TOP STORIES:

ಮನ್ಸೂನ್​ನಲ್ಲಿ ಕಾಡುತ್ತಿದ್ಯಾ ಕೀಲು ನೋವು; ಇಲ್ಲಿದೆ ಇದಕ್ಕೆ ಪರಿಹಾರ


ಬೆಂಗಳೂರು: ಮಳೆಗಾಲದಲ್ಲಿ ಕೆಲವು ಮಂದಿಗೆ ಕೀಲು ನೋವಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಅವಧಿಯಲ್ಲಿ ನೋವು ಉಲ್ಬಣಗೊಳ್ಳಲು ನಿಖರವಾದ ಕಾರಣ ತಿಳಿದಿಲ್ಲ.

ಸಂಶೋಧನೆಗಳು ಕೂಡ ಈ ಬಗ್ಗೆ ಹೆಚ್ಚು ಸ್ಪಷ್ಟವಾಗಿ ತಿಳಿಸಿಲ್ಲ. ಮಳೆಗಾಲದಲ್ಲಿ ಈ ನೋವು ಹೆಚ್ಚು ಎಂದು ಕೆಲವು ಅಧ್ಯಯನಗಳು ವಾದಿಸಿದರೆ, ಮತ್ತೆ ಕೆಲವು ಅಧ್ಯಯನಗಳು ಈ ಆರೋಪವನ್ನು ತಳ್ಳಿಹಾಕುತ್ತದೆ. ಆದರೆ, ತಜ್ಞರ ಪ್ರಕಾರ, ಪರಿಸರದಲ್ಲಿನ ಬದಲಾವಣೆಗಳು ಕೀಲು ನೋವಿಗೆ ಪ್ರಮುಖ ಕಾರಣವಾಗಿದೆ.

ಮಳೆಗಾಲದಲ್ಲಿ ಪರಿಸರದಲ್ಲಿನ ವಾಯುವಿನ ಒತ್ತಡ ಕಡಿಮೆಯಾಗುತ್ತದೆ. ದೇಹದಲ್ಲಿನ ಗಾಳಿಯ ಒತ್ತಡವೂ ಈ ಋತುಮಾನದಲ್ಲಿ ಕಡಿಮೆಯಾಗುತ್ತದೆ. ಫಲಿತಾಂಶವಾಗಿ ಕೀಲುಗಳ ಸುತ್ತಲು ಇರುವ ಸ್ನಾಯು, ಅಸ್ಥಿರಜ್ಜು ಮತ್ತು ಇನ್ನಿತರೆ ಟಿಶ್ಯೂಗಳ ಮೇಲೆ ಒತ್ತಡ ಬೀಳುತ್ತದೆ. ಇದು ಕೀಲು ನೋವಿಗೆ ಕಾರಣವಾಗುತ್ತದೆ. ಸಂಧಿವಾತದೊಂದಿಗೆ ಬಳಲುತ್ತಿರುವ ಮಂದಿ ಅಥವಾ ಇತರೆ ದೀರ್ಘ ನೋವಿನ ಅನುಭವ ಹೊಂದಿರುವವರು ಇದರಿಂದ ಕಿರಿಕಿರಿ ಅನುಭವಿಸುತ್ತಾರೆ. ವಾತಾವರಣ ಸರಿ ಹೋದಂತೆ ಗಾಳಿಯ ಒತ್ತಡವೂ ಹೊಂದಾಣಿಕೆಯಾಗುತ್ತದೆ. ಇದರಿಂದ ನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವಿಗೆ ಇದು ಮಾತ್ರವಲ್ಲದೇ, ಇನ್ನಿತರೆ ಕಾರಣಗಳು ಸಹ ಇವೆ.

ಮಳೆ ವಾತಾವರಣದಿಂದ ಮನೆಯಿಂದ ಹೊರ ಹೋಗಲು ಸಾಧ್ಯವಾಗುವುದಿಲ್ಲ. ಇದರಿಂದ ಮನೆಯಲ್ಲಿಯೇ ದೀರ್ಘಕಾಲ ಇರಬೇಕಾಗುತ್ತದೆ. ಮನೆಯಲ್ಲೇ ದೀರ್ಘಕಾಲ ಕುಳಿತಿರುವ ಕಾರಣ ಸ್ನಾಯು ಮತ್ತು ಕೀಲುಗಳು ಜಡತ್ವಗೊಂಡು ನೋವು ಹೆಚ್ಚುತ್ತದೆ.

ಮೋಡ ಕವಿದ ವಾತಾವರಣದಿಂದ ನಿಮ್ಮ ಮನಸ್ಥಿತಿ ಕೂಡ ಬದಲಾಗಬಹುದು. ಇದರಿಂದ ನಿಮ್ಮ ಗಮನ ನೋವಿನಂತಹ ನಕಾರಾತ್ಮಕ ಅಂಶಗಳಿಗೆ ಹೆಚ್ಚು ಹೋಗುತ್ತದೆ. ನೋವಿನ ಬಗ್ಗೆ ಹೆಚ್ಚು ಯೋಚಿಸಿದಂತೆ ಅದು ಮತ್ತಷ್ಟು ಕೆಟ್ಟದಾಗಬಹುದು.

ಅನೇಕ ಮಂದಿಗೆ ಮಳೆ ಬಂದರೆ ನೋವು ಹೆಚ್ಚಿದಂತೆ ಎಂಬ ಅಂಶ ತಲೆಯಲ್ಲಿ ಹೊಕ್ಕಿರುತ್ತದೆ. ಅವರ ಮನಸ್ಥಿತಿ ಅನುಸಾರವಾಗಿ ಕೂಡ ಅನೇಕ ಬಾರಿ ನೋವು ಹೆಚ್ಚುತ್ತದೆ.

ನೋವು ಕಡಿಮೆ ಮಾಡುವುದು ಹೇಗೆ? ಸಂಶೋಧನೆಗಳು ಮಳೆಗಾಲದಲ್ಲಿ ಕೀಲು ನೋವು ಹೆಚ್ಚಿಸುತ್ತದೆ ಎಂಬುದನ್ನು ಸಾಬೀತು ಮಾಡಲಿ, ಬಿಡಲಿ, ನೀವು ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸುವುದು ಮುಖ್ಯವಾಗುತ್ತದೆ. ಹವಾಮಾನ ಬದಲಾಗುತ್ತಿದ್ದಂತೆ ಈ ಬಗ್ಗೆ ಕ್ರಮವಹಿಸಿ.

ಸ್ನಾಯು ಮತ್ತು ಮೂಳೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ನಿಯಮಿತವಾಗಿ ವ್ಯಾಯಾಮದಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು.

ನಡೆದಾಡುವುದಕ್ಕಿಂತ ಒಟ್ಟಿಗೆ ಕುಳಿತುಕೊಳ್ಳುವುದು ಉತ್ತಮ. ನೀವು ಹೊರಗೆ ಹೋಗಲು ಸಾಧ್ಯವಾಗದೇ ಇದ್ದರೆ, ಮನೆಯ ಒಳಗಡೆಯೇ ಓಡಾಡಿ. ಟ್ರೆಡ್​ ಮಿಲ್​ನಲ್ಲಿ ವಾಕಿಂಗ್​ ಮಾಡುವುದು ಉತ್ತಮವಾಗಿರಲಿದೆ.

ತೂಕ ಹೆಚ್ಚಳ ಕೂಡ ಕೀಲು, ಸಂಧಿಗಳ ಮೇಲೆ ಒತ್ತಡ ಹೆಚ್ಚಾಗಿ ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಹಿನ್ನೆಲೆ ತೂಕವನ್ನು ಕಡಿಮೆ ಮಾಡಿ. ಸಾಮಾನ್ಯ ತೂಕವನ್ನು ನೀವು ಹೊಂದಿದ್ದರೆ, ಅದನ್ನು ಹೆಚ್ಚಿಸಿ.

ಶಾಖ ಕೂಡ ಅನೇಕ ಬಾರಿ ನೋವಿನ ಉಪಶಮನ ಮಾಡುತ್ತದೆ. ಈ ಹಿನ್ನೆಲೆ ನೋವು ಇರುವ ಪ್ರದೇಶದಲ್ಲಿ ಬಿಸಿ ನೀರನ್ನು ಹಾಕಿಕೊಳ್ಳುವುದು ಉತ್ತಮ ಮಾರ್ಗವಾಗಿರಲಿದೆ. ಅಥವಾ ಆ ಪ್ರದೇಶದಲ್ಲಿ ಬಿಸಿ ನೀರಿನಲ್ಲಿ ಮುಳುಗಿ ಏಳಿಸಿದ ಟವೆಲ್​ ಅನ್ನು ಅನ್ನು ಇಡುವುದು ಆರಾಮದಾಯವಾಗಬಹುದು. ಸಾಧ್ಯವಾದರೆ, ಹೀಟಿಂಗ್​ ಪಾಡ್ಸ್​ ಅನ್ನು ಬಳಸಬಹುದು. ಬಿಸಿ ನೀರಿನಲ್ಲಿ ಸ್ನಾನ ಮಾಡುವುದು ನೋವು ಕಡಿಮೆ ಮಾಡಲಿದೆ.

ಹೊಟ್ಟೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾದರೆ, ಕೀಲುಗಳು ಸರಿಯಾಗಿ ಚಲಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆ ಮಳೆಗಾಲದಲ್ಲೂ ಸಾಕಷ್ಟು ಪ್ರಮಾಣದ ನೀರು ಸೇವಿಸುವುದು ಉತ್ತಮ.


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »