TOP STORIES:

FOLLOW US

ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ


ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಮಿತಿ ರಿಜಿಸ್ಟರ್ಡ್ ಇದರ ನವೀಕೃತ ಶ್ರೀ ನಾಗಸಾನ್ನಿಧ್ಯ ಗರಡಿಮನೆ, ಧರ್ಮಚಾವಡಿ, ಜಲದುರ್ಗೆ ,ಭದ್ರಕಾಳಿ ಗುಡಿ, ಪಂಚದೈವ ,ಭೈರವ ಶಕ್ತಿ ,ಕಲ್ಲುರ್ಟಿ ಪಂಜುರ್ಲಿ ಹಾಗೂ ಸಂಘ ಪರಿವಾರ ದೈವಗಳ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ರವಿವಾರ ಯಶಸ್ವಿಯಾಗಿ ಜರಗಿತು .

ಭಾರತ ಸರಕಾರದ ಮಾಜಿ ಸಚಿವ ಗೌರವಾನ್ವಿತ ಶ್ರೀ ಬಿ. ಜನಾರ್ದನ ಪೂಜಾರಿಯವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಕೆ ಸೇಸಪ್ಪ ಕೋಟ್ಯಾನ್ ರವರ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಆರಾಧನಾ ಸಮಿತಿಯ ಅಧ್ಯಕ್ಷರಾದ ಮರಕಡಬೈಲು ಗುತ್ತು ಶ್ರೀ ರಾಘವ ಅಮೀನ್ ರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬದ ಬಂಧುಗಳು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿದರು .

ನಂತರ ಜನಾರ್ದನ ಪೂಜಾರಿ ಅವರು ಮಾತನಾಡಿ ನೂತನವಾಗಿ ವಾಗಿ ನಿರ್ಮಾಣ ಗೊಳ್ಳಲಿರುವ ಈ ಧರ್ಮ ಚಾವಡಿ ಅತಿ ಶೀಘ್ರವಾಗಿ ನಿರ್ಮಾಣವಾಗಲಿ ತನ್ನ ಪೂರ್ಣ ಸಹಕಾರವನ್ನು ಈ ಪುಣ್ಯಕಾರ್ಯಕ್ಕೆ ನೀಡುವುದಾಗಿ ತಿಳಿಸಿ ದರು.

ಕುಟುಂಬದ ಎಲ್ಲಾ ಬಂಧುಗಳು ಈ ಪುಣ್ಯಕಾರ್ಯದಲ್ಲಿ ಕೈಜೋಡಿಸಬೇಕೆಂದರು. ಜನಾರ್ದನ ಪೂಜಾರಿಯವರ ಜತೆಗೆ ಧರ್ಮಪತ್ನಿ ಶ್ರೀಮತಿ ಮಾಲತಿ ಜನಾರ್ದನ ಪೂಜಾರಿ ಮತ್ತು ಮಗ ಸಂತೋಷ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ನಂತರ ಕುಟುಂಬಿಕರ ಸಭೆಯು ಯಶಸ್ವಿಯಾಗಿ ನಡೆಯಿತು . ಕುಟುಂಬಿಕರ ಸಭೆಯ ಅಧ್ಯಕ್ಷತೆ ವಹಿಸಿದ್ದ ಮರಕಡಬೈಲು ಗುತ್ತು ರಾಘವ ಅಮೀನ್ ಕುಟುಂಬದ ಬಂಧುಗಳಿಗೆ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು . ವೈದಿಕ ಕಾರ್ಯ ಗಳನ್ನು ನಡೆಸಿರುವ ಲೋಕೇಶ್ ಶಾಂತಿ ಅವರು ಆಶೀರ್ವಚನ ನೀಡಿದರು . ಸಮಿತಿಯ ಕಾರ್ಯದರ್ಶಿ ಶ್ರೀಧರ್ ಅಮೀನ್ ವರದಿ ವಾಚಿಸಿದರು . ಕೋಶಾಧಿಕಾರಿ ಸುರೇಂದ್ರ ಅಮೀನ್ ಲೆಕ್ಕಪತ್ರ ಮಂಡಿಸಿದರು . ಉಪಾಧ್ಯಕ್ಷರಾದ ದಿನೇಶ್ ಅಮೀನ್ ನೂತನ ಧರ್ಮ ಚಾವಡಿ ಯ ಬಗ್ಗೆ ವಿವರಗಳನ್ನು ನೀಡಿದರು . ಜತೆ ಕಾರ್ಯದರ್ಶಿ ಸಂದೀಪ್ ಸ್ವಾಗತಿಸಿ ಲೆಕ್ಕ ಪರಿಶೋಧಕರಾದ ಶ್ರೀಮತಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು . ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲು ಕಾರಣ ಕರ್ತರಾದ ಕುಟುಂಬದ ಎಲ್ಲ ಬಂಧುಗಳಿಗೆ ಸಮಿತಿಯ ವತಿಯಿಂದ ವಂದನೆಗಳನ್ನು ಸಲ್ಲಿಸುತ್ತಿದ್ದೇವೆ ಮುಂದೆಯೂ ಸಹಕಾರವನ್ನು ಪ್ರತಿ ಸಂದರ್ಭದಲ್ಲಿ ಯಾಚಿಸುತ್ತಿದ್ದೇವೆ ತಾವೆಲ್ಲರೂ ಈ ಪುಣ್ಯ ಕಾರ್ಯದಲ್ಲಿ ಕೈಜೋಡಿಸಿ ನಮ್ಮ ಕಾರ್ಯಕ್ರಮ ಯಶಸ್ವಿಯಾಗಲು ತಮ್ಮೆಲ್ಲರ ಸಹಕಾರವನ್ನು ಬಯಸುತ್ತೇವೆ.

 


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »