TOP STORIES:

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ ಬಿ.ಎನ್.ಶಂಕರಪೂಜಾರಿ ಮನವಿ.


ಪ್ರಸಾರ ಮತ್ತು ಪ್ರಕಟಣೆಯ ಕೃಪೆಗಾಗಿ.

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ  ಬಿ.ಎನ್.ಶಂಕರಪೂಜಾರಿ ಮನವಿ.

ಶೇಂದಿ ತೆಗೆದು ಬದುಕುವ ಬಿಲ್ಲವ/ಈಡಿಗ ಜನಾಂಗದ ಮೂರ್ತೆದಾರಿಕೆ ಕಸುಬು ಲಾಕ್ ಡೌನ್ ನಿಂದಾಗಿ ಸಂಪೂರ್ಣ ನಿಂತುಹೋಗಿದ್ದು, ಮೂರ್ತೆದಾರರ ಕುಟುಂಬಗಳು ಅನಾಥವಾಗಿವೆ. ಬಿಲ್ಲವ ಜನಾಂಗದ ಆರಾಧ್ಯ ದೇವರುಗಳಾದ ಕೋಟಿಚೆನ್ನಯ್ಯಗರಡಿಗಳಲ್ಲಿ ಪೂಜೆ ಮಾಡುವ ಗರಡಿ ಅರ್ಚಕರು, ದರ್ಶನ ಪಾತ್ರಿಗಳು ಇನ್ನಿತರ ಸಿಬ್ಬಂದಿಗಳು ಇತರ ದೇವಸ್ಥಾನಗಳ ಸಿಬ್ಬಂದಿಗಳಂತೆಸಂಕಷ್ಟದಲ್ಲಿದ್ದು, ರಾಜ್ಯ ಸರಕಾರ ಇವರ ನೆರವಿಗೆ ಬರಬೇಕಾಗಿದೆ. ಮೂರ್ತೆದಾರರ ಸಹಕಾರಿ ಸಂಘಗಳಲ್ಲಿ ಸ್ವಸಹಾಯ ಸಂಘವನ್ನುರಚನೆ ಮಾಡಿಕೊಂಡಿರುವ  40 ಸಾವಿರಕ್ಕೂ ಮಿಕ್ಕಿದ ಸದಸ್ಯೆಯರು ನಿರುದ್ಯೋಗಿಗಳಾಗಿದ್ದರೆ, ಈಡಿಗ/ಬಿಲ್ಲವರ ಕುಲಕಸುಬುಸ್ಥಬ್ದವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು, ಸಂಸದರು, ಸಚಿವರ ಸಹಿತ ಸರ್ವರು ಬಿಲ್ಲವ ಜನಾಂಗದ ಬಗ್ಗೆಗಮನ ಹರಿಸಿ, ಮುಖ್ಯ ಮಂತ್ರಿಗಳ ಮೇಲೆ ಒತ್ತಡ ತಂದು, ಬಿಲ್ಲವ ಜನಾಂಗಕ್ಕೆ ನ್ಯಾಯ ಒದಗಿಸಿ ಕೂಡಲೇ ಪರಿಹಾರಘೋಷಿಸಬೇಕೆಂದು ಬಿಲ್ಲವ ಸಮಾಜದ ಮುಖಂಡ ಮಾಜಿ ಜಿ.ಪಂ.ಅಧ್ಯಕ್ಷರು, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರು ಆಗಿರುವಬಿ.ಎನ್.ಶಂಕರ ಪೂಜಾರಿಯವರು ಎಲ್ಲಾ ಶಾಸಕರಿಗೆ, ಸಂಸದರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ. ಎಲ್ಲರಿಗೂ ಪರಿಹಾರನೀಡುವಾಗ ನಮ್ಮ ಜನಾಂಗವನ್ನು ಕೈ ಬಿಟ್ಟಿರುವುದು ನೋವುಂಟು ಮಾಡಿದೆ ಎಂದು ಬಿ.ಎನ್.ಶಂಕರ ಪೂಜಾರಿಯವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »