TOP STORIES:

FOLLOW US

ಬೆನ್ನು ನೋವು ಇದೆಯಾ ಹಾಗದರೆ ಈ ಸ್ಟೋರಿ ಓದಿ


ಇತ್ತೀಚೆಗಿನ ನಮ್ಮ ದೈನಂದಿನ ಚಟುವಟಿಕೆಗಳು ದೇಹವನ್ನು ನಾನಾ ರೀತಿಯಲ್ಲಿ ಕಾಡುತ್ತದೆ. ಅದರಲ್ಲಿ ಬೆನ್ನು ನೋವು ಕೂಡ ಒಂದಾಗಿದೆ. ಈ ಬೆನ್ನು ನೋವಿನಿಂದ ರಿಲ್ಯಾಕ್ಸ್ ಆಗಲು ನಾವು ಬಹಳಷ್ಟು ಸಲ ಹೆಣಗಾಡಬೇಕಾಗುತ್ತದೆ.

ಹೆಚ್ಚಿನವರು ಬೆನ್ನು ನೋವು ಕಾಡುವಾಗಲೆಲ್ಲ ನೋವು ನಿವಾರಕ ಮಾತ್ರೆ ಸೇವಿಸಿ ತಕ್ಷಣಕ್ಕೆ ಶಮನಗೊಳಿಸುವ ಪ್ರಯತ್ನ ಮಾಡುತ್ತಾರೆ. ಆದರೆ ಇದನ್ನೇ ಮುಂದುವರೆಸುವುದು ಆರೋಗ್ಯದ ದೃಷ್ಠಿಯಿಂದ ಮಾರಕ ಎಂಬುದನ್ನು ಮರೆಯಬಾರದು. ಹಾಗಾದರೆ ಬೆನ್ನು ನೋವು ಕಡಿಮೆ ಮಾಡಲು ಏನು ಮಾಡಬಹುದು ಎಂಬುದನ್ನು ನೋಡುವುದಾದರೆ ವ್ಯಾಯಾಮ ಬೆನ್ನು ನೋವು ತಡೆಗೆ ಸಹಕಾರಿ ಎನ್ನಲಾಗುತ್ತದೆ.

ಸಾಮಾನ್ಯವಾಗಿ ಬೆನ್ನು ನೋವು ಕುಳಿತು, ಬಗ್ಗಿ ಕೆಲಸ ಮಾಡುವವರಲ್ಲಿ, ದೈಹಿಕ ಶ್ರಮದ ಕೆಲಸ ಮಾಡದವರಲ್ಲಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ರಾತ್ರಿ ಮಲಗುವಾಗ ಇಲ್ಲದ ಬೆನ್ನುನೋವು ಬೆಳಿಗ್ಗೆ ಹಾಸಿಗೆಯಿಂದ ಏಳುವಾಗ ಕಾಣಿಸಿಕೊಳ್ಳಬಹುದು. ಬಹಳಷ್ಟು ಜನ ಏನೂ ಕೆಲಸ ಮಾಡದೆ ಮನೆಯಲ್ಲಿ ಕುಳಿತು ಸಮಯ ಕಳೆಯುವವರು ಕೆಲವೊಮ್ಮೆ ಬೆನ್ನು ನೋವಿನ ತೊಂದರೆ ಅನುಭವಿಸಬಹುದು.

ಬೆನ್ನು ನೋವನ್ನು ಶಮನಗೊಳಿಸಲು ಫಿಜಿಯೋಥೆರಪಿ ಸೇರಿದಂತೆ ಹಲವು ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಬೆನ್ನು ನೋವು ಬಂದ ಬಳಿಕ ಚಿಕಿತ್ಸೆ ಪಡೆಯುವ ಬದಲು ಬಾರದಂತೆ ನೋಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಆದ್ದರಿಂದ ಬೆನ್ನು ನೋವು ತಡೆಗೆ ಅನುಕೂಲವಾಗುವಂತೆ ಕೆಲವು ವ್ಯಾಯಾಮಗಳನ್ನು ಮಾಡುವುದು ಒಳ್ಳೆಯ ಅಭ್ಯಾಸವಾಗಿದೆ.

ಬೆನ್ನಿನ ಸ್ನಾಯು ದುರ್ಬಲವಾದರೆ ಬೆನ್ನು ನೋವು ಕಾಣಿಸುತ್ತದೆ. ಹೀಗಾಗಿ ಸ್ನಾಯುಗಳನ್ನು ಬಲಪಡಿಸುವ ಕೆಲಸವನ್ನು ವ್ಯಾಯಾಮದ ಮೂಲಕ ಮಾಡುವುದು ಅತಿ ಮುಖ್ಯವಾಗಿದೆ. ವೈದ್ಯರು ಶಿಫಾರಸ್ಸು ಮಾಡಿದ ಮೂರು ವ್ಯಾಯಾಮಗಳು ಮತ್ತು ಒಂದಷ್ಟು ಸಲಹೆಗಳು ಬಹುಶಃ ಬೆನ್ನು ನೋವಿನಿಂದ ಬಳಲುವವರಿಗೆ ಅಥವಾ ಬೆನ್ನು ನೋವು ಬಾರದಂತೆ ತಡೆಯುವವರಿಗೆ ಅನುಕೂಲವಾಗಲಿದೆ.

ವ್ಯಾಯಾಮ ಮಾಡುವವರು ಕಾಲುಗಳನ್ನು ನೇರವಾಗಿಸಿ ಅಂಗಾತ ಮಲಗಬೇಕು. ಕೈಗಳನ್ನು ಪಕ್ಕದಲ್ಲಿಟ್ಟುಕೊಳ್ಳಬೇಕು. ಆ ನಂತರ ಮಂಡಿಯನ್ನು ಮೇಲೆತ್ತುತ್ತಾ ನಿಧಾನವಾಗಿ ಎದೆಯ ಕಡೆಗೆ ತರಬೇಕು. ಹೀಗೆ ಹತ್ತು ಬಾರಿ ಮಾಡಬೇಕು.

ಎರಡನೆಯದರಲ್ಲಿ ಮಂಡಿಗಳನ್ನು ಮಡಚಿ, ಪಾದಗಳನ್ನು ನೆಲಕ್ಕೂರಬೇಕು ಆ ನಂತರ ಮಡಚಿದ ಟವೆಲ್ ಮೇಲೆ ತಲೆಯನ್ನಿಟ್ಟು ಅಂಗಾತವಾಗಿ ಮಲಗಿ ನಿಧಾನವಾಗಿ ಕೆಳಭಾಗವನ್ನು ಮೇಲಕ್ಕೆತ್ತಿ ಇಳಿಸಬೇಕು. ಹೀಗೆ ಕನಿಷ್ಟ ಹತ್ತು ಬಾರಿ ಮಾಡಬೇಕು.

ಮೂರನೆಯ ವ್ಯಾಯಾಮದಲ್ಲಿ ಕೈಗಳು ಪಕ್ಕಗಳಲ್ಲಿ ಸಡಿಲವಾಗಿ ನೇತಾಡುವಂತೆ ನೇರವಾಗಿ ನಿಂತುಕೊಳ್ಳಬೇಕು. ಆ ನಂತರ ಭುಜಗಳನ್ನು ಹಿಂದಕ್ಕೆ ಹಿಡಿಯಬೇಕು. ಬಳಿಕ ಸೊಂಟದಿಂದ ನಿಧಾನವಾಗಿ ಮುಂದೆ ಬಾಗುತ್ತಾ ತಲೆ ಮತ್ತು ಕೈಗಳು ಮುಂದಕ್ಕೆ ಬೀಳುವಂತೆ ಮಾಡುತ್ತಾ ಕಾಲುಬೆರಳುಗಳನ್ನು ಸ್ಪರ್ಶಿಸಬೇಕು. ಹೀಗೆ ಮಾಡುವಾಗ ಮಂಡಿಗಳು ಬಾಗದಂತೆ ನೋಡಿಕೊಳ್ಳಬೇಕು. ಇದನ್ನು ಕೂಡ ಹತ್ತು ಬಾರಿ ಮಾಡಬೇಕು.

ಈ ವ್ಯಾಯಾಮಗಳನ್ನು ಒಮ್ಮೆಗೆ ಮಾಡಲು ಕಷ್ಟವಾಗುತ್ತದೆ. ಆದ್ದರಿಂದ ಪ್ರತಿದಿನವೂ ಒಂದೊಂದೇ ಹೆಚ್ಚಿಸುತ್ತಾ ಹತ್ತಕ್ಕೆ ಬಂದು ನಿಲ್ಲಿಸಬಹುದು. ಬಳಿಕ ಪ್ರತಿದಿನವೂ ಒಂದೊಂದನ್ನು ಹತ್ತತ್ತು ಬಾರಿ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ.

ಇವತ್ತಿನ ಪರಿಸ್ಥಿತಿಯಲ್ಲಿ ಹೆಚ್ಚಿನವರು ಹಗುರವಾದ ಕೆಲಸಗಳನ್ನೇ ಮಾಡುತ್ತಿರುತ್ತಾರೆ. ಅಂತಹವರು ಕೆಲವೊಮ್ಮೆ ಅನಿವಾರ್ಯ ಪರಿಸ್ಥಿತಿಯಲ್ಲಿ ಕಠಿಣ ಕೆಲಸಗಳನ್ನು ಮಾಡಿದಾಗ ಹಲವು ತೊಂದರೆಗಳನ್ನು ಎದುರಿಸುವುದು ಸಾಮಾನ್ಯ. ಆದ್ದರಿಂದ ಪ್ರತಿದಿನವೂ ಒಂದಲ್ಲ ಒಂದು ರೀತಿಯ ವ್ಯಾಯಾಮಗಳನ್ನು ಮಾಡುವ ಮೂಲಕ ದೇಹವನ್ನು ದಂಡಿಸಬೇಕು. ಒಂದಷ್ಟು ದೂರ ವಾಕಿಂಗ್ ಮಾಡುವುದು, ಯೋಗ, ವ್ಯಾಯಾಮಗಳನ್ನು ರೂಢಿಸಿಕೊಳ್ಳಬೇಕು ಇಲ್ಲದೆ ಹೋದರೆ ಕಾಯಿಲೆಗಳು ನಮ್ಮನ್ನು ಒಂದಲ್ಲ ಒಂದು ರೀತಿಯಲ್ಲಿ ಅಟ್ಟಿಸಿಕೊಂಡು ಬರುವುದರಲ್ಲಿ ಸಂದೇಹವಿಲ್ಲ.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »