TOP STORIES:

ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ -ವಸಂತ್ ಗಿಳಿಯಾರ್


ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ
-ವಸಂತ್ ಗಿಳಿಯಾರ್

ಇವತ್ತು ಚಾಂಪ ಪೂಜಾರಿಯವರಿಲ್ಲ! ಆದರೆ ಅವರ ಹೆಸರು ಉಳಿದಿದೆ, ಧರ್ಮಸ್ಥಳ ಎಂದರೆ ನಮ್ಮ ಭಾಗದಲ್ಲಿ ಎಂದಿಗೂ ನೆನಪಾಗುವ ಹೆಸರದು. ಧರ್ಮಸ್ಥಳದ ಸತ್ಯ, ಧರ್ಮ,ನ್ಯಾಯ,ನೀತಿ ಎಂಬ ಆಶಯಗಳನ್ನೇ ಬದುಕಿ ತನ್ನ ಬದುಕನ್ನೇ ಸತ್ಯವೃತವಾಗಿಸಿಕೊಂಡು ಕಾಯವನ್ನ ಗಂದದ ಕೊರಡಿನಂತೆ ಸವೆಸಿದ ಕೀರ್ತಿಶೇಷರು ಚಾಂಪ ಪೂಜಾರಿ.

ಆ ಕಾಲದಲ್ಲಿ ಈ ಊರಿನಿಂದ ಧರ್ಮಸ್ಥಳಕ್ಕೆ ಹೋಗಬೇಕಿದ್ದರೆ, ಖಾವಂದರ ನ್ಯಾಯ ಛಾವಡಿಯಲ್ಲಿ ವಾಗ್ ಕಲಹ ಪರಿಹಾರವಾಗಬೇಕಿದ್ದರೆ, ಸಸೂತ್ರವಾಗಿ ಮಂಜುನಾಥ ಸ್ವಾಮಿಯ ದರ್ಶನವಾಗಬೇಕಿದ್ದರೆ, ಯಾವ ದಿನ ಬೇಕಿದ್ದರೂ ಧರ್ಮಸ್ಥಳಕ್ಕೆ ಹೋಗಿ ಸುರಕ್ಷಿತವಾಗಿ ಮರಳ ಬಲ್ಲೆ ಎಂಬ ವಿಶ್ವಾಸ ಆ ಕಾಲದ ಭಕ್ತ ಕುಟುಂಬಗಳಿಗೆ ಬಂದದ್ದಿದ್ದರೆ ಈ ಭಾಗದಲ್ಲಿ ಅದೆಲ್ಲದಕ್ಕೂ ಏಕೈಕ ಹೆಸರು ಬನ್ನಾಡಿ ಚಾಂಪ ಪೂಜಾರಿಯವರದ್ದು.

ಚಾಂಪ ಫುಜಾರಿ ಎಂದರೆ ತೆಂಕಣದ ಧರ್ಮದೊಡೆಯನ ಹೃದಯ ಮಂದಿರದಲ್ಲಿಟ್ಟು ಪೂಜಿಸಿದ ಪುಣ್ಯಾತ್ಮ. ಅವರಿಗೆ ಪೂಜ್ಯ ಖಾವಂದರೆಂದರೆ ರಾಮನ ಮುಂದೆ ಹನುಮ ಭಾಗಿದಂತಹ ನಿಷ್ಠೆ, ಅವರದ್ದು ನಿಷ್ಕಳಂಕ ಮನಸ್ಸು, ಪರಿಶುಭ್ರ ಚಾರಿತ್ರ್ಯ. ಬನ್ನಾಡಿ ಗರೋಡಿಯ ಪೂಜೆಯವರಾಗಿದ್ದ ಚಾಂಪ ಫೂಜಾರಿಯವರ ಪೂಜೆಗೆ, ಯಾವ ದೈವವೂ ನಲಿದು, ಒಲಿದು ಬರಬೇಕು, ಅಂಥಹ ತಾದಾತ್ಮ್ಯತೆ

ಚಾಂಪ ಪೂಜಾರಿ ತನ್ನ ವ್ಯಾನಿನ ಮೂಲಕ ಬನ್ನಾಡಿ, ಗಿಳಿಯಾರು,ಕಾವಡಿ, ವಡ್ಡರ್ಸೆ,ಕೋಟ, ಪಡುಕರೆ,ಉಪ್ಲಾಡಿ ಹೀಗೆ ಪುಟ್ಟ ಪುಟ್ಟ ಊರಿನ ದಾರಿಗಳೂ ಧರ್ಮಸ್ಥಳಕ್ಕೆ ಬೆಸೆಯುವ ಸೇತುವೆಯಾದವರು.ಧರ್ಮಸ್ಥಳದ ಪೂಜ್ಯ ಖಾವಂದರಿಗೆ ಇಂದಿಗೂ ಚಾಂಪ ಪೂಜಾರಿಯವರ ಮೇಲೆ ಅಪಾರ ಪ್ರೀತಿ ನೆನೆಕೆ, ಖಾವಂದರ ಹೃದಯ ಗೆದ್ದವರು ಚಾಂಪ ಪೂಜಾರಿ. ಅವರ ನಗೆಯೇ ಒಂದು ಪ್ರೀತಿಯ ಕಡಲು ಈ ಪೋಟೋದಲ್ಲೆ ನೋಡಿ ಅವರ ಮುಖದಲ್ಲಿನ ತೇಜೋಪೂರ್ಣ ವರ್ಚಸ್ಸು.

ಚಾಂಪ ಪೂಜಾರಿ ಒಂದರ್ಥದಲ್ಲಿ ಅಕ್ಷರವಿಲ್ಲದ, ಜಗದ ಅರಿವಿಲ್ಲದ ಆ ಕಾಲದ ಮುಗ್ದ ಕುಟುಂಬದ ಪಾಲಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಮ್ಮ ಭಾಗದ ದ್ವಾರವೇ ಆಗಿದ್ದರು. ನಾಡಿದ್ದು ಅಭಿಮತ ಸಂಭ್ರಮಕ್ಕೆ ನೀವು ಬರುವುದಾದರೆ ’ಬನ್ನಾಡಿ ಚಾಂಪ ಪೂಜಾರಿ ಮಹಾದ್ವಾರದ ಮೂಲಕವೇ ಬರಬೇಕು. ಹೌದು, ಅಭಿಮತ ಸಂಭ್ರಮದ ಮಹಾದ್ವಾರಕ್ಕೆ ಚಾಂಪ ಪೂಜಾರಿಯವರ ಹೆಸರನ್ನ ಇರಿಸಲಿದ್ದೇವೆ. ಇದು ನಾವು ಅವರನ್ನ ಗೌರವದಿಂದ ನೆನೆಯುವ ಪರಿ. ಬರುತ್ತೀರಿ ತಾನೆ?

ಬನ್ನಿ ಗಿಳಿಯಾರಿಗೆ;ತೀರ ನಿಮ್ಮದೇ ಎನಿಸುವ ಊರಿಗೆ !

ಫೋಟೋ ಕೃಪೆ, ಅವರ ಮೊಮ್ಮಗ ಬಿಗ್ ಬಾಸ್ Dhanraj Cm ❤

Vasanth Giliyar


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »