TOP STORIES:

ಬಿಲ್ಲವಾಸ್ ದುಬೈ ಕೂಟದ ಮಾಜಿ ಅಧ್ಯಕ್ಷರಾದ ಶ್ರೀ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ…


ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಮಾಜಿ ಅಧ್ಯಕ್ಷರು, ಗೆಜ್ಜೆಗಿರಿ ಕ್ಷೇತ್ರದ ಪೋಷಕರೂ ಆದಶ್ರೀಯುತ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಕುಟುಂಬಸಮೇತರಾಗಿ ಶ್ರೀ  ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದಶಕ್ತಿಗಳ ದರ್ಶನ ಪಡೆದು ಅನ್ನ ಪ್ರಸಾದವನ್ನು ಸ್ವೀಕರಿಸಿದರು.ಸತ್ಯಧರ್ಮ ಚಾವಡಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಶ್ರೀಯುತರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ನಂತರ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇದರ ನೂತನ ಯಕ್ಷಗಾನ ಮೇಳದಕರಪತ್ರವನ್ನು ಕ್ಷೇತ್ರಾಡಳಿತ ಸಮಿತಿಯ ಪದಾಧಿಕಾರಿಗಳು ಶ್ರೀಯುತರಿಗೆ ಹಸ್ತಾಂತರಿಸಿದರು.

ಕ್ಷೇತ್ರದ ಭಕ್ತಿಯ ಶ್ರದ್ಧಾ ಕೇಂದ್ರ ನಿರ್ಮಾಣದ ಬಗ್ಗೆ ಹಾಗು ಕ್ಷೇತ್ರದಲ್ಲಿ ಮುಂದೆ ನಡೆಯಲಿರುವ ಅಭಿವೃದ್ಧಿಯ ಕೆಲಸ ಕಾರ್ಯಗಳುಮತ್ತು ಕ್ಷೇತ್ರದ ನೂತನ ಯಕ್ಷಗಾನ ಮೇಳದ ಬಗ್ಗೆ, ಕ್ಷೇತ್ರವನ್ನು ಸಂದರ್ಶಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಕ್ಷೇತ್ರದ ಸಾನಿಧ್ಯ ಶಕ್ತಿಗಳ ಕಾರಣೀಕದ ಮಹತ್ವವನ್ನು ತಾನು ಕೊಂಡಾಡಿ ಭಕ್ತಿ ಪರಮಷರಾಗಿ ಕ್ಷೇತ್ರದ ಮುಂದಿನ ಅಭಿವೃದ್ಧಿ ಕೆಲಸಕಾರ್ಯಗಳಿಗೆ ತನ್ನನ್ನು ತಾನು ಸಂಪೂರ್ಣವಾಗಿ ತೊಡಗಿಸಿಕೊಂಡು ತನ್ನವರನ್ನು ಪ್ರೇರೇಪಿಸುವುದರ ಜೊತೆಗೆ ಇದು ಸಮಾಜದಒಂದು ಪ್ರಬಲ ಶಕ್ತಿ ಕೇಂದ್ರವಾಗಬೇಕು ಎಂದು ಇಂಗಿತ ವ್ಯಕ್ತಪಡಿಸಿದ ಶ್ರೀಯುತರು ಎಲ್ಲರನ್ನು ಒಗ್ಗೂಡಿಸುವ ಭರವಸೆಯನ್ನುನೀಡಿದರು.

ಶ್ರೀ ಗೆಜ್ಜೆಗಿರಿ ನೂತನ ಯಕ್ಷಗಾನ ಮೇಳದ ರಂಗಸ್ಥಳದ ವೆಚ್ಚವನ್ನು ಮಾತೆಯ ಗೆಜ್ಜೆ ಸೇವೆಗೆ ಸೇವಾ ರೂಪದಲ್ಲಿ ಸಮರ್ಪಿಸಿದರು. ದುಬೈಯ ತಮ್ಮ ಮಿತ್ರರು ಮತ್ತು ಸಮಾಜ ಭಾಂಧವರನ್ನು ಪ್ರೇರೇಪಿಸಿ ಇನ್ನಷ್ಟು ಹೆಚ್ಚಿನ ಮೊತ್ತವನ್ನು ಗೆಜ್ಜೆಗಿರಿಯ ನೂತನ ಯಕ್ಷಗಾನಮೇಳಕ್ಕೆ ಮತ್ತು ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಹಕರಿಸುವುದಾಗಿ ಭರವಸೆಯನ್ನು ನೀಡಿದರು.

ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಬಿಲ್ಲವಾಸ್ ದುಬೈ ಕೂಟದ ವತಿಯಿಂದ ದೊಡ್ಡ ಮೊತ್ತವನ್ನು ಸೇವಾರೂಪದಲ್ಲಿ ನೀಡಿ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರ ಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿ ಇವರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳುನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದ ವತಿಯಿಂದ ನಮ್ಮ ಹಾರೈಕೆಗಳು.

ಶ್ರೀ ದೇಯಿಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »