TOP STORIES:

ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ನಿರಂತರ 18 ಗಂಟೆಗಳ ಪ್ರಯತ್ನದಲ್ಲಿ 900 ಕೆಜಿ ಧಾನ್ಯಗಳಿಂದ ಬೃಹತ್ ತಿರಂಗ ಸೃಷ್ಟಿ


ಮಂಗಳೂರು: ಬಾರಿ ನಾವು ದೇಶ ಸ್ವಾತಂತ್ರ್ಯ ಅಮೃತೋತ್ಸವದ ಸಡಗರದಲ್ಲಿದೆ. ಗಲ್ಲಿಗಲ್ಲಿಗಳಲ್ಲಿ ತಿರಂಗ ರಾರಾಜಿಸುತ್ತಿದೆ. ಶ್ರೀಕ್ಷೇತ್ರ ಕುದ್ರೋಳಿಯ ರಾಜಗೋಪುರದ ಮುಂಭಾಗದ ನೆಲದಲ್ಲಿ ಮೂಡಿರುವ 900 ಕೆಜಿ ಧಾನ್ಯಗಳ ಬೃಹತ್ ತಿರಂಗ ಭಕ್ತರಗಮನಸೆಳೆಯಿತು. ಬೃಹತ್ ತಿರಂಗ 38 ಫೀಟ್ ಅಗಲವನ್ನು ಹೊಂದಿದೆ. ತಲಾ 300 ಕೆಜಿ ಮಸ್ಸೂರು ದಾಲ್, ಸಬ್ಬಕ್ಕಿ, ಹೆಸರು ಕಾಳುಗಳನ್ನುಬಳಸಲಾಗಿದೆ. ಫೋಮ್ ನಲ್ಲಿ ರಚಿಸಿರುವ ಅಶೋಕ ಚಕ್ರ 8ಫೀಟ್ ಅಗಲವಿದೆ. ಅಲ್ಲದೆ ತಿರಂಗದ ಅಲಂಕಾರಕ್ಕೆ 54 ಕಲಶ, 138 ಬಾಳೆ ಎಲೆಯಲ್ಲಿ ಅಕ್ಕಿ ಎಳೆಯಡಿಕೆ, ಚೆಂಡು ಹೂಗಳನ್ನು ಬಳಸಲಾಗಿದೆ. ಜೊತೆಗೆ ಕ್ಯಾರೆಟ್, ಮೂಲಂಗಿ, ಬೆಂಡೆಯಿಂದ ಮಾಡಿರುವ75 ಅಕ್ಷರದಲ್ಲೂ ತಿರಂಗದ ಕಲ್ಪನೆಯನ್ನು ಮೂಡಿಸಲಾಗಿದೆ.ಫೋಟೋ ಜರ್ನಲಿಸ್ಟ್ ಸತೀಶ್ ಇರಾ ಅವರ ಪರಿಕಲ್ಪನೆ ಹಾಗೂ ಖ್ಯಾತ ಫೋಟೋ ಗ್ರಾಫರ್, ಕಲಾವಿದ ಪುನೀಕ್ ಶೆಟ್ಟಿಯವರಕೈಚಳದಲ್ಲಿ ಬೃಹತ್ ತಿರಂಗವು ಅದ್ಭುತವಾಗಿ ಮೂಡಿ ಬಂದಿದೆ. ಶ್ರೀಕ್ಷೇತ್ರದ ಗುರು ಬೆಳದಿಂಗಳು ಹಾಗೂ ಗೋಕರ್ಣನಾಥಸೇವಾದಳ ತಂಡ ಸಹಕರಿಸಿದೆ. .13 ಮಧ್ಯಾಹ್ನದಿಂದಲೇ ತಿರಂಗ ರಚನೆಗೆ ಸಾಮಾಗ್ರಿಗಳನ್ನು ಖರೀದಿಸಲಾಗಿದೆ. ರಾತ್ರಿ 9ರಿಂದತಿರಂಗದ ಸ್ಕೆಚ್ ತಯಾರಿಸಲಾಗಿದ್ದು, .14 ಬೆಳಗ್ಗೆ 11 ವೇಳೆಗೆ ತಿರಂಗ ಸಂಪೂರ್ಣಗೊಂಡಿದೆ. ಇಂದು ಬೆಳಗ್ಗೆ ಸ್ವಲ್ಪ ಮಳೆಬಂದರೂ ಅದೃಷ್ಟವಶಾತ್ ತಿರಂಗ ಹಾಳಾಗದಿರುವುದು ವಿಶೇಷವೆನಿಸಿದೆ. ಕೇಂದ್ರದ ಮಾಜಿ ಸಚಿವ, ಶ್ರೀಕ್ಷೇತ್ರ ಕುದ್ರೋಳಿಯಅಭಿವೃದ್ಧಿ ರೂವಾರಿ ಜನಾರ್ದನ ಪೂಜಾರಿಯವರು ಬೃಹತ್ ತಿರಂಗವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related Posts

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »