TOP STORIES:

ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..


ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶವನ್ನು ಮುಂದಿಟ್ಟುಕೊಂಡು ಯುವ ಸಮುದಾಯವನ್ನು ಜಾತಿ ಮತಬೇಧ ಮರೆತು ಸಂಘಟನೆಯಲ್ಲಿ ತೊಡಗಿಸಿಕೊಂಡು ಅಸಹಾಯಕರ ಸೇವೆ ಮಾಡುವಂತೆ ಸಂಘಟಿತರನ್ನಾಗಿ ಮಾಡುತ್ತಿರುವ ರಾಕೇಶ್ ಪೂಜಾರಿ ಅಧ್ಯಕ್ಷೆತೆಯ “ಬಿರುವೆರ್ ಕುಡ್ಲ(ರಿ)” ಸಂಘಟನೆಯ ಸ್ಥಾಪಕಾಧ್ಯಕ್ಷರಾದ, ಯುವ ನಾಯಕ “ಉದಯ್ ಪೂಜಾರಿ”ಯವರ ಜನುಮ ದಿನದಂದು(01/06/2020) “ಬೆದ್ರ ಘಟಕ”ದ ಸಂಕಲ್ಪದಂತೆ ಅಸಹಾಯಕರ ಹಸಿವನ್ನು ನೀಗಿಸುವ ಉದ್ದೇಶದಂತೆ ಮರೋಡಿಯ ಚಂದಪ್ಪ ಪೂಜಾರಿಯವರ ಹಡಿಲು ಇದ್ದ ಸುಮಾರು 4 ಎಕ್ರೆಯಷ್ಟು ಗದ್ದೆಯನ್ನು ಘಟಕದ ಉಪಾಧ್ಯಕ್ಷರಾದ “ಕೃಷ್ಣಪ್ಪ ಪೂಜಾರಿ”ಯವರ ನೇತೃತ್ವದಲ್ಲಿ ಘಟಕದ ಸದಸ್ಯರೆಲ್ಲರ ಸಹಕಾರದೊಂದಿಗೆ ಎರಡು ಹಂತಗಳಲ್ಲಿ ಸಾಗುವಳಿ ಮಾಡಿ, ಅದರಲ್ಲಿ ದೊರೆತಂತಹ ಅಕ್ಕಿಯನ್ನು ಇಂದು 53 ಫಲಾನುಭವಿಗಳನ್ನು ಗುರುತಿಸಿ ತಲಾ 25 kg ಯಂತೆ ಒಟ್ಟು 1325 KG ಅಕ್ಕಿಯನ್ನು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಜಾತಿ ಮತಭೇದ ಮರೆತು ಈ ದಿನ ಸರಳವಾಗಿ ಮೂಡಬಿದ್ರೆಯ ಸಮಾಜಮಂದಿರದಲ್ಲಿ ವಿತರಿಸಲಾಯಿತು..
ಈ ನಮ್ಮ ಕಾರ್ಯವನ್ನು ಕಂಡು ಸಮಾಜಮಂದಿರದ ಆಡಳಿತ ಮಂಡಲಿಯವರು ಉಚಿತವಾಗಿ ಸಭಾಂಗಣವನ್ನು ನೀಡುವ ಮೂಲಕ ಸಹಕರಿಸಿದರು..
ನಮ್ಮ ಆಶಯದಂತೆ ಈ ಗದ್ದೆಯಲ್ಲಿ ಸಾಗುವಳಿ ಮಾಡಿ ದೊರೆತಿರುವಂತಹ ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗಷ್ಟೇ ಅಲ್ಲದೇ ಮೂಕ ಪ್ರಾಣಿಗಳಾದ “ಬೀದಿ ನಾಯಿಗಳಿ”ಗೆ ಪ್ರತಿನಿತ್ಯ ಅನ್ನ ನೀಡುತ್ತಿರುವ ಮಂಗಳೂರಿನ ಶ್ರೀಮತಿ “ರಜನಿ ಶೆಟ್ಟಿ” ಯವರಿಗೂ 50kg ಅಕ್ಕಿಯನ್ನು ಇತ್ತೀಚೆಗೆ ಘಟಕದ ಪರವಾಗಿ ನೀಡಿರುತ್ತೇವೆ..
ಜೊತೆಗೆ ಈ ಸಾಗುವಳಿ ಕಾರ್ಯದಲ್ಲಿ ದೊರೆತಂತಹ ಬೈ ಹುಲ್ಲನ್ನು ವೇಣೂರಿನ ಗೋಶಾಲೆ ಹಾಗೂ ಕೆಂಜಾರುವಿನ ಕಪಿಲಾ ಗೋಶಾಲೆಗಳ ಗೋವುಗಳ ಮೇವಿಗಾಗಿ ಉಚಿತವಾಗಿ ಈ ಮೊದಲೇ ನೀಡಿರುತ್ತೇವೆ..

ಈ ಕೃಷಿಕಾರ್ಯಕ್ಕೆ ಮುಂದಾದ ದಿನದಿಂದ ಇವತ್ತಿನವೆರೆಗೂ ನಮ್ಮೊಂದಿಗೆ ಕೈಜೋಡಿಸಿ ವಿವಿಧ ರೀತಿಯಲ್ಲಿ ನೆರವಾದವರೆಲ್ಲರಿಗೂ ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಪರವಾಗಿ ಮನದಾಳದ ಕೃತಜ್ಞತೆಗಳು..
ಬಿರುವೆರ್ ಕುಡ್ಲ(ರಿ) ಬೆದ್ರ ಘಟಕ

 

www.billavaswarriors.com


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »