TOP STORIES:

ಭಾರತ ಭೂಪಟದಲ್ಲಿ ಪಾಕಿಸ್ತಾನ, ಚೀನಾ ಕಾಣಿಸುವುದಿಲ್ಲ, ಆದರೆ ಶ್ರೀಲಂಕಾ ಏಕೆ ಕಾಣಿಸುತ್ತದೆ?


ನವದೆಹಲಿ: ಭಾರತದ ಭೂಪಟ ನೋಡಿದಾಗ ಶ್ರೀಲಂಕಾ ಅದರಲ್ಲಿ ಕಾಣಿಸುತ್ತದೆ. ಆದರೆ, ಯಾವುದೇ ನೆರೆ ಹೊರೆಯ ದೇಶಗಳು ಕಾಣಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಶ್ರೀಲಂಕಾದೊಂದಿಗೆ ನಾವು ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದುಕೊಂಡರೆ ತಪ್ಪಾಗುತ್ತದೆ.

ಇದರ ಹಿಂದೆ ಪ್ರಮುಖ ಕಾರಣವಿದೆ.

ಭಾರತ ಭೂಪಟದಲ್ಲಿ ಶ್ರೀಲಂಕಾ ಕಾಣಿಸಿಕೊಂಡಿರುವುದರ ಹಿಂದೆ ಕಡಲ ಕಾನೂನು ಕಾರಣವಾಗಿದೆ. ಇದನ್ನು ಸಾಗರ ಕಾನೂನು ಎಂದು ಕರೆಯಲಾಗುತ್ತದೆ. ವಿಶ್ವಸಂಸ್ಥೆ ಸ್ಥಾಪನೆ ನಂತರ ಈ ಕಾನೂನು ಅಸ್ತಿತ್ವಕ್ಕೆ ಬಂದಿದೆ. ಈ ಕಾಯ್ದೆ ಜಾರಿಗೆ ತರಲು ಸಾಗರ ಕಾನೂನಿನ ಮೇಲಿನ ವಿಶ್ವಸಂಸ್ಥೆ ಸಮಾವೇಶವನ್ನು (UNCLOC-1) ಮೊದಲ ಬಾರಿಗೆ 1956ರಲ್ಲಿ ನಡೆಸಲಾಯಿತು. 1958 ರಿಂದ ಈ ಕಾನೂನು ಜಾರಿಯಲ್ಲಿದೆ.

UNCLOC-1ರಲ್ಲಿ ಕಡಲಿಗೆ ಸಂಬಂಧಿಸಿದ ಗಡಿಗಳು, ಒಪ್ಪಂದಗಳಿಗೆ ಸಂಬಂಧಿಸಿದಂತೆ ಒಮ್ಮತಕ್ಕೆ ಬರಲಾಗಿದೆ. ನಂತರ 1982 ರವರೆಗೆ ಮೂರು ಸಮ್ಮೇಳನಗಳು ನಡೆದಿವೆ. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮುದ್ರಕ್ಕೆ ಸಂಬಂಧಿಸಿದ ಕಾಯ್ದೆಗಳನ್ನು ಗುರುತಿಸುವ ಪ್ರಕ್ರಿಯೆ ನಡೆದಿದೆ.

ಸಾಗರ ಕಾನೂನು ಎಂದರೆ ಏನು?

ಈ ಕಾಯ್ದೆಯನ್ನು ಜಾರಿಗೆ ತಂದಾಗ, ಭಾರತದ ನಕ್ಷೆಯಲ್ಲಿ ಬೇಸ್ ಲೈನ್ ನಿಂದ 200 ನಾಟಿಕಲ್ ಮೈಲಿ ದೂರದಲ್ಲಿರುವ ಪ್ರದೇಶವನ್ನು ಅಂದರೆ, ಆ ದೇಶದ ಬೇಸ್ ಲೈನ್ ತೋರಿಸುವುದು ಕಡ್ಡಾಯವೆಂದು ನಿರ್ಧರಿಸಲಾಗಿದೆ. ಅಂದರೆ ಒಂದು ದೇಶ ಕರಾವಳಿಯಲ್ಲಿದ್ದರೆ ಅಥವಾ ಅದರ ಭಾಗ ಸಮುದ್ರಕ್ಕೆ ಸಂಪರ್ಕ ಹೊಂದಿದ್ದರೆ, ಆ ದೇಶದ ಗಡಿ ಸುತ್ತಲಿನ ಪ್ರದೇಶವನ್ನು ಸಹ ಆ ದೇಶದ ನಕ್ಷೆಯಲ್ಲಿ ತೋರಿಸಲಾಗುತ್ತದೆ. ಭಾರತದ ಭೂಪಟದಲ್ಲಿ ಶ್ರೀಲಂಕಾವನ್ನು ತೋರಿಸಲು ಇದೇ ಕಾರಣ. ಏಕೆಂದರೆ ಶ್ರೀಲಂಕಾ ಭಾರತದಿಂದ 200 ನಾಟಿಕಲ್ ಮೈಲುಗಳ ಅಂತರದಲ್ಲಿದೆ. ಭಾರತದ ಗಡಿಯ 200 ನಾಟಿಕಲ್ ಮೈಲುಗಳೊಳಗಿನ ದೂರದಲ್ಲಿದೆ. ಅದಕ್ಕಾಗಿಯೇ ಶ್ರೀಲಂಕಾ ಭಾರತದ ಭೂಪಟದಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »