TOP STORIES:

ಬರವುದ ಬಂಗಾರ್, ತುಳುವ ಕೇಸರಿ; ನಮ್ಮ ಹೆಮ್ಮೆಯ ಜನನಾಯಕ ಗಣೇಶ್ ಬಿ ಅಳಿಯೂರು


ತುಳು ರಂಗಭೂಮಿಯ ಹೆಸರಾಂತ ಕಥೆಗಾರ, ಗೀತರಚನೆಕಾರ, ನಿರ್ದೇಶಕ, ನಿರೂಪಕ ಹಾಗೂ ಕಲಾವಿದ. ಹಾಗೆಯೇ ತುಳುವ ಮಣ್ಣಿನ ಗಂಡುಕಲೆ ಯಕ್ಷಗಾನದ ಯಕ್ಷಕೃತಿ ರಚನೆಕಾರ. ಬರವುದ ಬಂಗಾರ್, ತುಳುವ ಕೇಸರಿ ಬಿರುದಾಂಕಿತ ನಮ್ಮ ಹೆಮ್ಮೆಯ ಜನನಾಯಕ ಗಣೇಶ್ ಬಿ ಅಳಿಯೂರು.

ಹೌದು ಒಬ್ಬ ಉತ್ತಮ ಗುರುವಿಗೆ ಅತ್ಯುತ್ತಮ ಶಿಷ್ಯ ನಾಗಬೇಕು, ಅಂತೆಯೇ ಹೆತ್ತ ತಂದೆ ತಾಯಿಯು, ತನ್ನ ಮಗನ ಸಾಧನೆಯಿಂದ ನಾಲ್ಕು ಜನ ಹೆಮ್ಮೆಯಿಂದ ಕೊಂಡಾಡಬೇಕು.
ಮಗ ಸಾಧನೆಯಲ್ಲಿ ಎತ್ತರ ಎತ್ತರವಾಗಿ ಬೆಳೆಯಬೇಕು ಅದೇ ತಾನೇ ಪೋಷಕರ ಮನ ಬಯಸುವುದು.ಅಂತಹ ಉನ್ನತ ಸಾಧಕರಲ್ಲಿ ನಮ್ಮ ಹೆಮ್ಮೆಯ ಗಣೇಶ್ ಬಿ ಅಳಿಯೂರು.

ದಿ. ಬಾಲಕೃಷ್ಣ ಪೂಜಾರಿ ಹಾಗೂ ವಿಮಲ ಬಾಲಕೃಷ್ಣ ಪೂಜಾರಿಯವರ ದ್ವಿತೀಯ ಪುತ್ರನಾಗಿ ಅಳಿಯೂರಿನ ಲೋಕೇಶ್ ನಿವಾಸದಲ್ಲಿ ಜನಿಸಿದರು. ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಅಳಿಯೂರು ಹಾಗೂ ಪ್ರೌಢಶಿಕ್ಷಣವನ್ನು ಸರಕಾರಿ ಸಂಯುಕ್ತ ಪ್ರೌಢಶಾಲೆ ಅಳಿಯೂರಿ ನಲ್ಲಿ ಮುಗಿಸಿದರು.ಬಾಲ್ಯದಲ್ಲೇ ನಟನೆಯ ಬಗ್ಗೆ ಅಪಾರ ಒಲವು ತೋರುತ್ತಿದ್ದ ಇವರು ಶಾಲಾ ದಿನಗಳಲ್ಲಿ ಪ್ರತಿಭಾಕಾರಂಜಿಯಲ್ಲಿ ಬಾಗವಹಿಸಿ ಬಹುಮಾನ ಗೆದ್ದು ಬುರುತ್ತಿದ್ದರು ಇದು ಇವರ ಕಲಾಸೇವೆಯ ಮೇಲಿದ್ದ ಅಪಾರವಾದ ಆಸಕ್ತಿಯನ್ನು ತೋರಿಸುತಿತ್ತು.ಬರವುದ ಬೀರೆ ಖ್ಯಾತಿಯ ದಿ.ಸುರೇಂದ್ರ ಕುಮಾರ್ ಕಲಾತ್ರ್ಪಾದೆ ಇವರ ಶಿಷ್ಯರಾಗಿ ಕಲಾಮಾತೆಯ ಸೇವೆಗೆ ಬರುತ್ತಾರೆ.

ನಾಟಕಕ್ಷೇತ್ರಕ್ಕೆ ಹೆಚ್ಚಿನ ಒಲವು ತೋರಿ ಸುಮಾರು 12ನಾಟಕಗಳನ್ನು ಬರೆದಿರುವ ಇವರು ತುಳುರಂಗಭೂಮಿಗೆ ಹಿಟ್ ನಾಟಕಗಳನ್ನ ಕೊಡುಗೆಯಾಗಿ ನೀಡಿದ್ದಾರೆ ಇವರ ಅಗೆಲ್ ತುಳು ನಾಟಕಕ್ಕೆ ಜಿಲ್ಲಾ ಪ್ರಶಸ್ತಿಯೊಂದಿಗೆ ಮುಂಬಯಿಯಲ್ಲಿ ಸೇರಿ ಹಲವಾರು ಯಶಸ್ವಿ ಪ್ರಯೋಗ ಕಂಡು ಜನಮೆಚ್ಚುಗೆ ಪಡೆದಿರುತ್ತದೆ ಬರಿತ ಇಲ್ಲಾದ ಭಾರತಿ ತುಳು ನಾಟಕ ನೂರಾರು ಪ್ರಯೋಗದೊಂದಿಗೆ ಮಾಧ್ಯಮಗಳಿಂದ ಉತ್ತಮ ಕಥೆ ಎಂಬ ಪ್ರಶಂಸೆ ಲಭಿಸಿದೆ ನಾಲ್ ಗೋಡೆದ ನಡುಟು ಎಂಬ ನಾಟಕ ಬೆಂಗಳೂರು ಮಂಗಳೂರಿನಲ್ಲಿ ಪ್ರದರ್ಶನ ಕಂಡು ಜನಮೆಚ್ಚುಗೆ ಪಡೆದು ಭಾರೀ ಬೇಡಿಕೆಯ ನಾಟಕವಾಗಿ ಹೊರಹೊಮ್ಮಿದೆ ಮೂರ್ತೆ ಮುದರೆ ತುಳುನಾಡಿನ ದೈವಗಳ ಮಾಯ ಶಕ್ತಿಯ ನಂಬಿಕೆ ಹಾಗೂ ಅದರ ಶಕ್ತಿಯನ್ನ ತೋರಿಸಿಕೊಟ್ಟಿತು. ಈ ನಾಟಕ ಇಡೀ
ತುಳು ರಂಗಭೂಮಿಯನ್ನೆ ತಲ್ಲಣ ಗೊಳಿಸಿ ಹೊಸ ಮಿಂಚು ಹರಿಸಿದ ಒಂದು ಅದ್ಭುತ ನಾಟಕ.

ಸದ್ದುನ ಸುದ್ದಿಜ್ಜಿ, ಪಾರಿಜಾತ, ದೇವೆರ್ ತೂಪೆರ್, ಗೌರಿ ಗಣಪೆ ಮುಂತಾದ ಯಶಸ್ವಿ ನಾಟಕಗಳನ್ನು ತುಳುರಂಗಭೂಮಿಗೆ ನೀಡಿದ ಖ್ಯಾತಿ ಇವರಿಗೆ ಸಲ್ಲಬೇಕು.ಇನ್ನೂ ಕೇವಲ ರಂಗಭೂಮಿಯಲ್ಲಿ ಅಲ್ಲದೇ ತೌಳವ ರಾಜ್ಯದ ಗಂಡುಕಲೆ ಯಕ್ಷಗಾನ ಕ್ಷೇತ್ರಕ್ಕೂ ಇವರು ಕೊಡುಗೆ ನೀಡಿದ್ದಾರೆ. ತನ್ನ ಚೊಚ್ಚಲ ಮೊದಲ ಕಥಾ ಹಂದರ ಬನತ ಬಾಲೆ ಎಂಬ ಯಕ್ಷಕೃತಿ ಅಪಾರ ಜನಮೆಚ್ಚುಗೆಯಿಂದ ಪ್ರದರ್ಶನ ಕಂಡಿತು.ಇವರ ಬಂಗಾರ್ದ ತೊಟ್ಟಿಲ್, ಪರಕೆ ಪ್ರಸಂಗ ಸುಂಕದಕಟ್ಟೆ ಮೇಳ ಮಂಗಳಾದೇವಿ ಮೇಳಗಳಲ್ಲಿ ಪ್ರದರ್ಶನ ಪಡೆಯುತ್ತಿವೆ.ಇನ್ನೂ ಇವರು ನಿರೂಪಣೆಯಲ್ಲಿಯೂ ತನ್ನ ಚಾಪನ್ನು ಮೂಡಿಸಿದ್ದಾರೆ. ತನ್ನ ಧ್ವನಿಯಲ್ಲಿ ಅದೆಷ್ಟೋ ತುಳುನಾಡಿನ ಜನರನ್ನು ಮೋಡಿ ಮಾಡಿದ್ದಾರೆ.ಇವರ ನಿರೂಪಣೆಯ ಇಂಪನ್ನೂ ಕೇಳಿ ಯಾರು ಮಾರ್ರೆ ನಿರೂಪಣೆ ತುಂಬ ಒಳ್ಳೆಯದುಂಟು ಸಕತ್ ವಾಯ್ಸ್ ಮಾರ್ರೆ ಎಂದವರು ಅನೇಕರು.

ತುಳುವ ಜನಪದ ಶೈಲಿಯ ಕಾರ್ಯಕ್ರಮಗಳಲ್ಲಿ ಪ್ರಸಿದ್ದಿ ಪಡೆದು ಪ್ರಸ್ತುತ ಕೆಲ ಚಾನೆಲ್ ಗಳಲ್ಲಿ ಅತಿಥಿ ನಿರೂಪಕರಾಗಿ ಕೆಲಸವನ್ನು ಮಾಡುತ್ತಿದ್ದರೆ.ಕೆಲ ಟೆಲಿಪಿಲ್ಮ್ ಗಳಿಗೆ ತನ್ನ ಧ್ವನಿ ಡಬ್ಬಿಂಗ್ ನೀಡುತ್ತ ಯುವ ಪ್ರತಿಭೆಗಳಿಗೆ ಪ್ರೋತ್ಸಾಹವನ್ನು ನೀಡುತ್ತ ಕಲಾಸೇವೆಗೈಯುತ್ತಿದ್ದರೆ.ತನ್ನ ಏಳವೆಯಲ್ಲೆ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿ ಭರ್ಜರಿ ಮತಗಳಿಂದ ಗೆದ್ದು ಅಳಿಯೂರಿನ ಅಭಿವ್ರಧ್ದಿಯಲ್ಲಿ ತೊಡಗಿಸಿಕೊಂಡು.ಜನರ ಕಷ್ಟಕ್ಕೆ ಹಗಲಿರುಳು ಎನ್ನದೇ ಸ್ಪಂದಿಸುತ್ತ.ಊರಿನಲ್ಲಿ ಜನಪ್ರಿಯ ಯುವನಾಯಕರಾಗಿ ಗುರುತಿಸಿಕೊಂಡು ಗರಡಿ ಫ್ರೆಂಡ್ಸ್ ಅಳಿಯೂರು ಕೂಟದ ಮುಖೇನ ಸಮಾಜಸೇವೆ ಮಾಡುತ್ತ ಊರಿಗೆ ಸಮಾಜಕ್ಕೆ ಹೆಸರು ತರುತ್ತಾ ಹತ್ತೂರಿನಲ್ಲಿ ತನ್ನದೇ ಅಭಿಮಾನಿ ಬಳಗವನ್ನ ಪಡೆದಿರುತ್ತಾರೆ.ಇವರ ಕಲಾಸೇವೆಗೆ ಸಂದಿರುವ ಗೌರವಗಳು
ನಾಟಕ ರಂಗ, ಯಕ್ಷಗಾನ ಕ್ಷೇತ್ರದ ಸಾಧನೆಗಾಗಿ 2016 ಪ್ರೇಂಡ್ಸ್ ಕ್ಲಬ್ ರಿ ಹೊಸಂಗಡಿ ಗೌರವ ಸನ್ಮಾನ ನಮ ಮಾತೆರ್ಲ ಒಂಜೆ ಕಲಾ ತಂಡದ ಗೌರವ ಸನ್ಮಾನ 2018
ಅಳ್ವಾಸ್ ರಂಗ್ 2019ಗೌರವ ಸನ್ಮಾನ ನೀಡಿ ಗುರುತಿಸಿದ್ದಾರೆ.

ಒಡಿಯೂರು ಸಂಸ್ಥಾನದಿಂದ ಆಟಿದ ತಮ್ಮನ 2019 ಗೌರವ ಸನ್ಮಾನ ನೀಡಿ ಗುರುತಿಸಿದ್ದಾರೆ. 2020ಕರಾವಳಿ ಕೇಸರಿ ಗೌರವ ಸನ್ಮಾನ ಹೀಗೆ ನಾಟಕ ರಂಗದಲ್ಲಿ ಉಡುಪಿ ದ.ಕ ಜಿಲ್ಲೆಯ ಹಲವು ಕಡೆ ಯುವಕ ಮಂಡಲ ಮಹಿಳಾ ಮಂಡಳಿ ಜಾತ್ರೋತ್ಸವ ಸಮಿತಿಗಳಿಂದ 45ಗೌರವ ಸನ್ಮಾನ ಯಕ್ಷಗಾನ ಪ್ರಸಂಗ ರಚನೆಗಾಗಿ ಸುಮಾರು 7ಗೌರವ ಸನ್ಮಾನ ಕಾರ್ಯಕ್ರಮ ನಿರೂಪಣೆಗಾಗಿ 3ಸನ್ಮಾನ ದೊಂದಿಗೆ ಬರವುದ ಬಂಗಾರ್ ತುಳುವ *ಕೇಸರಿ ಎಂಬ ಬಿರುದು ಪಡೆದಿರುತ್ತಾರೆ.ಇವರ ಈ ಕಲಾಸೇವೆಯು ಹೀಗೆಯೇ ಮುಂದುವರಿಯಲಿ ನಿಮ್ಮಿಂದ ತುಳುರಂಗಭೂಮಿಗೆ ಇನ್ನಷ್ಟೂ ಕೊಡುಗೆ ಸಿಗಲಿ ಹಾಗೆಯೇ ರಾಜಕೀಯದಲ್ಲೂ ಇನ್ನಷ್ಟೂ ಗೆಲುವು ಸಿಗಲಿ,ಕನಸು ಹೊತ್ತ ಯವ ಮನಸ್ಸುಗಳಿಗೆ ನೀವೂ ಮಾದರಿಯಾಗಲಿ ಎಂದು ನಮ್ಮ ಶುಭಹಾರೈಕೆ.

Credits: ವಿನೀತ್ ಆರ್ ಕೋಟ್ಯಾನ್ ಅಳಿಯೂರು & ಸುಕೇಶ್ ಪೂಜಾರಿ ಅಳಿಯೂರು

Write to us: billavaswarriors@gmail.com


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »