TOP STORIES:

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ…


ಮಂಗಳೂರು : . 20 : ಭಾರತ್  ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ್ ಬೋಳಾರ್ ಅವರು ತುಳು ನಾಟಕ. ಚಲನಚಿತ್ರ ಮತ್ತು ಯಕ್ಷಗಾನ ರಂಗದ  ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ, ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾಪಾತ್ರದಲ್ಲಿಯೂ ಸೈ ಎನಿಸಿಕೊಂಡವರು.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಳಾರ್ ಎಂಬಲ್ಲಿ ತಂದೆ  ಕೃಷ್ಣಪ್ಪ ಮತ್ತು ತಾಯಿ ಸುಂದರಿಯವರ  ಮಗನಾಗಿ ಜನಿಸಿದಇವರು ತುಳು ನಾಟಕ ಕಲಾವಿದನಾಗಿ ಸಾಂಸ್ಕೃತಿಕ ರಂಗ ಪ್ರವೇಶಿಸಿದರು. ಹಾಗೂ ತುಳು ಚಲನಚಿತ್ರ ರಂಗದ ಪ್ರಮುಖಕಲಾವಿದರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಕಾಮಿಕ್ ಟೈಮಿಂಗ್ ಮತ್ತು ಪಂಚಿಂಗ್ ಡೈಲಾಗ್ ಗಳಿಂದ ಅವರು ಕರಾವಳಿನಾಟಕ ಉದ್ಯಮದಲ್ಲಿ ಮತ್ತು ತುಳು ಚಿತ್ರರಂಗದಲ್ಲಿ ತಮ್ಮದೇ ಆದ ಸಹಿಯನ್ನು ರಚಿಸಿಕೊಂಡಿರುವ ಇವರಿಗೆ ಕನ್ನಡ ರಾಜ್ಯೋತ್ಸವಪ್ರಶಸ್ತಿಯ ಜೊತೆಗೆಸಾಧನೆ ಶಾರದಾರ್ಮತ್ತುತುಳುವ ಮಾಣಿಕ್ಯಎಂಬ ಬಿರುದು ಗಳಿಸಿದ್ದಾರೆ ಅದಲ್ಲದೆ ವಿವಿಧ ಸಂಘಸಂಸ್ಥೆಗಳ ವತಿಯಿಂದ 00ಕ್ಕೂ ಹೆಚ್ಚು ಗೌರವ ಸಂದಿವೆ.

ದೈಜಿವಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ವಾಲ್ಡರ್ ನಂದಳಿಕೆ ಅವರೊಂದಿಗೆ ಜೋಡಿಯಾಗಿ, ಸಾಮಾನ್ಯ ಜನರನೋವಗಳನ್ನು ಅರಿತು ಅವರಂತೆ ಪಾತ್ರಾಭಿನಯಿಸಿ ದೈಜಿವಲ್ಡ್ ಟಿವಿ ಶೋಪ್ರೈವೇಟ್ ಚಾಲೆಂಜ್ಎಂಬ ಹೊಸ ಪ್ರಯೋಗದಮುಖಾಂತರ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು. ಕೊರೋನ ಲಾಕ್ ಡೌನ್  ಸಂದರ್ಭದಲ್ಲಿ ಇದು ಹೆಚ್ಚು ಪ್ರಯೋಜನಕಾರಿಯಾದಬೆಳವಣಿಗೆಯಾಗಿ ಗುರುತಿಸಲಾಗಿದ್ದು ಸಮಾಜದ ಕಣ್ಣು ತೆರೆಯಿತು.

ಅವರ  ಸಾಮಾಜಿಕ ಬದ್ಧತೆಯನ್ನು ಪರಿಗಣಿಸಿ ಭಾರತ್ ಸೋಶಿಯಲ್ ಅಂಡ್ ವೆಲ್ಫೇರ್ ಟ್ರಸ್ಟ್ ಅವರನ್ನು ವರ್ಷದ ವ್ಯಕ್ತಿಯಾಗಿಆಯ್ಕೆ ಮಾಡಿದೆ. ಭಾರತ್ ಸೋಶಿಯಲ್ ಅಂಡ್ ವೆಲ್ಫೇರ್ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಮೂರು ಕೇಂದ್ರೀಯವಿಷಯಗಳಲ್ಲಿ ಕಳೆದ ಎಂಟು ವರ್ಷಗಳಿಂದ ಕರ್ನಾಟಕದಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಮಾಡುತ್ತಾ ಪ್ರತಿ ವರ್ಷನೂರೈವತ್ತು ಅರ್ಹ ಬಡಾ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿದೆ. ಪ್ರಸಕ್ತ ವರ್ಷದ ವಿದ್ಯಾರ್ಥಿ ವೇತನ ವಿತರಣಾಕಾರ್ಯಕ್ರಮ ಜನವರಿ 26-2023 ರಂದು ಸಂಜೆ 3.00 ಗಂಟೆಗೆ ಸರಿಯಾಗಿ ಸಹೋದಯ ಸಭಾಂಗಣ ಬಲ್ಮಟ್ಟ ಮಂಗಳೂರು ಇಲ್ಲಿನಡೆಯಲಿದೆ. ಕಾರ್ಯಕ್ರಮದಲ್ಲಿ ಅರವಿಂದ್ ಬೋಳಾರ್ ಅವರಿಗೆವರ್ಷದ ವ್ಯಕ್ತಿಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದುಟ್ರಸ್ಟ್ ನ್ ಪ್ರಧಾನ ಕಾರ್ಯದರ್ಶಿ ಆಕಿಫ್ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »