TOP STORIES:

ಬಿಲ್ಲವ ಸಭೆ-ಸಮಾರಂಭಗಳಿಗೆ ಜಗದೀಶ್ ಅಧಿಕಾರಿಗೆ ಆಹ್ವಾನವಿಲ್ಲ: ಮೂಲ್ಕಿ ಬಿಲ್ಲವ ಸಂಘ ನಿರ್ಧಾರ…!


ಮೂಲ್ಕಿ:
ಬಿಲ್ಲವ ಆರಾಧ್ಯ ಶಕ್ತಿಗಳಾದ ಕೋಟಿ ಚೆನ್ನಯ್ಯ ಹಾಗೂ ಬಿಲ್ಲವ ಸಮುದಾಯದ ನಾಯಕರುಗಳ ಬಗ್ಗೆ ತುಚ್ಚವಾಗಿ ನಿಂದಿಸಿರುವ ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿಯನ್ನು ಪ್ರತಿಯೊಬ್ಬ ಬಿಲ್ಲವ ಸಮುದಾಯದವರು ಹಾಗೂ ಬಿಲ್ಲವ ಸಂಘಟನೆಗಳು ಯಾವುದೇ ವೈಯಕ್ತಿಕ ಹಾಗೂ ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಇನ್ನು ಮುಂದೆ ಆಹ್ವಾನ ನೀಡದಿರಲು ನಿರ್ಧರಿಸಿ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘ ಮಹತ್ವದ ನಿರ್ಣಯವನ್ನು ಕೈಗೊಂಡಿದೆ.

ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಭಾನುವಾರ ಸಂಘದ ಅಧ್ಯಕ್ಷರಾದ ರಮೇಶ್ ಅಮೀನ್ ಕೊಕ್ಕರ್‌ಕಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಂಡಿದೆ.
ಬಿಲ್ಲವ ಸಮುದಾಯ ಸಹಿತ ತುಳುನಾಡಿನ ಸರ್ವಧರ್ಮದವರು ಸಹ ಆರಾಧ್ಯ ದೈವ-ದೇವರುಗಳಾಗಿ ನಂಬಿಕೊಂಡು ಬಂದಿರುವ ಕೋಟಿ ಚೆನ್ನಯ್ಯ ಅವಳಿ ವೀರರಿಗೆ ಸಮಸ್ತ ಜನರು ಗರಡಿಯ ಇನ್ನಿತರ ದೈವ ಸಾನ್ನಿಧ್ಯದ ಮೂಲಕ ವಿಶೇಷ ಸ್ಥಾನಮಾನವನ್ನು ನೀಡಿರುವುದನ್ನು ತನ್ನ ಹೀನ ಬುದ್ದಿಯಿಂದ ಜಗದೀಶ್ ಅಧಿಕಾರಿ ಸಾರ್ವಜನಿಕವಾಗಿ ಹೇಳಿರುವುದರ ಬಗ್ಗೆ ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು. ಅವರ ಮನಸ್ಥಿತಿಯನ್ನು ಅರಿತು ಅವರು ಕೇಳಿರುವ ಕ್ಷಮೆಯು ಆಧಾರ ರಹಿತವಾಗಿ ಕೇವಲ ಕಾಲ್ಪನಿಕವಾಗಿದೆ. ಮನಸ್ಸಿನಲ್ಲಿ ದುಷ್ಟ ಬುದ್ದಿಯನ್ನಿಟ್ಟುಕೊಂಡು ಯಾರದೋ ಒತ್ತಡಕ್ಕೆ ಮಣಿದು ಕ್ಷಮೆ ಕೇಳಿದ್ದರೂ ಸಹ ಬಿಲ್ಲವ ಸಮಾಜ ಅವರನ್ನು ಕ್ಷಮಿಸೋಲ್ಲ ಎಂದು ನಿರ್ಧರಿಸಲಾಗಿದೆ.

ಸಭೆಯಲ್ಲಿ ನಿರ್ಧರಿಸಿದಂತೆ ಜಗದೀಶ್ ಅಧಿಕಾರಿಯನ್ನು ಮೂಲ್ಕಿಯ ಬಿಲ್ಲವ ಸಮಾಜದವರು ತಮ್ಮ ವೈಯಕ್ತಿಕ ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನಿಸಬಾರದು ಎಂಬ ನಿರ್ಣಯಕ್ಕೆ ಗೌರವ ನೀಡಬೇಕು, ಇಂತಹ ಸಮಾಜ ವಿಘಟನೆ ಮಾಡುವ ವ್ಯಕ್ತಿಗಳಾಗಲಿ, ಶಕ್ತಿಗಳು ಬಿಲ್ಲವ ಸಮಾಜವನ್ನು ಒಡೆದು ಆಳುವ ನೀತಿಯ ವಿರುದ್ಧವಾಗಿ ಈ ಮಹತ್ವದ ನಿರ್ಧಾರವಾಗಿದೆ. ವಿಶ್ವದಲ್ಲಿರುವ ಎಲ್ಲಾ ಬಿಲ್ಲವ ಸಂಘಟನೆಗಳು ಸಹ ಜಗದೀಶ್ ಅಧಿಕಾರಿಯನ್ನು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆಹ್ವಾನಿಸದೇ ತಿರಸ್ಕರಿಸಬೇಕು ಎಂದು ಬಿಲ್ಲವ ಸಂಘಗಳ ಒಕ್ಕೂಟವಾದ ರಾಷ್ಟ್ರೀಯ ಬಿಲ್ಲವರ ಮಹಾಮಂಡಲಕ್ಕೆ ಮನವಿ ಮಾಡುವುದು ಎಂದು ನಿರ್ಣಯಿಸಿಕೊಂಡು,
ರಾಜಕೀಯವಾಗಿ ಇಂತಹ ವ್ಯಕ್ತಿಗಳು ಸಮಾಜದಲ್ಲಿ ತಪ್ಪು ಸಂದೇಶವನ್ನು ನೀಡುವ ಹಾಗೂ ತನ್ನ ಬೇಜವಬ್ದಾರಿಯ ಉದ್ಧಟತನ ತೋರಿರುವುದರಿಂದ ಇವರನ್ನು ಕೂಡಲೆ ರಾಜಕೀಯ ಪಕ್ಷದಿಂದ ಶಾಶ್ವತವಾಗಿ ನಿವೃತ್ತಿಗೊಳಿಸಬೇಕು ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಹಾಗೂ ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರಲ್ಲಿ ಮನವಿ ಮಾಡಿ ಹಕ್ಕೊತ್ತಾಯ ನಡೆಸುವುದೆಂದು ತೀರ್ಮಾನಿಸಲಾಯಿತು.

ಸಭೆಯಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರುಗಳಾದ ರಾಘು ಸುವರ್ಣ ಕೊಳಚಿಕಂಬಳ, ಯದೀಶ್ ಅಮೀನ್ ಕೊಕ್ಕರ್‌ಕಲ್, ಡಾ.ಹರಿಶ್ಚಂದ್ರ ಪಿ. ಸಾಲಿಯಾನ್, ಮೂಲ್ಕಿ ನಗರ ಪಂಚಾಯತ್‌ನ ಉಪಾಧ್ಯಕ್ಷ ಸತೀಶ್ ಅಂಚನ್ ಬಾಳೆಹಿತ್ಲು, ಬಿರುವೆರ್ ಕುಡ್ಲದ ಮೂಲ್ಕಿ ಘಟಕದ ಅಧ್ಯಕ್ಷ ಕಿಶೋರ್ ಸಾಲ್ಯಾನ್, ಶ್ರೀ ನಾರಾಯಣಗುರು ಸೇವಾದಳದ ಪರವಾಗಿ ಉಮೇಶ್ ಮಾನಂಪಾಡಿ, ಶ್ರೀ ನಾರಾಯಣಗುರು ಮಹಿಳಾ ಮಂಡಳಿಯ ಗೌರವಾಧ್ಯಕ್ಷೆ ಸರೋಜಿನಿ ಸುವರ್ಣ, ಸಾಮಾಜಿಕ ಚಿಂತಕ ದಿನೇಶ್ ಬಪ್ಪನಾಡು ಮತ್ತಿತರ ಸಂಘದ ಸದಸ್ಯರು ಮಾತನಾಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಕಮಲಾಕ್ಷ ಬಡುಗುಹಿತ್ಲು ನಿರ್ಣಯವನ್ನು ಮಂಡಿಸಿ, ಕಾರ್ಯಕ್ರಮ ನಿರೂಪಿಸಿದರು.

“ಇಂತಹ ನಿರ್ಣಯ ಪ್ರತೀ ಬಿಲ್ಲವ ಸಂಘದಲ್ಲಿ ನಡೆಯಲಿ ಎಂಬ ಆಶಯ ನಮ್ಮದು…. ಇದು ಬಿಲ್ಲವರ ಸ್ವಾಭಿಮಾನದ ಪ್ರಶ್ನೆ” ….-ರಮೇಶ್ ಅಮೀನ್
ಅಧ್ಯಕ್ಷರು
ಬಿಲ್ಲವ ಸಮಾಜ ಸೇವಾ ಸಂಘ ( ರಿ) ಮೂಲ್ಕಿ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »