TOP STORIES:

ಬಿರುವೆರ್‌ ಕುಡ್ಲ ಸಂಘಟನೆ ವಿರುದ್ಧದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ


ಉಡುಪಿ: ನಾಳೆಯೊಳಗಾಗಿ ಸಂಘಟನೆ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿರುವೆರ್‌ ಕುಡ್ಲ ಸಂಘಟನೆ ಎಚ್ಚರಿಕೆ ನೀಡಿದೆ.

ಬಿರುವೆರ್ ಕುಡ್ಲ ಉಡುಪಿ ಘಟಕದಿಂದ ಉಡುಪಿ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಬಿರುವೆರ್‌ ಕುಡ್ಲ ಸಂಘಟನೆಯ ಹೆಸರನ್ನು ಕೆಡಿಸಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ಸಂಘಟನೆ ಮಾಡುವ ಉತ್ತಮ ಸಮಾಜ ಸೇವೆಯನ್ನು ಕಂಡು ಸಹಿಸಲಾಗದ ಕೆಲವೊಂದು ವ್ಯಕ್ತಿಗಳು ನಮ್ಮ ಸಂಘಟನೆಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಶರಣ್‌ ಪಂಪ್‌ವೆಲ್‌ ಅವರು ಪೂರ್ಣ ಮಾಹಿತಿಯನ್ನು ತಿಳಿಯದೇ ಸಂಘಟನೆಯ ಮೇಲೆ ಆರೋಪ ಮಾಡಿ ನೋವುಂಟು ಮಾಡಿದ್ದಾರೆ. ಇದಕ್ಕಾಗಿ ಅವರು ಸಂಘಟನೆಯ ಕ್ಷಮೆಯಾಚಿಸಬೇಕು. ನಾಳೆಯ ಒಳಗೆ ಕ್ಷಮೆ ಕೇಳದೇ ಇದ್ದಲ್ಲಿ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಕೌಟುಂಬಿಕ ಸಂಬಂಧಗಳ ಆಧಾರದಲ್ಲಿ ಮೆಚ್ಚಿಸಲು ಏಕಾಏಕಿ ಬಿರುವೆರ್‌ ಕುಡ್ಲದ ಮೇಲೆ ಆರೋಪ ಮಾಡುವುದು ಸಲ್ಲದು. ಗುರ್ಜಿ ದೀಪೋತ್ಸವ ಮಾಡುವ ಜವಾಬ್ದಾರಿಯನ್ನು ಹೊತ್ತ ಸಮಿತಿಯ ಪವಿತ್ರ ಜಾಗದಲ್ಲಿ ಕುಡಿದು ಕುಪ್ಪಳಿಸಿ ದಾರಿಯಲ್ಲಿ ಹೋಗುವವರಿಗೆ ಗುರಾಯಿಸಿ ನೋಡುವ, ತಮಾಷೆ ಮಾಡುವ ಮೂಲಕ ಪ್ರಚೋದನೆ ನೀಡಿ ಹೊರಗಿನಿಂದ ಬಂದ ಜನ ಪಾರ್ಟಿಯ ಹೆಸರಿನಲ್ಲಿ ಗಲಾಟೆಗೆ ಕಾರಣರಾಗುತ್ತಿದ್ದಾರೆ. ಶರಣ್ ಪಂಪ್‌‌ವೆಲ್ ಅವರು ಮೊದಲು ಇದನ್ನು ತಡೆಯುವ ಕೆಲಸವನ್ನು ಮಾಡಬೇಕಿದೆ. ಬಳ್ಳಾಲ್‌ ಬಾಗ್‌ನಲ್ಲಿ ಬಂದು ಯಾರು ಗಲಾಟೆ ಮಾಡುತ್ತಿದ್ದಾರೆ ಎನ್ನುವುದನ್ನು ಶರಣ್‌ ಪಂಪ್‌ವೆ‌ಲ್‌‌ ಅವರು ಮೊದಲು ತಿಳಿದುಕೊಳ್ಳಬೇಕು ಎಂದು ಬಿರುವೆರ್ ಕುಡ್ಲ ಸಂಘಟನೆ ಹೇಳಿದೆ

ಪೊಲೀಸ್‌ ಇಲಾಖೆ ಕೂಡಾ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ತನಿಖೆ ಮಾಡುತ್ತಿದ್ದು, ಎಲ್ಲಿಯೂ ಬಿರುವೆರ್‌ ಕುಡ್ಲದ ಹೆಸರು ಪ್ರಸ್ತಾಪಿಸಿಲ್ಲ. ಒಂದೆರಡು ವ್ಯಕ್ತಿಗಳು ಬಂದು ನಮ್ಮ ಸಂಘಟನೆಯ ಮೇಲೆ ವಿನಾಕಾರಣ ಆರೋಪ ಮಾಡಿದರೆ ಜನತೆ ನಂಬುವುದಿಲ್ಲ. ಬಿರುವೆರ್‌‌ ಕುಡ್ಲದ ವತಿಯಿಂದ ಸಮಾಜ ಸೇವೆ ಮುಂದುವರಿಯಲಿದೆ. ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದಲ್ಲಿ ಬಿರುವೆರ್‌ ಕುಡ್ಲ ಸಂಘಟನೆಯ ಪಾತ್ರವಿಲ್ಲ. ಹಲ್ಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಶರಣ್‌ ಪಂಪ್‌‌ವೆಲ್‌ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು‌ ಸಂಘಟನೆ ಒತ್ತಾಯಿಸಿದೆ.

ಬಿರುವೆರ್‌ ಕುಡ್ಲ ಉಡುಪಿ ಘಟಕದ ಸಂಘಟನೆಯ ಉಡುಪಿ ಘಟಕ ಅಧ್ಯಕ್ಷ ಕಿಶೋರ್ ಪೂಜಾರಿ, ಉಪಾಧ್ಯಕ್ಷರಾದ ದಿನೇಶ್ ಅಮಿನ್, ಖಜಾಂಚಿ ರಾಜೇಶ್ ಕೊಪ್ಪ, ಕಾರ್ಯದರ್ಶಿ ಯೋಗಿಶ್ ಅಮಿನ್, ಮಾಧ್ಯಮ ಸಲಹೆಗಾರ ತೇಜಸ್ ಬಂಗೇರಾ ಉಪಸ್ಥಿತರಿದ್ದರು.


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »