TOP STORIES:

FOLLOW US

ಮನ್ಸೂನ್​ನಲ್ಲಿ ಕಾಡುತ್ತಿದ್ಯಾ ಕೀಲು ನೋವು; ಇಲ್ಲಿದೆ ಇದಕ್ಕೆ ಪರಿಹಾರ


ಬೆಂಗಳೂರು: ಮಳೆಗಾಲದಲ್ಲಿ ಕೆಲವು ಮಂದಿಗೆ ಕೀಲು ನೋವಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಅವಧಿಯಲ್ಲಿ ನೋವು ಉಲ್ಬಣಗೊಳ್ಳಲು ನಿಖರವಾದ ಕಾರಣ ತಿಳಿದಿಲ್ಲ.

ಸಂಶೋಧನೆಗಳು ಕೂಡ ಈ ಬಗ್ಗೆ ಹೆಚ್ಚು ಸ್ಪಷ್ಟವಾಗಿ ತಿಳಿಸಿಲ್ಲ. ಮಳೆಗಾಲದಲ್ಲಿ ಈ ನೋವು ಹೆಚ್ಚು ಎಂದು ಕೆಲವು ಅಧ್ಯಯನಗಳು ವಾದಿಸಿದರೆ, ಮತ್ತೆ ಕೆಲವು ಅಧ್ಯಯನಗಳು ಈ ಆರೋಪವನ್ನು ತಳ್ಳಿಹಾಕುತ್ತದೆ. ಆದರೆ, ತಜ್ಞರ ಪ್ರಕಾರ, ಪರಿಸರದಲ್ಲಿನ ಬದಲಾವಣೆಗಳು ಕೀಲು ನೋವಿಗೆ ಪ್ರಮುಖ ಕಾರಣವಾಗಿದೆ.

ಮಳೆಗಾಲದಲ್ಲಿ ಪರಿಸರದಲ್ಲಿನ ವಾಯುವಿನ ಒತ್ತಡ ಕಡಿಮೆಯಾಗುತ್ತದೆ. ದೇಹದಲ್ಲಿನ ಗಾಳಿಯ ಒತ್ತಡವೂ ಈ ಋತುಮಾನದಲ್ಲಿ ಕಡಿಮೆಯಾಗುತ್ತದೆ. ಫಲಿತಾಂಶವಾಗಿ ಕೀಲುಗಳ ಸುತ್ತಲು ಇರುವ ಸ್ನಾಯು, ಅಸ್ಥಿರಜ್ಜು ಮತ್ತು ಇನ್ನಿತರೆ ಟಿಶ್ಯೂಗಳ ಮೇಲೆ ಒತ್ತಡ ಬೀಳುತ್ತದೆ. ಇದು ಕೀಲು ನೋವಿಗೆ ಕಾರಣವಾಗುತ್ತದೆ. ಸಂಧಿವಾತದೊಂದಿಗೆ ಬಳಲುತ್ತಿರುವ ಮಂದಿ ಅಥವಾ ಇತರೆ ದೀರ್ಘ ನೋವಿನ ಅನುಭವ ಹೊಂದಿರುವವರು ಇದರಿಂದ ಕಿರಿಕಿರಿ ಅನುಭವಿಸುತ್ತಾರೆ. ವಾತಾವರಣ ಸರಿ ಹೋದಂತೆ ಗಾಳಿಯ ಒತ್ತಡವೂ ಹೊಂದಾಣಿಕೆಯಾಗುತ್ತದೆ. ಇದರಿಂದ ನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವಿಗೆ ಇದು ಮಾತ್ರವಲ್ಲದೇ, ಇನ್ನಿತರೆ ಕಾರಣಗಳು ಸಹ ಇವೆ.

ಮಳೆ ವಾತಾವರಣದಿಂದ ಮನೆಯಿಂದ ಹೊರ ಹೋಗಲು ಸಾಧ್ಯವಾಗುವುದಿಲ್ಲ. ಇದರಿಂದ ಮನೆಯಲ್ಲಿಯೇ ದೀರ್ಘಕಾಲ ಇರಬೇಕಾಗುತ್ತದೆ. ಮನೆಯಲ್ಲೇ ದೀರ್ಘಕಾಲ ಕುಳಿತಿರುವ ಕಾರಣ ಸ್ನಾಯು ಮತ್ತು ಕೀಲುಗಳು ಜಡತ್ವಗೊಂಡು ನೋವು ಹೆಚ್ಚುತ್ತದೆ.

ಮೋಡ ಕವಿದ ವಾತಾವರಣದಿಂದ ನಿಮ್ಮ ಮನಸ್ಥಿತಿ ಕೂಡ ಬದಲಾಗಬಹುದು. ಇದರಿಂದ ನಿಮ್ಮ ಗಮನ ನೋವಿನಂತಹ ನಕಾರಾತ್ಮಕ ಅಂಶಗಳಿಗೆ ಹೆಚ್ಚು ಹೋಗುತ್ತದೆ. ನೋವಿನ ಬಗ್ಗೆ ಹೆಚ್ಚು ಯೋಚಿಸಿದಂತೆ ಅದು ಮತ್ತಷ್ಟು ಕೆಟ್ಟದಾಗಬಹುದು.

ಅನೇಕ ಮಂದಿಗೆ ಮಳೆ ಬಂದರೆ ನೋವು ಹೆಚ್ಚಿದಂತೆ ಎಂಬ ಅಂಶ ತಲೆಯಲ್ಲಿ ಹೊಕ್ಕಿರುತ್ತದೆ. ಅವರ ಮನಸ್ಥಿತಿ ಅನುಸಾರವಾಗಿ ಕೂಡ ಅನೇಕ ಬಾರಿ ನೋವು ಹೆಚ್ಚುತ್ತದೆ.

ನೋವು ಕಡಿಮೆ ಮಾಡುವುದು ಹೇಗೆ? ಸಂಶೋಧನೆಗಳು ಮಳೆಗಾಲದಲ್ಲಿ ಕೀಲು ನೋವು ಹೆಚ್ಚಿಸುತ್ತದೆ ಎಂಬುದನ್ನು ಸಾಬೀತು ಮಾಡಲಿ, ಬಿಡಲಿ, ನೀವು ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸುವುದು ಮುಖ್ಯವಾಗುತ್ತದೆ. ಹವಾಮಾನ ಬದಲಾಗುತ್ತಿದ್ದಂತೆ ಈ ಬಗ್ಗೆ ಕ್ರಮವಹಿಸಿ.

ಸ್ನಾಯು ಮತ್ತು ಮೂಳೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ನಿಯಮಿತವಾಗಿ ವ್ಯಾಯಾಮದಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು.

ನಡೆದಾಡುವುದಕ್ಕಿಂತ ಒಟ್ಟಿಗೆ ಕುಳಿತುಕೊಳ್ಳುವುದು ಉತ್ತಮ. ನೀವು ಹೊರಗೆ ಹೋಗಲು ಸಾಧ್ಯವಾಗದೇ ಇದ್ದರೆ, ಮನೆಯ ಒಳಗಡೆಯೇ ಓಡಾಡಿ. ಟ್ರೆಡ್​ ಮಿಲ್​ನಲ್ಲಿ ವಾಕಿಂಗ್​ ಮಾಡುವುದು ಉತ್ತಮವಾಗಿರಲಿದೆ.

ತೂಕ ಹೆಚ್ಚಳ ಕೂಡ ಕೀಲು, ಸಂಧಿಗಳ ಮೇಲೆ ಒತ್ತಡ ಹೆಚ್ಚಾಗಿ ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಹಿನ್ನೆಲೆ ತೂಕವನ್ನು ಕಡಿಮೆ ಮಾಡಿ. ಸಾಮಾನ್ಯ ತೂಕವನ್ನು ನೀವು ಹೊಂದಿದ್ದರೆ, ಅದನ್ನು ಹೆಚ್ಚಿಸಿ.

ಶಾಖ ಕೂಡ ಅನೇಕ ಬಾರಿ ನೋವಿನ ಉಪಶಮನ ಮಾಡುತ್ತದೆ. ಈ ಹಿನ್ನೆಲೆ ನೋವು ಇರುವ ಪ್ರದೇಶದಲ್ಲಿ ಬಿಸಿ ನೀರನ್ನು ಹಾಕಿಕೊಳ್ಳುವುದು ಉತ್ತಮ ಮಾರ್ಗವಾಗಿರಲಿದೆ. ಅಥವಾ ಆ ಪ್ರದೇಶದಲ್ಲಿ ಬಿಸಿ ನೀರಿನಲ್ಲಿ ಮುಳುಗಿ ಏಳಿಸಿದ ಟವೆಲ್​ ಅನ್ನು ಅನ್ನು ಇಡುವುದು ಆರಾಮದಾಯವಾಗಬಹುದು. ಸಾಧ್ಯವಾದರೆ, ಹೀಟಿಂಗ್​ ಪಾಡ್ಸ್​ ಅನ್ನು ಬಳಸಬಹುದು. ಬಿಸಿ ನೀರಿನಲ್ಲಿ ಸ್ನಾನ ಮಾಡುವುದು ನೋವು ಕಡಿಮೆ ಮಾಡಲಿದೆ.

ಹೊಟ್ಟೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾದರೆ, ಕೀಲುಗಳು ಸರಿಯಾಗಿ ಚಲಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆ ಮಳೆಗಾಲದಲ್ಲೂ ಸಾಕಷ್ಟು ಪ್ರಮಾಣದ ನೀರು ಸೇವಿಸುವುದು ಉತ್ತಮ.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »