TOP STORIES:

ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಯಾಕೆ ಸರ್ಕಾರಕ್ಕೆ ತಾತ್ಸಾರ ಭಾವನೆ? ಪದ್ಮರಾಜ್ ಆರ್.


ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟುತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ.  ಇದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಬ್ರಹ್ಮಶ್ರಿನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗುಗುರುಗಳ ಅನುಯಾಯಿಗಳ ಬೇಡಿಕೆಗೆ ಸ್ಪಂದಿಸಿಲ್ಲ. ಸರ್ಕಾರದಲ್ಲಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಬಗ್ಗೆಚಕಾರ ಎತ್ತಿಲ್ಲ. ಕರ್ನಾಟಕದಲ್ಲಿ ಬಿಲ್ಲವ, ಆರ್ಯ ಈಡಿಗ ಸೇರಿದಂತೆ 26 ಪಂಗಡಗಳ ಹಾಗು ಬ್ರಹ್ಮಶ್ರೀ ನಾರಾಯಣಗುರುಗಳಕೋಟ್ಯಂತರ ಮಂದಿ ಅನುಯಾಯಿಗಳ ಬಗ್ಗೆ ಸರ್ಕಾರಕ್ಕೆ ಯಾಕೆ ತಾತ್ಸಾರ ಭಾವನೆ?

ನಾರಾಯಣಗುರುಗಳ ಕುರಿತ ಪಠ್ಯವನ್ನು 10ನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸರ್ಕಾರ ಹಾಗು ಪಕ್ಷದಮುಖಂಡರು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಕನ್ನಡ ಭಾಷಾ ಪಠ್ಯವನ್ನು ಶೇ.30ರಿಂದ 50ರಷ್ಟು ವಿದ್ಯಾರ್ಥಿಗಳು ಮಾತ್ರಓದುತ್ತಾರೆ. ಉಳಿದ ಭಾಷಾ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಗುರುಗಳ ಕುರಿತ ಮಾಹಿತಿಯನ್ನು ಎಲ್ಲಿ ಪಡೆಯಬೇಕುಎಂಬುದರ ಬಗ್ಗೆ ಸರ್ಕಾರ ಚಿಂತಿಸಿದೆಯೆ? ಯಾಕೆ ಸ್ವಾಮಿ ಬಿಲ್ಲವ, ಈಡಿಗ ಹಾಗು ಸಮಸ್ತ ನಾರಾಯಣಗುರುಗಳಅನುಯಾಯಿಗಳನ್ನು ಮತ್ತೆ ಮತ್ತೆ ಕಡೆಗಣಿಸುತ್ತಿದ್ದೀರಿ?

ವಿರೋಧ ಪಕ್ಷದ ಶಾಸಕರು, ಮುಖಂಡರು ಕೇವಲ ಪತ್ರಿಕಾ ಹೇಳಿಕೆ ನೀಡಿ ಸರ್ಕಾರದಿಂದ ಗುರುಗಳ ಅನುಯಾಯಿಗಳಿಗೆಆಗುತ್ತಿರುವಅನ್ಯಾಯದ ಬಗ್ಗೆ ಸುಮ್ಮನೆ ಕುಳಿತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನಅಥವಾ ಎಲ್ಲ ಭಾಷಾ ಮಾಧ್ಯಮಕ್ಕೆ ಸೇರ್ಪಡೆಗೊಳಿಸುವ ಮೂಲಕ ಎಲ್ಲ ವಿದ್ಯಾರ್ಥಿಗಳು ಓದುವಂತೆ ಮಾಡುವ ನಿರ್ಧಾರಕೈಗೊಳ್ಳಲಿ. ಇಲ್ಲವಾದಲ್ಲಿ ತೀವ್ರ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ.

ಪದ್ಮರಾಜ್ ಆರ್.

ಕೋಶಾಧಿಕಾರಿ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »