TOP STORIES:

” ಬಿರುವೆರ್ ಕುಡ್ಲ ” ಸಂಘಟನೆ ಜಿಲ್ಲೆಯ ಇತರ ಸಂಘ ಸಂಸ್ಥೆಗಳಿಗೆ ಮಾದರಿ: ಶಾಸಕ ವೇದವ್ಯಾಸ್ ಕಾಮತ್


ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ ” ಸ್ಪಂದನ ಯೋಜನೆ” ವತಿಯಿಂದ ಅಶಕ್ತ ಮೂರು ಕುಟುಂಬಗಳಿಗೆ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಸಹಾಯ ಧನ ವಿತರಣಾ ಕಾರ್ಯಕ್ರಮ ಮಂಗಳೂರಿನ ಕುದ್ರೋಳಿ ಗೋಕರ್ಣ ದೇವಸ್ಥಾನದ ಆವರಣದಲ್ಲಿ ನಡೆಯಿತು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ನೀಡಿ, ಬಳಿಕ ಮಾತನಾಡಿದ ಅವರು. ಜಿಲ್ಲೆಯ ಜನತೆಗೆ ಬಿರವೆರ್ ಕುಡ್ಲ ಸಂಘಟನೆಯ ಸೇವೆ ಬಹು ದೊಡ್ಡ ಕೊಡುಗೆ. ಈ ಸಂಘಟನೆಯ ಜಿಲ್ಲೆಯ ಇತರ ಸಂಘ ಸಂಸ್ಥೆಗಳಿಗೆ ಮಾದರಿ ಈ ಸಂಘ ಕಳೆದ ಹಲವು ವರ್ಷದ ಅವಧಿಯಲ್ಲಿ ಒಂದುವರೆ ಕೋಟಿಗೂ ಅಧಿಕ ಮೊತ್ತದ ಸಹಾಯ ಅಸ್ತ ನೀಡುತ್ತಿದ್ದು ಶ್ಲಾಘನೀಯ ಕಾರ್ಯ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಈ ಸಂಘಟನೆಯಿಂದಾಗಲಿ ಎಂದವರು ಹೇಳಿದರು.

ಕಳೆದ 6 ವರ್ಷಗಳಲ್ಲಿ ಒಂದು ಕೋಟಿ ಎಪ್ಪತ್ತು ಲಕ್ಷಕ್ಕೂ ಮಿಕ್ಕಿ ಧನ ಸಹಾಯ ಅನಾರೋಗ್ಯ ಪೀಡಿತ ಕುಟುಂಬಕ್ಕೆ ಹಸ್ತಾಂತರಗೊಂಡಿದೆ. ನಾಗುರಿ ಮಜಾಲ್ ನಿವಾಸಿ ಲೋಕೇಶ್ ಅವರಿಗೆ ಸೊಂಟದ ಮೂಳೆ ಮುರಿತ ಹಾಗೂ ಒಂದು ಕಾಲು ಕಳೆದುಕೊಂಡವರಿಗೆ 50 ಸಾವಿರ ಸಹಾಯ ಹಸ್ತ.

ಬಜಾಲ್ ನಿವಾಸಿ ಪುರಂದರ ಅವರು ಕಿಡ್ನಿ ಮೂತ್ರ ಪಿಂಡ ವೈಫಲ್ಯ ಎರಡೂ ಕಾಲು ಕಳೆದುಕೊಂಡಿರುತ್ತಾರೆ ಇವರಿಗೆ 50 ಸಾವಿರದ ಸಹಾಯ ಹಸ್ತ.

ಪಿಲಿಕುಳ ಎದುರು ಪದವು ನಿವಾಸಿ ಬದ್ರುದ್ದೀನ್ ಮೂತ್ರ ಪಿಂಡ ವೈಫಲ್ಯದಿಂದ ಬಳಲುತ್ತಿದ್ದು ಇವರಿಗೆ 50 ಸಾವಿರ ಧನ ಸಹಾಯ.

ಈ ಸಂದರ್ಭದಲ್ಲಿ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ .ವೈ ಭರತ್ ಶೆಟ್ಟಿ, ಮಂಗಳೂರು ಮೇಯರ್ ದಿವಾಕರ್ ಪಾಂಡೇಶ್ವರ್, ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್ ಸಾಯಿ ರಾಮ್,ಮೂಡ ಅಧ್ಯಕ್ಷ ರವಿ ಶಂಕರ್ ಮಿಜಾರ್,ರವೀಂದ್ರ ನಿಕಮ್,ಲತೀಶ್ ಬಲ್ಲಾಳ್ ಭಾಗ್,ಬಾಬಾ ಅಲಂಕಾರ್,ಸೂರಜ್ ಕಲ್ಯ,ಲಿಖಿತ್ ಕೋಟ್ಯಾನ್,ಲೋಹಿತ್ ಗಟ್ಟಿ,ರೆನಿತ್ ರಾಜ್ ಅಶೋಕ್ ನಗರ,ಮನೋಜ್ ಶೆಟ್ಟಿ,ರಾಕೇಶ್ ಸಾಲಿಯಾನ್,ಅಮಿತ್ ರಾಜ್,ರಾಮ್ ಎಕ್ಕೂರು,ವಾಝಿ ಪದವಿನಂಗಡಿ,ಅಶ್ರಫ್ ಆಲಿ ಕಾರ್ಕಳ,ದಿನಿಲ್ ಬಲ್ಲಾಳ್ ಭಾಗ್,ಸುರೇಶ್ ಬಲ್ಲಾಳ್ ಭಾಗ್,ರೋಷನ್ ಬಲ್ಲಾಳ್ ಭಾಗ್,ಕಿಶೋರ್ ಬಾಬು ಕೋಡಿಕಲ್,ಪ್ರಾಣೇಶ್ ಬಂಗೇರ,ಕಿರಣ್ ಉರ್ವ,ಯಶ್ವಿನ್ ಪೂಜಾರಿ,ರಕ್ಷಿತ್ ಮೂಲ್ಕಿ, ಮುಂತಾದ ಪ್ರಾಮುಖ ಸದಸ್ಯರು ಮತ್ತು ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »