TOP STORIES:

FOLLOW US

ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ -ವಸಂತ್ ಗಿಳಿಯಾರ್


ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ
-ವಸಂತ್ ಗಿಳಿಯಾರ್

ಇವತ್ತು ಚಾಂಪ ಪೂಜಾರಿಯವರಿಲ್ಲ! ಆದರೆ ಅವರ ಹೆಸರು ಉಳಿದಿದೆ, ಧರ್ಮಸ್ಥಳ ಎಂದರೆ ನಮ್ಮ ಭಾಗದಲ್ಲಿ ಎಂದಿಗೂ ನೆನಪಾಗುವ ಹೆಸರದು. ಧರ್ಮಸ್ಥಳದ ಸತ್ಯ, ಧರ್ಮ,ನ್ಯಾಯ,ನೀತಿ ಎಂಬ ಆಶಯಗಳನ್ನೇ ಬದುಕಿ ತನ್ನ ಬದುಕನ್ನೇ ಸತ್ಯವೃತವಾಗಿಸಿಕೊಂಡು ಕಾಯವನ್ನ ಗಂದದ ಕೊರಡಿನಂತೆ ಸವೆಸಿದ ಕೀರ್ತಿಶೇಷರು ಚಾಂಪ ಪೂಜಾರಿ.

ಆ ಕಾಲದಲ್ಲಿ ಈ ಊರಿನಿಂದ ಧರ್ಮಸ್ಥಳಕ್ಕೆ ಹೋಗಬೇಕಿದ್ದರೆ, ಖಾವಂದರ ನ್ಯಾಯ ಛಾವಡಿಯಲ್ಲಿ ವಾಗ್ ಕಲಹ ಪರಿಹಾರವಾಗಬೇಕಿದ್ದರೆ, ಸಸೂತ್ರವಾಗಿ ಮಂಜುನಾಥ ಸ್ವಾಮಿಯ ದರ್ಶನವಾಗಬೇಕಿದ್ದರೆ, ಯಾವ ದಿನ ಬೇಕಿದ್ದರೂ ಧರ್ಮಸ್ಥಳಕ್ಕೆ ಹೋಗಿ ಸುರಕ್ಷಿತವಾಗಿ ಮರಳ ಬಲ್ಲೆ ಎಂಬ ವಿಶ್ವಾಸ ಆ ಕಾಲದ ಭಕ್ತ ಕುಟುಂಬಗಳಿಗೆ ಬಂದದ್ದಿದ್ದರೆ ಈ ಭಾಗದಲ್ಲಿ ಅದೆಲ್ಲದಕ್ಕೂ ಏಕೈಕ ಹೆಸರು ಬನ್ನಾಡಿ ಚಾಂಪ ಪೂಜಾರಿಯವರದ್ದು.

ಚಾಂಪ ಫುಜಾರಿ ಎಂದರೆ ತೆಂಕಣದ ಧರ್ಮದೊಡೆಯನ ಹೃದಯ ಮಂದಿರದಲ್ಲಿಟ್ಟು ಪೂಜಿಸಿದ ಪುಣ್ಯಾತ್ಮ. ಅವರಿಗೆ ಪೂಜ್ಯ ಖಾವಂದರೆಂದರೆ ರಾಮನ ಮುಂದೆ ಹನುಮ ಭಾಗಿದಂತಹ ನಿಷ್ಠೆ, ಅವರದ್ದು ನಿಷ್ಕಳಂಕ ಮನಸ್ಸು, ಪರಿಶುಭ್ರ ಚಾರಿತ್ರ್ಯ. ಬನ್ನಾಡಿ ಗರೋಡಿಯ ಪೂಜೆಯವರಾಗಿದ್ದ ಚಾಂಪ ಫೂಜಾರಿಯವರ ಪೂಜೆಗೆ, ಯಾವ ದೈವವೂ ನಲಿದು, ಒಲಿದು ಬರಬೇಕು, ಅಂಥಹ ತಾದಾತ್ಮ್ಯತೆ

ಚಾಂಪ ಪೂಜಾರಿ ತನ್ನ ವ್ಯಾನಿನ ಮೂಲಕ ಬನ್ನಾಡಿ, ಗಿಳಿಯಾರು,ಕಾವಡಿ, ವಡ್ಡರ್ಸೆ,ಕೋಟ, ಪಡುಕರೆ,ಉಪ್ಲಾಡಿ ಹೀಗೆ ಪುಟ್ಟ ಪುಟ್ಟ ಊರಿನ ದಾರಿಗಳೂ ಧರ್ಮಸ್ಥಳಕ್ಕೆ ಬೆಸೆಯುವ ಸೇತುವೆಯಾದವರು.ಧರ್ಮಸ್ಥಳದ ಪೂಜ್ಯ ಖಾವಂದರಿಗೆ ಇಂದಿಗೂ ಚಾಂಪ ಪೂಜಾರಿಯವರ ಮೇಲೆ ಅಪಾರ ಪ್ರೀತಿ ನೆನೆಕೆ, ಖಾವಂದರ ಹೃದಯ ಗೆದ್ದವರು ಚಾಂಪ ಪೂಜಾರಿ. ಅವರ ನಗೆಯೇ ಒಂದು ಪ್ರೀತಿಯ ಕಡಲು ಈ ಪೋಟೋದಲ್ಲೆ ನೋಡಿ ಅವರ ಮುಖದಲ್ಲಿನ ತೇಜೋಪೂರ್ಣ ವರ್ಚಸ್ಸು.

ಚಾಂಪ ಪೂಜಾರಿ ಒಂದರ್ಥದಲ್ಲಿ ಅಕ್ಷರವಿಲ್ಲದ, ಜಗದ ಅರಿವಿಲ್ಲದ ಆ ಕಾಲದ ಮುಗ್ದ ಕುಟುಂಬದ ಪಾಲಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಮ್ಮ ಭಾಗದ ದ್ವಾರವೇ ಆಗಿದ್ದರು. ನಾಡಿದ್ದು ಅಭಿಮತ ಸಂಭ್ರಮಕ್ಕೆ ನೀವು ಬರುವುದಾದರೆ ’ಬನ್ನಾಡಿ ಚಾಂಪ ಪೂಜಾರಿ ಮಹಾದ್ವಾರದ ಮೂಲಕವೇ ಬರಬೇಕು. ಹೌದು, ಅಭಿಮತ ಸಂಭ್ರಮದ ಮಹಾದ್ವಾರಕ್ಕೆ ಚಾಂಪ ಪೂಜಾರಿಯವರ ಹೆಸರನ್ನ ಇರಿಸಲಿದ್ದೇವೆ. ಇದು ನಾವು ಅವರನ್ನ ಗೌರವದಿಂದ ನೆನೆಯುವ ಪರಿ. ಬರುತ್ತೀರಿ ತಾನೆ?

ಬನ್ನಿ ಗಿಳಿಯಾರಿಗೆ;ತೀರ ನಿಮ್ಮದೇ ಎನಿಸುವ ಊರಿಗೆ !

ಫೋಟೋ ಕೃಪೆ, ಅವರ ಮೊಮ್ಮಗ ಬಿಗ್ ಬಾಸ್ Dhanraj Cm ❤

Vasanth Giliyar


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »