TOP STORIES:

ಬಿಲ್ಲವ ಸಮುದಾಯವನ್ನು ಸರ್ಕಾರ ಈ ರೀತಿ ವಂಚಿಸುತ್ತಿರುವುದು ನ್ಯಾಯೋಚಿತವಲ್ಲ


ಕರ್ನಾಟಕ ಸರ್ಕಾರ ಬೇರೆ ಬೇರೆ ಜಾತಿ ಸಮುದಾಯಗಳ ನಿಗಮ,ಪ್ರಾಧಿಕಾರದ ಬೇಡಿಕೆಯನ್ನು ಈಡೇರಿಸಿದ್ದು ಸಮರ್ಥನೀಯ.ಆದರೆ ನಮ್ಮ ಬಿಲ್ಲವ ಸಮುದಾಯವನ್ನು ನಡೆಸಿಕೊಳ್ಳುತ್ತಿರುವ ರೀತಿ ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ‌.

ಉಪಪಂಗಡಗಳನ್ನೊಳಗೊಂಡಂತೆ ಸಂಖ್ಯಾಪ್ರಾಬಲ್ಯವಿರುವ ಬಿಲ್ಲವ ಸಮುದಾಯ ಈವರೆಗೆ ಹಲವಾರು ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದ್ದಾಗ್ಯೂ ಸರ್ಕಾರ ತಾತ್ಸಾರ ತೋರುತ್ತಿದೆ.ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಯ ನೇತೃತ್ವದಲ್ಲಿ 50,000 ಸಮಾಜಬಾಂಧವರನ್ನು ಒಗ್ಗೂಡಿಸಿ ಬೃಹತ್ ಬಿಲ್ಲವ ಸಮಾವೇಶ ದ ಮುಖಾಂತರ “ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ” ಸ್ಥಾಪಿಸಬೇಕೆಂಬ ಪ್ರಮುಖ ಬೇಡಿಕೆಯನ್ನು ನೀಡಲಾಗಿತ್ತು.ಇದರೊಂದಿಗೆ ಇತರ ಬೇಡಿಕೆಗಳ ಕುರಿತು ಪದೇ ಪದೇ ಕರಾವಳಿಯ ಜನಪ್ರತಿನಿಧಿಗಳಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾಗ್ಯಾ ನಕಾರಾತ್ಮಕ ಪ್ರತಿಕ್ರಿಯೆಯಿದೆ.ಕೇವಲ ಚುನಾವಣೆ ಸಂದರ್ಭ ಮಾತ್ರ ಬಿಲ್ಲವ ಸಮಾಜವನ್ನು ಬಳಸಿಕೊಳ್ಳುತ್ತಿರುವ ಹುನ್ನಾರದ ಕುರಿತು ಸಮಾಜ ಜಾಗೃತಗೊಳ್ಳುತ್ತಿದೆ.ಕರಾವಳಿಯ ಶಾಸಕರು,ಸಂಸದರು ಮತ್ತು ಎಲ್ಲಾ ಸ್ತರದ ಜನಪ್ರತಿನಿಧಿಗಳು ಕೇವಲ ಸಭಾವೇದಿಕೆಯ ಭಾಷಣಕ್ಕೆ ಮಾತ್ರ ಬಿಲ್ಲವ ಸಮಾಜದ ಒಲೈಕೆ ಮಾಡುತ್ತಾ ಯಾವುದೇ ಅನುಕೂಲ ಮಾಡದಿರುವ ಕುರಿತು ಭವಿಷ್ಯದಲ್ಲಿ ಸಮಾಜಬಾಂಧವರು ಇಂತವರ ವಿರುದ್ದ ಸೂಕ್ತ ನಿರ್ಧಾರ ಕೈಗೊಳ್ಳಲು ಪ್ರೇರಣೆ ನೀಡಿದೆ.
ಇತರ ಸಮುದಾಯಕ್ಕೆ ಮಂಜೂರಾಗುತ್ತಿರುವ ಎಲ್ಲಾ ಅನುಕೂಲತೆಗಳಲ್ಲಿ ಬಿಲ್ಲವ ಸಮುದಾಯವನ್ನು ವಂಚಿಸುತ್ತಿರುವುದು ನ್ಯಾಯೋಚಿತವಲ್ಲ.

-ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವಸದಸ್ಯರು.
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ).


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »