TOP STORIES:

FOLLOW US

ಭಟ್ಕಳ : ನಾಮಧಾರಿಯ ಹೆಮ್ಮೆಯ ಕುವರಿ ಉತ್ತರಕನ್ನಡ ಜಿಲ್ಲೆಯ ಸುಪುತ್ರಿಯಾದ ಶ್ರೀಮತಿ ರೂಪ ಶಿವಪ್ಪ ನಾಯ್ಕ


ಭಟ್ಕಳ : ನಾಮಧಾರಿಯ ಹೆಮ್ಮೆಯ ಕುವರಿ ಉತ್ತರಕನ್ನಡ ಜಿಲ್ಲೆಯ ಸುಪುತ್ರಿಯಾದ ಶ್ರೀಮತಿ ರೂಪ ಶಿವಪ್ಪ ನಾಯ್ಕ

ಇವರು ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಪ್ರಾಸ್ತಾವಿಕ
ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಮೂಲತಹ ಅಂಕೋಲದ ಪುರಲಕ್ಕಿ ಬೇಣದ ನಿವಾಸಿಯಾದ ಇವರು ಸದ್ಯ ಗದಗ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದು ಕರ್ನಾಟಕದಿಂದ ಆಯ್ಕೆಯಾದ ಪ್ರಥಮ ಜಿಲ್ಲಾ ನ್ಯಾಯಾಧೀಶರಾಗಿದ್ದಾರೆ.
ಮಾನವ ಹಕ್ಕು ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದ ಇವರು ರಾಷ್ಟ್ರಮಟ್ಟದದಲ್ಲಿ 40 ಐ.ಎ.ಎಸ್ ,ಐಪಿ.ಎಸ್ ಅಭ್ಯರ್ಥಿಗಳ ಎದುರು ಪೈಪೋಟಿ ನೀಡಿ ಸ್ವರ್ಧಾತ್ಮಕ ಪರೀಕ್ಷೆ ಯಲ್ಲಿ ಮೊದಲ ಶ್ರೇಣೆಯಲ್ಲಿ ಉತ್ತೀರ್ಣಗೊಂಡು ರಾಜ್ಯದಲ್ಲಿಯೇ ಯಾರೂ ಮಾಡದ ಸಾಧನೆ ಮಾಡಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಪ್ರಾಸ್ತವಿಕ ಅಧಿಕಾರಿಗಾಗಿ ಅಯ್ಕೆಯಾಗುವುದರ ಮೂಲಕ ನಮ್ಮ ಜಿಲ್ಲೆಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿರುತ್ತಾರೆ.
ಇವರು ಅಂಕೋಲಾದ ದಿವಂಗತ ಶಿವಪ್ಪ ನಾರಯಣ ಹಾಗೂ ದಿ. ರಮಾಬಾಯಿ ದಂಪತಿಗಳ ಪುತ್ರಿಯಾಗಿದ್ದು ಇವರ ಪ್ರಾಥಮಿಕ ಶಿಕ್ಷಣ ಕಾರವಾರದ ಹಿಂದೂ ಹೈಸ್ಕೂಲಿನಲ್ಲಿ ಪಡೆದು ಪ್ರೌಢ ಶಿಕ್ಷಣವನ್ನು ಅಂಕೋಲಾದ ವಿ.ಕೆ.ಗಲ್ರ್ಸ್ ಹೈಸ್ಕೂಲಿನಲ್ಲಿ ಹಾಗೂ ಪದವಿಯನ್ನು ಅಂಕೋಲಾದ ಬಿ.ಸಿ. ಕಾಲೇಜಿನಲ್ಲಿ ಪಡೆದಿರುತ್ತಾರೆ. ಸಿರಸಿಯ ಎಂ.ಇ.ಎಸ್. ಕಾಲೇಜಿನಲ್ಲಿ ಎಲ್.ಎಲ್.ಬಿ. ಪದವಿಯನ್ನು ಪಡೆದು ಸಿರಸಿ ನ್ಯಾಯಾಲಯದಲ್ಲಿ ತಮ್ಮ ವಕೀಲಿ ವೃತ್ತಿಯನ್ನು ಆರಂಬಿಸಿ ನಂತರ ಧಾರವಾಡದಲ್ಲಿ ವಕೀಲ ವೃತ್ತಿಯನ್ನು ಮುಂದುವರಿಸಿ
ತನ್ನ ಸಂಸಾರಿಕ ಜೀವನದಲ್ಲಿ ಸತತ ಪರಿಶ್ರಮದಿಂದ ಸುಮಾರು 25 ವರ್ಷಗಳ ಹಿಂದೆ ನ್ಯಾಯಾದೀಶೆಯಾಗಿ ಆಯ್ಕೆಯಾಗಿದ್ದು ಹೆಮ್ಮೆಯ ಸಂಗತಿ. ಇವರ ಪತಿ ಜಿ.ಜಿ.ನಾಯ್ಕ ಮೂಲತಹ ಕುಮಟಾದ ಹೆಗಡೆಯವರಾಗಿದ್ದು ಸಿರಸಿಯ ಲ್ಲಿ ಸಹಾಯಕ ಸಂರಕ್ಷಣಾಧಿಕಾರಿಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಪುತ್ರಿಯರಾದ ಎಚ್.ಜೆ.ಶಿಲ್ಪಾ ಸಿವಿಲ್ ನ್ಯಾಯಾದೀಶೆಯಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು
ಇನೋರ್ವ ಪುತ್ರಿ ಎಚ್.ಜಿ. ಶ್ರೇಯಾ ಬೆಂಗಳೂರಿನಲ್ಲಿ ವಕೀಲ ವೃತ್ತಿ ನಡೆಸುತ್ತಿದ್ದಾರೆ. ಇವರ ಅಯ್ಕೆಗೆ ಜಿಲ್ಲೆಯ ಹಾಗೂ ರಾಜ್ಯದ ನಾಮಧಾರಿ ಬಂದುಗಳು , ಹಲವು ಸಂಘ ಸಂಸ್ಥೆಗಳು ಹಾಗೂ ಬಂಧು ಬಳಗದವರು ಹರ್ಷ ವ್ಯಕ್ತಪಡಿಸಿದ್ದಾರೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »