TOP STORIES:

ಯುವವಾಹಿನಿ ರಿ ಕೊಲ್ಯ ಘಟಕದ ವತಿಯಿಂದ ಮನೆಮನ ಬೆಳಗಿಸಿದ ಗುರುಭಜನೆ , ಗುರುಸ್ಮರಣೆ


ಯುವವಾಹಿನಿ ರಿ ಕೊಲ್ಯ ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಪರಿಪಾಲನೆ ಮಾಡುವ ಕಾರ್ಯಗಳಿಗೆ ಪೂರಕವಾಗಿ ನಮ್ಮ ಘಟಕದ ನಾರಾಯಣ ಗುರು ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕಿ ಶ್ರೀಮತಿ ರಶ್ಮಿ ಸನಿಲ್ ರವರ ತರವಾಡು ಮನೆ ಕಣೀರುತೋಟದಲ್ಲಿ ದಿನಾಂಕ 05-10-2023 ನೇ ಗುರುವಾರದಂದು ಸಂಜೆ ಗುರುಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ಜರುಗಿತು.

ಭಗವಂತನೊಂದಿಗೆ ನೇರವಾಗಿ ಸಂವಾದಿಸುವ ಸಾಧನವೆಂದರೆ ಅದು ಭಜನೆ. ಭಜನೆ ಇದ್ದಲ್ಲಿ ಎಂದಿಗೂ ವಿಭಜನೆ ಇರುವುದಿಲ್ಲ. ದೇವರ ನಾಮವನ್ನು, ಮಹಿಮೆಯನ್ನು ಹಾಡಿ ಭಜಿಸುವ ಮೂಲಕ ಭಗವಂತನೊಂದಿಗೆ ಲೀನವಾಗುವಂತಹ ಆ ಒಂದು ಅನುಭವವನ್ನು ವರ್ಣಿಸಲು ಅಸಾಧ್ಯ. ಹಿರಿಯರ ಕಾಲದಿಂದಲೂ ನಡೆದುಕೊಂಡು ಬಂದಿರುವ ಈ ಸಂಪ್ರದಾಯವನ್ನು ಮರೀಚಿಕೆ ಆಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿರುತ್ತದೆ ಎಂದು ಮನವಿ ಮಾಡಿ, ಈ ಸಂದರ್ಭದಲ್ಲಿ ಬಿಲ್ಲವ ಸೇವಾ ಸಮಾಜ ರಿ ಕೊಲ್ಯ ಇದರ ಹಿರಿಯ ಭಜನಾ ಸಂಚಾಲಕರು, ಯುವವಾಹಿನಿ ರಿ ಕೊಲ್ಯ ಘಟಕದ ಆರೋಗ್ಯ ನಿರ್ದೇಶಕರೂ ಆಗಿರುವ ಶಶಿಕಾಂತ್ ಪರ್ಯತ್ತೂರು ಭಜನೆಯ ಮಹತ್ವದ ಕುರಿತು ವ್ಯಾಖ್ಯಾನ ನೀಡಿದರು.

ಯುವವಾಹಿನಿ ರಿ ಕೊಲ್ಯ ಘಟಕದ ನಾರಾಯಣ ಗುರು ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕಿ ಶ್ರೀಮತಿ ರಶ್ಮಿ ಸನಿಲ್ ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜೀವನ ಚರಿತ್ರೆಯನ್ನು ಆಧರಿಸಿದ ಚಿತ್ರಣವನ್ನು ಕಥನಕವನದ ಮೂಲಕ ಪ್ರಸ್ತುತ ಪಡಿಸಿದರು. ಬ್ರಹ್ಮಶ್ರೀ ನಾರಾಯಣಗುರುಗಳು ನಡೆದು ಬಂದ ದಾರಿ, ಅವರ ಬದುಕು, ತತ್ವಾದರ್ಶಗಳು, ಸಮಾಜದ ಅಭ್ಯುದಯಕ್ಕೆ ನೀಡಿರುವ ಸಂದೇಶಗಳ ಕುರಿತು ಅರ್ಥಪೂರ್ಣವಾಗಿ ಮಂಡಿಸಿ ಕಿರು ಉಪನ್ಯಾಸ ನೀಡಿದರು.

ಯುವವಾಹಿನಿ ರಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ರಾಜೇಶ್ ಬಿ. ಈ ಸಂದರ್ಭದಲ್ಲಿ ಹಾಜರಿದ್ದು ಸರ್ವರಿಗೂ ಮಾದರಿಯಾಗಿರುವ ಅರ್ಥಪೂರ್ಣ ಕಾರ್ಯಕ್ರಮದ ಆಯೋಜನೆಗೆ ಅಭಿನಂದನೆ ಸಲ್ಲಿಸಿದರು.‌ ಯುವವಾಹಿನಿ ರಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಅದೇ ರೀತಿ ಯುವವಾಹಿನಿ ರಿ ಕೊಲ್ಯ ಘಟಕದ ಮಾಜಿ ಅಧ್ಯಕ್ಷರೂ ಆಗಿರುವ ಶ್ರೀ ಕುಸುಮಾಕರ ಕುಂಪಲರವರು ಸರ್ವರನ್ನು ಒಟ್ಟುಗೂಡಿಸುವ ಭಜನಾ ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಮಣ್ಣಿನ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಇಂದಿನ ಕಾಲಘಟ್ಟದಲ್ಲಿ ಈ ರೀತಿಯ ಭಜನಾ ಸಂಕೀರ್ತನೆಗಳು ಬಹಳ ಅರ್ಥಪೂರ್ಣ, ಪ್ರತಿಯೊಬ್ಬರ ಮನೆಮನದಿಂದಲೇ ಈ ಕುರಿತು ಜಾಗೃತಿ ಮೂಡಬೇಕು ಎಂದು ಯುವವಾಹಿನಿ ರಿ ಕೊಲ್ಯ ಘಟಕದ ಅಧ್ಯಕ್ಷರಾದ ಶ್ರೀ ಲತೀಶ್ ಎಂ ಸಂಕೋಳಿಗೆಯವರು ಅಭಿಪ್ರಾಯ ವ್ಯಕ್ತಪಡಿಸಿದರು.

 

ಬಿಲ್ಲವ ಸೇವಾ ಸಮಾಜ ಟ್ರಸ್ಟ್ ರಿ ಇದರ ಅಧ್ಯಕ್ಷರಾದ ಶ್ರೀ ವೇಣುಗೋಪಾಲ ಕೊಲ್ಯ ಉಪಸ್ಥಿತರಿದ್ದರು. ಯುವವಾಹಿನಿ ರಿ ಕೊಲ್ಯ ಘಟಕದ ಸ್ಥಾಪಕಾಧ್ಯಕ್ಷರಾದ ಶ್ರೀ ಸುರೇಶ್ ಬಿಲ್ಲವ, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸುಂದರ್ ಸುವರ್ಣ, ಪ್ರಥಮ ಉಪಾಧ್ಯಕ್ಷರು ಶ್ರೀಮತಿ ಸುಧಾ ಸುರೇಶ್, ದ್ವಿತೀಯ ಉಪಾಧ್ಯಕ್ಷರು ಶ್ರೀ ನಿತಿನ್ ಕರ್ಕೇರ ಹಾಗೂ ಮಾಜಿ ಅಧ್ಯಕ್ಷರುಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಯುವವಾಹಿನಿ ರಿ ಕೊಲ್ಯ ಘಟಕದ ಪದಾಧಿಕಾರಿಗಳು, ಸದಸ್ಯರು ಮತ್ತು ಬಂಧುಗಳು, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಮಂಡಳಿಯ ಸದಸ್ಯರು ಹಾಗೂ ಬಿಲ್ಲವ ಸೇವಾ ಸಮಾಜ ರಿ ಕೊಲ್ಯದ ಸದಸ್ಯರು, ರಶ್ಮಿ ಸನಿಲ್ ಕುಟುಂಬಸ್ಥರು ಭಜನಾ ಸಂಕೀರ್ತನೆಯಲ್ಲಿ ಭಾಗವಹಿಸಿದ್ದರು. ಭಜನೆಯ ನಂತರ ಗುರುಪೂಜೆ ಮತ್ತು ಪ್ರಸಾದ ವಿತರಣೆ ಹಾಗೂ ಸರ್ವರಿಗೂ ಅನ್ನ ಸಂತರ್ಪಣೆಯನ್ನು ನೀಡಲಾಯಿತು.

ಯುವವಾಹಿನಿ ರಿ ಕೊಲ್ಯ ಘಟಕದ ಕಾರ್ಯದರ್ಶಿ ಶ್ರೀ ಜೀವನ್ ಕೊಲ್ಯ ಕಾರ್ಯಕ್ರಮವನ್ನು ನಿರೂಪಿಸಿದರು.‌


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »