TOP STORIES:

ಬಿಲ್ಲವರ ಹಾದಿ ತಪ್ಪಿಸುತ್ತಿರುವ ಸರ್ಕಾರ : ಪದ್ಮರಾಜ್ ಆರ್


ಮಂಗಳೂರು : ಸರ್ಕಾರ ಸ್ಥಾಪಿಸಿದ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆಸರ್ಕಾರ ಈಡಿಗ ಸಮುದಾಯದ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷಪದ್ಮರಾಜ ಆರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ .5ರಂದು ಸಚಿವ ಸುನೀಲ್‌ಕುಮಾರ್ ನೇತೃತ್ವದಲ್ಲಿ ಬಿಲ್ಲವರ ನಿಯೋಗ ಕೋಶದ ಬದಲು ನಿಗಮ ಸ್ಥಾಪನೆ ಮಾಡಬೇಕುಎಂದು ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಿತ್ತು. ಸಂದರ್ಭ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ವಿರೋಧ ಇರುವುದುಸರ್ಕಾರಕ್ಕೆ ಮನವರಿಕೆಯಾಗಿದ್ದು, ಕೋಶವನ್ನು ಹಿಂಪಡೆದು ಅಭಿವೃದ್ಧಿ ನಿಗಮವನ್ನಾಗಿ ಪರಿವರ್ತಿಸುವುದಾಗಿ ಭರವಸೆಯನ್ನೂಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದರು. ಆದರೆ .6ರಂದು ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ  10 ಕೋಟಿ ರೂ. ಬಿಡುಗಡೆಗೊಳಿಸಿ ಆದೇಶ ಹೊರಡಿಸುವ ಮೂಲಕ ಸಮಾಜದ ದಾರಿ ತಪ್ಪಿಸುವ ಕಾರ್ಯ ನಡೆಸಿದೆ. ಬಿಲ್ಲವ ಈಡಿಗ ನಿಗಮದ ಬಗ್ಗೆತಮ್ಮ ನಿಲುವು ಏನು ಎಂಬುದನ್ನು ಕೂಡಲೇ ಸರ್ಕಾರ ಸ್ಪಷ್ಟಪಡಿಸಲಿ. ಯಾಕೆ ಪದೇ ಪದೇ ಗೊಂದಲ ಸೃಷ್ಟಿಸುತ್ತೀರಿ.

ಸುಮಾರು 26 ಪಂಗಡಗಳನ್ನು ಒಳಗೊಂಡ ಬಿಲ್ಲವ ಈಡಿಗ ನಾಮಧಾರಿ ಸಮಾಜಕ್ಕೆ ಪತ್ಯೇಕ ನಿಗಮ ಸ್ಥಾಪನೆ ಮಾಡಬೇಕು ಎಂದು ಹಿಂದಿನಿಂದಲೂ ಆಗ್ರಹಿಸುತ್ತಾ ಬರಲಾಗಿತ್ತು. ಆದರೆ ಬೇರೆ ಬೇರೆ ಕಾರಣ ಹೇಳಿ ಸರ್ಕಾರ ನಿಗಮ ಸ್ಥಾಪನೆಯನ್ನುಮುಂದೂಡುತ್ತಲೇ ಬರುತ್ತಿತ್ತು. ಇದರ ಮಧ್ಯದಲ್ಲಿ ಬಿಲ್ಲವ ಅಭಿವೃದ್ಧಿ ಕೋಶ ಸ್ಥಾಪನೆ ಮಾಡಿ ಆದೇಶ ಹೊರಡಿಸಿತ್ತು. ಜೀವವಿಲ್ಲದಕೋಶ ಮತ್ತು ನಿಗಮಕ್ಕೆ ಅಜಗಜಾಂತರ ವ್ಯತ್ಯಾಸ ಇರುವುದರಿಂದ ಅಂದೇ ಕೋಶಕ್ಕೆ ಸಮಾಜ ವಿರೋಧ ವ್ಯಕ್ತಪಡಿಸಿತ್ತು.

ಕೋಶ ದೊಡ್ಡ ಮೋಸ. ಇದರಲ್ಲಿ ಏನು ಕೂಡ ಇಲ್ಲ. ಬಿಲ್ಲವ ಈಡಿಗರ ಅಭಿವೃದ್ಧಿಗೆ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಸ್ಥಾಪಿಸಿ ಇದಕ್ಕೆ 5೦೦ ಕೋಟಿ ಮೀಸಲಿಡಿ ಎಂಬ ಸಮಾಜದ ಬೇಡಿಕೆಗೆ ಸ್ಪಂದಿಸುವ ಬದಲು ಬಿಲ್ಲವ ಸಮಾಜದಲ್ಲಿ ಒಡಕುಉಂಟುಮಾಡುವ ರಾಜಕೀಯ ಕಾರ್ಯತಂತ್ರದ ಭಾಗವಾಗಿ ಕಳೆದ .5ರಂದು ಆಯ್ದ ಕೆಲವರನ್ನು ಬೆಂಗಳೂರಿಗೆ ಕರೆಸಿ ಬ್ರಹ್ಮಶ್ರೀನಾರಾಯಣಗುರು ನಿಗಮ ಘೋಷಣೆ ಇದೆ ಎಂದು ಹೇಳಿ ದಾರಿ ತಪ್ಪಿಸಲಾಗಿತ್ತು. ಕೆಲವರು ಸಂಭ್ರಮ ಪಟ್ಟು ಬ್ರಹ್ಮಶ್ರೀನಾರಾಯಣಗುರು ನಿಗಮ ಆಯಿತು ಎಂಬ ರಾಜಕಾರಣಿಗಳ ಪೊಳ್ಳು ಭರವಸೆಗೆ ಅಭಿನಂದನೆಯನ್ನೂ ಸಲ್ಲಿಸಿಯಾಗಿತ್ತು.

ಇದೀಗ ಅದರ ಬೆನ್ನಲ್ಲೇ .6ರಂದು ಸರ್ಕಾರ ಬಿಲ್ಲವ ಅಭಿವೃದ್ಧಿ ಕೋಶಕ್ಕೆ 10 ಕೋಟಿ ರೂಪಾಯಿ ಬಿಡುಗಡೆ ಮಾಡಿ ಸರ್ಕಾರ ಅಧೀನಕಾರ್ಯದರ್ಶಿ ಆದೇಶಿಸಿದ್ದಾರೆ. ಇದರ ಅರ್ಥ ಏನು? ಅನಗತ್ಯ ಗೊಂದಲ ಸೃಷ್ಟಿಸುವುದರ ಉದ್ದೇಶವಾದರೂ ಏನುಆದ್ದರಿಂದಸರ್ಕಾರಕ್ಕೆ ನಿಗಮ ಸ್ಥಾಪನೆ ಮಾಡಲು ಸಾಧ್ಯ ಇಲ್ಲದಿದ್ದರೆ ಇಲ್ಲ ಎಂದು ನೇರವಾಗಿ ತಿಳಿಸಲಿ. ಅದು ಬಿಟ್ಟು ಬೋಗಸ್ ಭರವಸೆನೀಡುತ್ತಾ ಬರುತ್ತಿರುವುದು ಖಂಡನಾರ್ಹ.

ಮಾತ್ರವಲ್ಲದೆ ಸರ್ಕಾರದ ನಿಲುವು ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದೆ ಅಭಿನಂದನೆ ಸಲ್ಲಿಸಿರುವುದೂ ಕೂಡ ಖೇದಕರ. ನಾಯಕರುಎನಿಸಿಕೊಂಡವರನ್ನು ಸಮಾಜ ಅನುಸರಿಸಿಕೊಂಡು ಹೋಗುತ್ತದೆ. ಅವರ ಮೇಲೆ ಅತಿಯಾದ ವಿಶ್ವಾಸವನ್ನು ಇಟ್ಟುಕೊಂಡಿರುತ್ತಾರೆ. ಆದ್ದರಿಂದ ಯಾವುದೇ ಸ್ಪಷ್ಟತೆ ಇಲ್ಲದೆ ಗಡಿಬಿಡಿಯಲ್ಲಿ ಸರ್ಕಾರದ ನಿಲುವನ್ನು ಸ್ವಾಗತಿಸಿ ದ್ವಂದ್ವ ನಿಲುವು ಪ್ರಕಟಿಸಿದರೆ ಸಮಾಜದದಾರಿ ತಪ್ಪಿದಂತೆಯೂ ಆಗುತ್ತದೆ. ಹಿಂದೆ ಸಮಾಜ ನಡೆಸಿದ ಹೋರಾಟಕ್ಕೂ ಯಾವುದೇ ಮಾನ್ಯತೆ ಇಲ್ಲದಂತಾಗುತ್ತದೆ ಎಂದುಪದ್ಮರಾಜ್ ಆಕ್ರೋಶ ವ್ಯಕ್ತಪಡಿಸಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »