TOP STORIES:

ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ -ವಸಂತ್ ಗಿಳಿಯಾರ್


ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ
-ವಸಂತ್ ಗಿಳಿಯಾರ್

ಇವತ್ತು ಚಾಂಪ ಪೂಜಾರಿಯವರಿಲ್ಲ! ಆದರೆ ಅವರ ಹೆಸರು ಉಳಿದಿದೆ, ಧರ್ಮಸ್ಥಳ ಎಂದರೆ ನಮ್ಮ ಭಾಗದಲ್ಲಿ ಎಂದಿಗೂ ನೆನಪಾಗುವ ಹೆಸರದು. ಧರ್ಮಸ್ಥಳದ ಸತ್ಯ, ಧರ್ಮ,ನ್ಯಾಯ,ನೀತಿ ಎಂಬ ಆಶಯಗಳನ್ನೇ ಬದುಕಿ ತನ್ನ ಬದುಕನ್ನೇ ಸತ್ಯವೃತವಾಗಿಸಿಕೊಂಡು ಕಾಯವನ್ನ ಗಂದದ ಕೊರಡಿನಂತೆ ಸವೆಸಿದ ಕೀರ್ತಿಶೇಷರು ಚಾಂಪ ಪೂಜಾರಿ.

ಆ ಕಾಲದಲ್ಲಿ ಈ ಊರಿನಿಂದ ಧರ್ಮಸ್ಥಳಕ್ಕೆ ಹೋಗಬೇಕಿದ್ದರೆ, ಖಾವಂದರ ನ್ಯಾಯ ಛಾವಡಿಯಲ್ಲಿ ವಾಗ್ ಕಲಹ ಪರಿಹಾರವಾಗಬೇಕಿದ್ದರೆ, ಸಸೂತ್ರವಾಗಿ ಮಂಜುನಾಥ ಸ್ವಾಮಿಯ ದರ್ಶನವಾಗಬೇಕಿದ್ದರೆ, ಯಾವ ದಿನ ಬೇಕಿದ್ದರೂ ಧರ್ಮಸ್ಥಳಕ್ಕೆ ಹೋಗಿ ಸುರಕ್ಷಿತವಾಗಿ ಮರಳ ಬಲ್ಲೆ ಎಂಬ ವಿಶ್ವಾಸ ಆ ಕಾಲದ ಭಕ್ತ ಕುಟುಂಬಗಳಿಗೆ ಬಂದದ್ದಿದ್ದರೆ ಈ ಭಾಗದಲ್ಲಿ ಅದೆಲ್ಲದಕ್ಕೂ ಏಕೈಕ ಹೆಸರು ಬನ್ನಾಡಿ ಚಾಂಪ ಪೂಜಾರಿಯವರದ್ದು.

ಚಾಂಪ ಫುಜಾರಿ ಎಂದರೆ ತೆಂಕಣದ ಧರ್ಮದೊಡೆಯನ ಹೃದಯ ಮಂದಿರದಲ್ಲಿಟ್ಟು ಪೂಜಿಸಿದ ಪುಣ್ಯಾತ್ಮ. ಅವರಿಗೆ ಪೂಜ್ಯ ಖಾವಂದರೆಂದರೆ ರಾಮನ ಮುಂದೆ ಹನುಮ ಭಾಗಿದಂತಹ ನಿಷ್ಠೆ, ಅವರದ್ದು ನಿಷ್ಕಳಂಕ ಮನಸ್ಸು, ಪರಿಶುಭ್ರ ಚಾರಿತ್ರ್ಯ. ಬನ್ನಾಡಿ ಗರೋಡಿಯ ಪೂಜೆಯವರಾಗಿದ್ದ ಚಾಂಪ ಫೂಜಾರಿಯವರ ಪೂಜೆಗೆ, ಯಾವ ದೈವವೂ ನಲಿದು, ಒಲಿದು ಬರಬೇಕು, ಅಂಥಹ ತಾದಾತ್ಮ್ಯತೆ

ಚಾಂಪ ಪೂಜಾರಿ ತನ್ನ ವ್ಯಾನಿನ ಮೂಲಕ ಬನ್ನಾಡಿ, ಗಿಳಿಯಾರು,ಕಾವಡಿ, ವಡ್ಡರ್ಸೆ,ಕೋಟ, ಪಡುಕರೆ,ಉಪ್ಲಾಡಿ ಹೀಗೆ ಪುಟ್ಟ ಪುಟ್ಟ ಊರಿನ ದಾರಿಗಳೂ ಧರ್ಮಸ್ಥಳಕ್ಕೆ ಬೆಸೆಯುವ ಸೇತುವೆಯಾದವರು.ಧರ್ಮಸ್ಥಳದ ಪೂಜ್ಯ ಖಾವಂದರಿಗೆ ಇಂದಿಗೂ ಚಾಂಪ ಪೂಜಾರಿಯವರ ಮೇಲೆ ಅಪಾರ ಪ್ರೀತಿ ನೆನೆಕೆ, ಖಾವಂದರ ಹೃದಯ ಗೆದ್ದವರು ಚಾಂಪ ಪೂಜಾರಿ. ಅವರ ನಗೆಯೇ ಒಂದು ಪ್ರೀತಿಯ ಕಡಲು ಈ ಪೋಟೋದಲ್ಲೆ ನೋಡಿ ಅವರ ಮುಖದಲ್ಲಿನ ತೇಜೋಪೂರ್ಣ ವರ್ಚಸ್ಸು.

ಚಾಂಪ ಪೂಜಾರಿ ಒಂದರ್ಥದಲ್ಲಿ ಅಕ್ಷರವಿಲ್ಲದ, ಜಗದ ಅರಿವಿಲ್ಲದ ಆ ಕಾಲದ ಮುಗ್ದ ಕುಟುಂಬದ ಪಾಲಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಮ್ಮ ಭಾಗದ ದ್ವಾರವೇ ಆಗಿದ್ದರು. ನಾಡಿದ್ದು ಅಭಿಮತ ಸಂಭ್ರಮಕ್ಕೆ ನೀವು ಬರುವುದಾದರೆ ’ಬನ್ನಾಡಿ ಚಾಂಪ ಪೂಜಾರಿ ಮಹಾದ್ವಾರದ ಮೂಲಕವೇ ಬರಬೇಕು. ಹೌದು, ಅಭಿಮತ ಸಂಭ್ರಮದ ಮಹಾದ್ವಾರಕ್ಕೆ ಚಾಂಪ ಪೂಜಾರಿಯವರ ಹೆಸರನ್ನ ಇರಿಸಲಿದ್ದೇವೆ. ಇದು ನಾವು ಅವರನ್ನ ಗೌರವದಿಂದ ನೆನೆಯುವ ಪರಿ. ಬರುತ್ತೀರಿ ತಾನೆ?

ಬನ್ನಿ ಗಿಳಿಯಾರಿಗೆ;ತೀರ ನಿಮ್ಮದೇ ಎನಿಸುವ ಊರಿಗೆ !

ಫೋಟೋ ಕೃಪೆ, ಅವರ ಮೊಮ್ಮಗ ಬಿಗ್ ಬಾಸ್ Dhanraj Cm ❤

Vasanth Giliyar


Related Posts

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »