TOP STORIES:

ಮೊಗೆದಷ್ಟು ಮುಗಿಯದ.. ಬಗೆದಷ್ಟು ಅಳಕ್ಕಿರುವ ಪರ್ಪಲೆಯ ರಹಸ್ಯ.


ಮೊಗೆದಷ್ಟು ಮುಗಿಯದ.. ಬಗೆದಷ್ಟು ಅಳಕ್ಕಿರುವ ಪರ್ಪಲೆಯ ರಹಸ್ಯ.


15ನೇ ಶತಮಾನದ ಒಂದು ಸಂಜೆ ಪಾಂಡ್ಯ ನಗರಿ ಕಾರ್ಕಳ ತನ್ನ ದಿನದ ವಹಿವಾಟನ್ನು ಮುಗಿಸಿ ಪಡುಗಡಲ ಸೆರಗಲ್ಲಿ ಮರೆಯಾಗುತ್ತಿದ್ದ ನೇಸರ ನನ್ನೇ ದಿಟ್ಟಿಸುತ್ತಿತ್ತು. ಅಷ್ಟರಲ್ಲೇ ಕೇಳಿಬಂತು ಎಲ್ಲೆಲ್ಲೂ ಹಾಹಾಕಾರ.. ಹೋ ಎಂದು ಬೆಚ್ಚಿ ಬೆದರಿ ಓಡುವ ಜನಮಂದೆಯ ಬೊಬ್ಬೆ ಗಲಾಟೆ. ನೋಡುವುದೇನು?
ಆಗಸದೆತ್ತರಕ್ಕೆ ಧೂಳೆಬ್ಬಿಸುತ್ತ ಹೂಂಕರಿಸುತ್ತಾ ಘೀಳಿಡುತ್ತಾ ಪರ್ವತ ಗಾತ್ರದ ಅರಸನ ಪಟ್ಟದ ಆನೆ ಇಡೀ ಪಟ್ಟಣವನ್ನೇ ಪುಡಿ ಗಟ್ಟುವ ಹುಮ್ಮಸ್ಸಿನಲ್ಲಿ ಮುನ್ನುಗ್ಗಿ ಬರುತ್ತಿತ್ತು. ಅರಮನೆಯ ಲಾಯದಲ್ಲಿ ಕಾಲಿಗೆ ಕಟ್ಟಿದ ಕಬ್ಬಿಣದ ಸಂಕೋಲೆಯನ್ನು ತುಂಡರಿಸಿಕೊಂಡು ಮದ ಏರಿದ ಆನೆ ಪೇಟೆಯ ಕಡೆಗೆ ನುಗ್ಗಿತ್ತು. ಒಂದಷ್ಟು ಕಟ್ಟಾಳುಗಳು ಆನೆಯನ್ನು ಕಟ್ಟಿ ಹಾಕುವ ಭರದಲ್ಲಿ ಮುನ್ನುಗ್ಗಿದರು. ಅವರಲ್ಲಿ ಕೆಲವರು ಸೊಂಡಿಲಿಗೆ ಸಿಕ್ಕಿ ಕಬ್ಬಿನ ಜಲ್ಲೆಯಂತೆ ನೆಲಕ್ಕೆ ಒಗೆಯಲ್ಪಟ್ಟರು. ಇನ್ನು ಕೆಲವರು ಆನೆಯ ಕಾಲಡಿಗೆ ಸಿಕ್ಕಿ ಕುಂಬಳಕಾಯಿಯಂತೆ ತಲೆ ಒಡೆಸಿಕೊಂಡರು. ಈ ರುದ್ರ ಭಯಾನಕ ದೃಶ್ಯ ಕಂಡ ನಗರದ ಜನರು ಆನೆಯನ್ನು ಹಿಡಿಯುವ ಯತ್ನವನ್ನು ಬಿಟ್ಟು ತಮ್ಮ ಮನೆ ಮಠ ಸ್ವತ್ತು ಸಾಮಗ್ರಿಗಳನ್ನು ಉಳಿಸುವ ಧಾವಂತಕ್ಕೆ ಬಿದ್ದರು. ತೆಂಗಿನ ಸೋಗೆಗಳನ್ನು ಸುಟ್ಟು ಆನೆಯನ್ನು ತಮ್ಮ ಬೀದಿಗೆ ಬರದಂತೆ ತಡೆದರು. ದೊಂದಿ ರಾಳಗಳನ್ನು ಹಿಡಿದು ಆನೆಯನ್ನು ಕಾಡಿಗಟ್ಟುವ ಪ್ರಯತ್ನದಲ್ಲಿ ತೊಡಗಿದರು. ಬೆಂಕಿ ಕಂಡು ಬೆದರಿದ ಆನೆ ಪರ್ಪಲೆಯ ತಪ್ಪಲಿಗೆ ಬಂತು. ಅಲ್ಲಿಂದ ಮುಂದೆ ಪರ್ಪಲೆ ಗುಡ್ಡೆ ಹತ್ತಿ ಕಾಣೆಯಾಯಿತು.
ಪಟ್ಟದ ಆನೆಗೆ ಮದ ಏರಿದ ಚಿಂತೆಯಲ್ಲಿ ಅರಸನಿದ್ದರೆ, ಮದ ಏರಿದ ಆನೆ ಪೇಟೆ ಬಿಟ್ಟು ಪರ್ಪಲೆಯ ಗುಡ್ಡ ಹತ್ತಿದ ನೆಮ್ಮದಿಯಲ್ಲಿ ಜನರು ನಿದ್ದೆ ಮಾಡಿದರು.
ಕಾಡಿನಲ್ಲಿ ಅಲೆದು ಮರಗಳ ಮೇಲೆ ಸಿಟ್ಟು ತೋರಿಸಿ ಸುಸ್ತಾದ ಆನೆ ಮರುದಿನ ಮದ ಇಳಿದು ಬಾಯರಿ ನೀರನ್ನು ಅರಸಿಕೊಂಡು ಮೆಲ್ಲನೆ ಪರ್ಪಲೆ ಗುಡ್ಡದ ಪೂರ್ವಕ್ಕೆ ಇಳಿದು ಆನೆಕೆರೆಯ ಕಡೆಗೆ ಹೆಜ್ಜೆ ಹಾಕಿತು. ನಗರದ ಜನರು ಮತ್ತೆ ಸೇರಿದರು. ಮಾವುತನಿಗೆ ಸುದ್ದಿ ಮುಟ್ಟಿಸಿದರು. ಆನೆ ಸಹಜ ಸ್ಥಿತಿಗೆ ಬಂದಿತ್ತು. ಮಾವುತನನ್ನು ಹಿಂಬಾಲಿಸುತ್ತ ಏನೂ ಆಗಿಲ್ಲವೆಂಬಂತೆ ಅರಮನೆಯ ಕಡೆಗೆ ಹೆಜ್ಜೆ ಹಾಕಿತು.
ಅರಮನೆಯ ಬಳಿ ಬಂದು ಗಜ ಲಾಯದ ಗೂಟದ ಸಂಕೋಲೆಯನ್ನು ಆನೆಯ ಕಾಲಿಗೆ ಕಟ್ಟಬೇಕು ಎಂದು ಮಾವುತ ಬಗ್ಗಿದಾಗ ನೋಡುವುದೇನು?
ಆನೆಯ ಕಾಲಿನಲ್ಲಿದ್ದ ಕಬ್ಬಿಣದ ತುಂಡು ಸರಪಳಿ ಬಂಗಾರವಾಗಿದೆ!
ಅಷ್ಟಕ್ಕೂ ಆನೆಯ ಕಾಲಿನಲ್ಲಿದ್ದ ಕಬ್ಬಿಣದ ಸರಪಳಿ ಬಂಗಾರ ವಾಗಿದ್ದು ಹೇಗೆ ?
ಕಬ್ಬಿಣವನ್ನು ಬಂಗಾರ ಮಾಡಿದ ಆ ರಸಬಾವಿ ಅಥವಾ ಸ್ಪರ್ಶಮಣಿ ಪರ್ಪಲೆ ಗುಡ್ಡದಲ್ಲಿ ಎಲ್ಲಿದೆ ?
ಆ ಇಡಿ ರಾತ್ರಿ ಆನೆ ಅಲೆದಾಡಿದ ಪ್ರದೇಶದಲ್ಲಿ ಕಾಲ ಕಬ್ಬಿಣದ ಸರಪಳಿಗೆ ಸ್ಪರ್ಶಿಸಿದ ಆ ಚಮತ್ಕಾರಿ ವಸ್ತು ಯಾವುದು?
ಇತಿಹಾಸದ ಅನೇಕ ಪುಟಗಳಲ್ಲಿ ಬಂದು ಹೋಗುವ ರಸವಿದ್ಯೆಯನ್ನು ಕರಗತ ಮಾಡಿಕೊಂಡ ಯೋಗಿಗಳು ಈ ಗುಡ್ಡದ ಮೇಲಿದ್ದರೇ?
5 ಶತಮಾನಗಳಿಂದ ಜನರ ಬಾಯಿಂದ ಬಾಯಿಗೆ ಹರಡಿ ಕೊಂಡು ಬಂದ ಈ ದಂತ ಕಥೆಯ ಹಿಂದಿನ ರೋಚಕ ಸತ್ಯವೇನು?
ಮೊನ್ನೆ ಅಷ್ಟಮಂಗಲ ಪ್ರಶ್ನೆ ಇರಿಸಿದ ಪಯ್ಯನ್ನೂರಿನ ನಾರಾಯಣ ಪೊದುವಾಲರು.. ಇದ್ ಭೂಮಿ ಸ್ವರ್ಣ ಮಯಿ…ಈ ಭೂಮಿಕ್ಕ್ ಸ್ವರ್ಣ ಸೃಷ್ಟಿಕ್ಕಿನ ಶಕ್ತಿ ಇಂಡ್ ಎಂದಾಗ ನಮ್ಮೆಲ್ಲರ ಮೈ ಮುಳ್ಳೆದ್ದಿದ್ದು ಇದೇ ಕಾರಣಕ್ಕೆ..
ಆವತ್ತಿನ ಅಷ್ಟಮಂಗಲ ಪ್ರಶ್ನೆಯಲ್ಲಿ ಇಂತಹ ಅನೇಕ ಮುಖ್ಯ ಬಿಂದುಗಳು ದೈವಜ್ಞರ ಗಮನಕ್ಕೆ ಬಂದರೂ ಅದನ್ನು ವಿಸ್ತರಿಸುವ ಕೆಲಸ ನಡೆದಿರಲಿಲ್ಲ
ಅರಸನ ಆನೆಯ ಸರಪಳಿ ಬಂಗಾರವಾದ ಕಥೆ ನನಗೆ ತಿಳಿದಿದ್ದು ಅಷ್ಟಮಂಗಲ ಪ್ರಶ್ನೆ ಮುಗಿದು ಒಂದು ವಾರದ ಬಳಿಕ. ಯಾರೋ ಒಬ್ಬರು ಹಿರಿಯ ಜೈನ ಇಂದ್ರರ ಮೂಲಕ
ಕಾಲದ ಚಿಪ್ಪಿನೊಳಗೆ ಭದ್ರವಾಗಿ ಕುಳಿತಿರುವ ಅನೇಕ ಸಂಗತಿಗಳು ಆ ಶಕ್ತಿಗಳ ಅಪೇಕ್ಷೆಗನುಗುಣವಾಗಿ ಮತ್ತೆ ಮುನ್ನೆಲೆಗೆ ಬರುತ್ತಿದೆ.
ಪರ್ಪಲೆಯ ಸತ್ಯ ಸಾನಿಧ್ಯ ನಿತ್ಯ ನಿರಂತರ ಬೆಳಗುತ್ತಿರಲಿ
ಜೈ ಮಹಾಕಾಲ್

credits: beauty of tulunadu


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »