TOP STORIES:

FOLLOW US

ಬಿರುವೆರ್ ಕುಡ್ಲ(ರಿ) ಬಜಪೆ ಘಟಕ ಸ್ಪಂದನ 55 ನೇ ಸೇವಾ ಯೋಜನೆ


ಬಿರುವೆರ್ ಕುಡ್ಲ(ರಿ) ಬಜಪೆ ಘಟಕ
ಸ್ಪಂದನ 55 ನೇ ಸೇವಾ ಯೋಜನೆ

ಬ್ರಹಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು ಸುಸ್ಥಿತಿಗೆ ತರುವ ಪಣವನ್ನು ತೊಟ್ಟಿರುವ ಶ್ರೀ ಉದಯ ಪೂಜಾರಿ ನೇತ್ರತ್ವದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಮಂಗಳೂರು ಕರ್ನಾಟಕ ಇದರ ಹೃದಯವಂತರು-2020 ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಇದರ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ 55ನೇ ಸೇವಾಯೋಜನೆಯಡಿಯಲ್ಲಿ ಎಕ್ಕಾರು ನಿವಾಸಿ ಪ್ರೇಮ ಇವರಿಗೆ wheelchair ಹಸ್ತಾಂತರ ಮಾಡಲಾಯಿತು.
ಎಕ್ಕಾರು ಕೆಂಚಗುಡ್ಡೆ ನಿವಾಸಿಯಾಗಿರುವ ಪ್ರೇಮ ಇವರು ಕಳೆದ ಕೆಲವು ದಿನಗಳಿಂದ ತಲೆಯಲ್ಲಿ ರಕ್ತ ಹೆಪ್ಪು ಗಟ್ಟಿ ಆಸ್ಪತ್ರೆಯಲ್ಲಿ ಕೆಲವು ದಿನಗಳ ಕಾಲ ಚಿಕಿತ್ಸೆ ಪಡೆದು ಮನೆಗೆ ಬಂದಿರುತ್ತಾರೆ. ಇವರು ಈಗ ನಡೆದುಕೊಂಡು ಹೋಗುವ ಪರಿಸ್ಥಿತಿಯಲ್ಲಿ ಇಲ್ಲ. ಇವರಿಗೆ wheelchair ನ ಅಗತ್ಯವಿತ್ತು. ಇದನ್ನು ಗಮನಿಸಿದ ಎಕ್ಕಾರು ಗ್ರಾಮ ಪಂಚಾಯತ್ ನ ಸದಸ್ಯರಾದ ಶ್ರೀ ಅನಿಲ್ ಕುಲಾಲ್ ಎಕ್ಕಾರು ಇವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಇವರಿಗೆ ಸಹಾಯಮಾಡುವಂತೆ ಮನವಿಯನ್ನು ಮಾಡಿದರು. ಇವರ ಮನವಿಗೆ ತಕ್ಷಣವೇ ಸ್ಪಂದಿಸುವ ಭರವಸೆ ಕೊಟ್ಟು, ತಾ: 17.02.2021ರಂದು ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ ಸದಸ್ಯರು ಪ್ರೇಮ ಇವರ ಮನೆಗೆ ತೆರಳಿ WHEELCHAIR ಅವರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಪೆರ್ಮುದೆ ವಲಯದ ಸಂಚಾಲಕರು ಶ್ರೀ ಕೀರ್ತನ್ ಅಮಿನ್ ಪೆರ್ಮುದೆ, ಸಹಸಂಚಾಲಕರು ಜೀವರಾಜ್ ಕೋಟ್ಯಾನ್ ಪೆರ್ಮುದೆ, ಶ್ರೀ ಸಂದೇಶ್ ಶೆಟ್ಟಿ ಜೋಕಟ್ಟೆ, ಎಕ್ಕಾರು ಗ್ರಾಮ ಪಂಚಾಯತ್ ಸದಸ್ಯರು ಶ್ರೀ ಅನಿಲ್ ಕುಲಾಲ್ ಎಕ್ಕಾರು, ಘಟಕದ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ ಕಟೀಲು, ಬಿರುವೆರ್ ಕುಡ್ಲ ಬಜಪೆ ಘಟಕದ ಎಕ್ಕಾರು ವಲಯದ ಪ್ರಮುಖರಾದ ಶ್ರೀ ಕಿರಣ್ ಪೂಜಾರಿ ಎಕ್ಕಾರು, Auto ಬೋಜ ಪೂಜಾರಿ ಸುದರ್ಶನ್ ಪೂಜಾರಿ, ಶಂಕರ್ ಪೂಜಾರಿ, ನಾಗೇಶ್ ಪೂಜಾರಿ ಉಪಸ್ಥಿತರಿದ್ದರು.

ತುರ್ತು ಸೇವಾಯೋಜನೆಯ WHEELCHAIR ಸಿದ್ಧ ಪಡಿಸಿದ ಪರಿ:
ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಮನವಿ ಬಂದ ಕೂಡಲೇ ನಮ್ಮ ಘಟಕದ ಅಧ್ಯಕ್ಷರು ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ ಇವರು ತಕ್ಷಣವೇ ಒಂದು WHEELCHAIRನ್ನು ಗುರುತಿಸಿ, ಅದನ್ನು ಹೊಸ ರೂಪಕ್ಕೆ ತರುವಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಉಪಾಧ್ಯಕ್ಷರು ಶ್ರೀ ಚಂದ್ರ ಪೂಜಾರಿ ಪೆರಾರ ಮತ್ತು ಬಿರುವೆರ್ ಕುಡ್ಲ ಬಜಪೆ ಘಟಕದ ಸಕ್ರಿಯ ಸದಸ್ಯರು ಶ್ರೀ ಸಂದೇಶ್ ಶೆಟ್ಟಿ ಜೋಕಟ್ಟೆ ಇವರು ಸೇರಿ ಖುದ್ದಾಗಿ ಕೆಲಸ ಮಾಡಿ WHEELCHAIR ಕೊಡುವಲ್ಲಿ ನೆರವಾಗಿರುತ್ತಾರೆ. ಇವರಿಗೆ ಧನ್ಯವಾದಗಳು.

ಪ್ರಕಟಣೆ: ಬಿರುವೆರ್ ಕುಡ್ಲ ಬಜಪೆ ಘಟಕ


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »