TOP STORIES:

FOLLOW US

ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.


ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಸವೇಶ್ವರನಗರದ ಪಿವಿಪಿಸ್ಕೂಲ್ ನಲ್ಲಿ ತಾ.13 ನವೆಂಬರ್ 2021 ಶನಿವಾರದಂದು ಬೆಳಿಗ್ಗೆ 9.00 ರಿಂದ 1.00 ಗಂಟೆಯವರೆಗೆ ಬಹಳ ಅದ್ದೂರಿಯಾಗಿಆಚರಿಸಲಾಯಿತು.

ಮಕ್ಕಳೆಲ್ಲರೂ ಸೇರಿ ನಾಡಗೀತೆಯನ್ನು ಹಾಡಿ, ಶ್ರೀ ನಾರಾಯಣ ಗುರುಗಳ ಹಾಗೂ ನೆಹರೂ ಭಾವಚಿತ್ರಕ್ಕೆ ಪೂಜೆಯನ್ನುಸಲ್ಲಿಸುವುದರ ಮೂಲಕ ಆರಂಭವಾದ ಕಾರ್ಯಕ್ರಮವನ್ನು ಘಟಕದ ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾದ ಶ್ರೀಮತಿ ಅನಿತಾಕಮಲಾಕ್ಷ  ಜೊತೆ ಕಾರ್ಯದರ್ಶಿ ಶ್ರೀಮತಿ ಅಕ್ಷತಾ ಸುಧೀರ್ ಇವರು ಮುನ್ನಡೆಸಿ ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳನ್ನುನಡೆಸಿಕೊಟ್ಟರು.

ಬಳಿಕ ಪ್ರೇರಕ ವಾಗ್ಮಿ ಶ್ರೀ ರಾಜೇಶ್ ಗೋಪೆ ಇವರು ಮಕ್ಕಳಿಗಾಗಿ ವಿವಿಧ ಪ್ರೇರೇಪಣಾ ಚಟುವಟಿಕೆಗಳನ್ನು ನಡೆಸಿ ಮಕ್ಕಳೊಂದಿಗೆಹಾಡಿ ಕುಣಿದರಲ್ಲದೆ ಮಕ್ಕಳೆಲ್ಲರನ್ನೂ ಧ್ಯಾನಾಸಕ್ತರನ್ನಾಗಿಸಿದರು.

11.30 ಸುಮಾರಿಗೆ ಸಭಾ ಕಾರ್ಯಕ್ರಮವು ಆರಂಭಗೊಂಡಿತು. ಪಿವಿಪಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕಾಲೈವೇಣಿ ಅವರು ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮದ ಉದ್ಘಾಟಕರಾದ ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ. ಅವರು ದೀಪಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರ್ಕಾರಿ ಶಾಲೆಯಲ್ಲಿ ಕಳೆದ ತಮ್ಮ ಬಾಲ್ಯದ ದಿನಗಳನ್ನುನೆನಪಿಸಿಕೊಂಡು ಶಾಲಾಮಕ್ಕಳಿಗೆ ಉತ್ತಮ ನಡವಳಿಕೆಯ ಕಿವಿಮಾತುಗಳನ್ನಾಡಿದರು.

ಪಿವಿಪಿ ಶಾಲೆಯ ವಿದ್ಯಾಧಿಕಾರಿಗಳಾದ ಶ್ರೀ ಸೋಮಶೇಖರ್ ಅವರು ಮಾತನಾಡಿ ಯುವವಾಹಿನಿಯ ಸಮಾಜ ಸೇವಾಕಾರ್ಯಗಳನ್ನು ಶ್ಲಾಘಿಸಿದರು.

ಬಳಿಕ ಡಾ. ಉಷಾ ಮೋಹನ್ ಮತ್ತು ಬಿರುವೆರ್ ಕುಡ್ಲ ಮಂಗಳೂರು ಇವರ ಸಹಯೋಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಶೂವಿತರಣೆಯನ್ನು ಮಾಡಲಾಯಿತು.

ಮಕ್ಕಳಿಂದ ಹಾಗೂ  ಘಟಕದ ಸದಸ್ಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಕೂಡ ನಡೆಸಲಾಯಿತು.

ಅತಿಥಿಗಳಾಗಿ ಆಗಮಿಸಿದ ಬಿಗ್ ಬಾಸ್ ಸ್ಪರ್ಧಿಗಳಾದ ಶ್ರೀ ಧನರಾಜ್ ಮತ್ತು ಶ್ರೀ ಶಮಂತ್ ( ಬ್ರೋ ಗೌಡ) ಇವರು ಮಾತನಾಡಿಮಕ್ಕಳನ್ನು ಮನರಂಜಿಸಿದರು.

ಪತ್ರಕರ್ತರಾದ ಶ್ರೀ ನವೀನ್ ಸೂರಿಂಜೆ ಯವರು ಕೂಡ ಇಡೀ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಹಿತವಚನ ಗಳನ್ನಾಡಿದರು.

ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ನೆ ನರೇಂದ್ರಬಾಬು ಅವರು ಮುಖ್ಯ ಅತಿಥಿಯ ಭೂಮಿಕೆಯಲ್ಲಿ ಮಾತನಾಡಿ ಪಿವಿಪಿ ಶಾಲೆಯಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಸ್ಮರಿಸಿಕೊಂಡು, ಯುವವಾಹಿನಿ ಯಂತಹ ಸಂಘಟನೆಗಳುಇನ್ನೂ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ  ಬರಬೇಕೆಂದು ಪ್ರೇರೇಪಿಸಿದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷರು ನೆಲೆಯಲ್ಲಿ ಮಾತನಾಡಿದ ಶ್ರೀ ರಾಘವೇಂದ್ರ ಪೂಜಾರಿ ಅವರು ಮಕ್ಕಳ ದಿನಾಚರಣೆ ಕಾರ್ಯಕ್ರಮದಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಮರ್ಪಿಸಿದರು.

ಕಾರ್ಯಕ್ರಮದ ಗಣ್ಯ ಅತಿಥಿಗಳ ಸಾಲಿನಲ್ಲಿ ಶ್ರೀ ಪಿವಿಪಿ ಪಿಯು ಕಾಲೇಜಿನ ಪ್ರಾಂಶುಪಾಲರಾದ  ಶ್ರೀ ಪ್ರಕಾಶ್ ಎಸ್, ಯುವವಾಹಿನಿಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಅಶೋಕ್ ಕುಮಾರ್ ಪಡ್ಪು, ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಸುಧೀರ್ಪೂಜಾರಿ, ಹಾಗೂ ಯುವವಾಹಿನಿ ಬೆಂಗಳೂರು ಘಟಕದ ಸಲಹೆಗಾರರಾದ ಶ್ರೀ ರಘು ಮಟ್ಟು ಇನ್ನಿತರರು ಭಾಗವಹಿಸಿದ್ದರು.

ಎಲ್ಲಾ ಗಣ್ಯ ಅತಿಥಿಗಳಿಗೆ ಪುಸ್ತಕ ನೀಡುವ ಮೂಲಕ ಗೌರವಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯದರ್ಶಿಗಳಾದ ಶ್ರೀ ಶಶಿಧರ ಕೋಟ್ಯಾನ್ ಇವರು ಮಕ್ಕಳಿಗೆ 1098 ಮಕ್ಕಳ ಸಹಾಯವಾಣಿಯಮಾಹಿತಿಯನ್ನು ಒದಗಿಸಿಕೊಟ್ಟು ನೆರೆದ ಅತಿಥಿಗಳಿಗೆ ಹಾಗೂ ಶಾಲೆಯ ಆಡಳಿತ ವರ್ಗ, ಶಿಕ್ಷಕ ವರ್ಗಕ್ಕೆ ಮತ್ತು ಮಕ್ಕಳಿಗೆ ಹೃತ್ಪೂರ್ವಕಧನ್ಯವಾದಗಳನ್ನು ಸಮರ್ಪಿಸಿದರು.

ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು,

ಯುವವಾಹಿನಿ (ರಿ)  ಬೆಂಗಳೂರು ಘಟಕ


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »