TOP STORIES:

ಬೈದರ್ಕಳ ಪಾತ್ರಿ ಬಚ್ಚ ಪೂಜಾರಿ ಯವರು ನಿಧನ


ಜೀವನದ ಬಹುಪಾಲು ಸಮಯ ಇರ್ವತ್ತೂರು ಮಾಗಣೆ ಮುಟ್ಟಿಕಲ್ಲು ತಾನ ಗರಡಿ ಕುಕ್ಕಜೆ ಇಲ್ಲಿ ಬೈದರ್ಕಳ ಪಾತ್ರಿಯಾಗಿ ಕೋಟಿ ಚೆನ್ನಯ್ಯರ ಸೇವೆಯನ್ನು ಮಾಡುತ್ತಿದ್ದ , ಇತಿಹಾಸ ಪುರುಷರಾದ ಕೋಟಿ ಚೆನ್ನಯ್ಯರ ಬಗ್ಗೆ ಅಪಾರವಾದ ಭಕ್ತಿ, ಜ್ಞಾನ ಹಾಗೂ ನಂಬಿಕೆಯನ್ನು ಹೊಂದಿದ್ದ ನಮ್ಮೂರಿನ ಹೆಮ್ಮೆಯ ಶ್ರೀ ಬಚ್ಚ ಪೂಜಾರಿ ಯವರು ನಿನ್ನೆ ಅಲ್ಪ ಕಾಲದ ಅನಾರೋಗ್ಯದ ನಿಮಿತ್ತ ಧೈವಾಧೀನರಾಧರು ಎಂಬುದು ದುಃಖದ ವಿಷಯ.

*ತುಳುನಾಡಿನ ಕಲೆ, ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಇಂತಹ ಒಬ್ಬ ಹಿರಿಯ, ಅನುಭವಿ, ಮಾರ್ಗದರ್ಶಕರನ್ನು ಕಳೆದು ಕೊಂಡಿರುವುದು ಮುಂದಿನ ಪೀಳಿಗೆಗೆ ಅತಿ ದೊಡ್ಡ ನಷ್ಟ ಎಂದರೂ ತಪ್ಪಾಗಲಾರದು. ಇವರು ಪಕ್ಕದ ಗ್ರಾಮದ ನೇರಳೆ ಅಡಿಸ್ಥಾನ ಗರಡಿ, 41ನೇ ಶೀರೂರು ಹಾಗೂ ಕರಾವಳಿಯ ಹಲವಾರು ಗರಡಿಗಳಲ್ಲಿ ಸರಿಸುಮಾರು ಐವತ್ತು ವರುಷಗಳ ಕಾಲ ಸೇವೆ ಸಲ್ಲಿಸಿ,ಅದೆಷ್ಟೋ ಕಿರಿಯ ಪಾತ್ರಿಗಳಿಗೆ ಮಾರ್ಗದರ್ಶನ ಮಾಡಿ, ಬೆನ್ನು ತಟ್ಟುತ್ತಿದ್ದರು.

ಇವರನ್ನು ಇರ್ವತ್ತೂರು ಮುಟ್ಟಿಕಲ್ಲು ತಾನ ಗರಡಿಯಲ್ಲಿ ವಿಶೇಷ ಸಾರ್ವಜನಿಕ ಸನ್ಮಾನ ಹಾಗೂ ಉಡುಪಿ ಮಂಗಳೂರು ಜಿಲ್ಲೆಗಳಲ್ಲಿ ವಿಶೇಷವಾಗಿ ಸನ್ಮಾನಿಸಿ, ಜಾನಪದ ಅಕಾಡಮಿಯಲ್ಲೂ ಗೌರವಿಸಲಾಗಿತ್ತು ಎಂಬುದು ಅವಿಸ್ಮರಣೀಯ.

ಪೂಜ್ಯರ ಆತ್ಮಕ್ಕೆ ಅವರು ಆರಾಧಿಸಿಕೊಂಡು ಬಂದಿದ್ದ ದೈವ ದೇವರುಗಳು ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸುವ, ಓಂ ಶಾಂತಿ


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »