇ..

ವಿಕ್ಕಿ ಪೂಜಾರಿ ಮಡುಂಬು


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »